ಕೇಂದ್ರದಿಂದ ಫೆಬ್ರವರಿ ವರೆಗಿನ ಸಬ್ಸಿಡಿ ಸೀಮೆಎಣ್ಣೆ ಬಿಡುಗಡೆ


Team Udayavani, Jan 25, 2022, 6:30 AM IST

ಕೇಂದ್ರದಿಂದ ಫೆಬ್ರವರಿ ವರೆಗಿನ ಸಬ್ಸಿಡಿ ಸೀಮೆಎಣ್ಣೆ ಬಿಡುಗಡೆ

ಕುಂದಾಪುರ: ರಾಜ್ಯದ ನಾಡದೋಣಿ ಮೀನುಗಾರರಿಗೆ ಫೆಬ್ರವರಿಗೆ ಸಿಗಬೇಕಿದ್ದ ಬಾಕಿ ಸಬ್ಸಿಡಿ ಸೀಮೆಎಣ್ಣೆಯನ್ನು ಕೇಂದ್ರ ಸರಕಾರ ಸೋಮವಾರ ಬಿಡುಗಡೆ ಮಾಡಿದೆ. ಡಿಸೆಂಬರ್‌ನಿಂದ ಮಾರ್ಚ್‌ ವರೆಗೆ 5,115 ಕಿಲೋ ಲೀ. (51.15 ದಶಲಕ್ಷ ಲೀ.) ಸಿಗಬೇಕಿದ್ದು, ಆ ಪೈಕಿ ಈಗ ಫೆಬ್ರವರಿ ವರೆಗೆ 3,540 ಕಿಲೋ ಲೀ. (35.40 ದಶಲಕ್ಷ ಲೀ.) ಬಿಡುಗಡೆಯಾಗಿದೆ.

ಬಾಕಿ ಸೀಮೆಎಣ್ಣೆ ಬಿಡುಗಡೆ ಸಂಬಂಧ ಕರಾವಳಿ ಭಾಗದ ಮೀನುಗಾರರು ಕೇಂದ್ರ ಸಚಿವೆ, ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಮನವಿ ಸಲ್ಲಿಸಿದ್ದರು. ಸಚಿವೆ ಶೋಭಾ ಅವರು ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವರ ಗಮನಕ್ಕೆ ತಂದು ತ್ವರಿತಗತಿಯಲ್ಲಿ ಹೆಚ್ಚುವರಿ ಸೀಮೆಎಣ್ಣೆ ಬಿಡುಗಡೆ ಮಾಡಿ ಮೀನುಗಾರರ ಹಿತ ಕಾಯುವಂತೆ ಮನವಿ ಮಾಡಿದ್ದರು.

3,540 ಕಿ.ಲೀ. ಬಿಡುಗಡೆ
ಶೋಭಾ ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಜ. 24ರಂದು 3,540 ಕಿಲೋ ಲೀ. ಸೀಮೆಎಣ್ಣೆಯನ್ನು ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ. ನವೆಂಬರ್‌ವರೆಗೆ ಈ ಹಿಂದೆ 7,080 ಕಿ.ಲೀ. (70.8 ದಶ ಲಕ್ಷ ಲೀ.) ಬಿಡುಗಡೆ ಮಾಡಿತ್ತು. ಈಗ 3,540 ಕಿ.ಲೀ. ಬಿಡುಗಡೆ ಮಾಡುವುದರೊಂದಿಗೆ ಡಿಸೆಂಬರ್‌, ಜನವರಿ ಹಾಗೂ ಫೆಬ್ರವರಿ ವರೆಗಿನ ಸೀಮೆಎಣ್ಣೆ ನೀಡಿದಂತಾಗಿದೆ. ಇನ್ನು ಮಾರ್ಚ್‌ ತಿಂಗಳಿನದ್ದು ಸೇರಿ ಒಟ್ಟು 1,575 ಕಿ.ಲೀ. ಸಿಗಲು ಬಾಕಿ ಇದೆ. ಕರಾವಳಿ ಜಿಲ್ಲೆಗಳಲ್ಲಿ ಸದ್ಯ ಸಬ್ಸಿಡಿ ಸೀಮೆಎಣ್ಣೆಗೆ ಅರ್ಹವಾಗಿರುವ 4,514 ದೋಣಿಗಳಿದ್ದು, 2013ರ ಆದೇಶದಂತೆ ತಲಾ 300 ಲೀ.ನಂತೆ ಮಾಸಿಕ 13.55 ದಶಲಕ್ಷ ಲೀ. ಸೀಮೆಎಣ್ಣೆ ನೀಡಲಾಗುತ್ತದೆ.

ನಾಡದೋಣಿ ಮೀನುಗಾರರ ಬೇಡಿಕೆಯನ್ನು ತ್ವರಿತವಾಗಿ ಈಡೇರಿಸಿ, ಸೀಮೆಎಣ್ಣೆ ಬಿಡುಗಡೆಗೊಳಿಸಿದ ಪ್ರಧಾನಿ ನರೇಂದ್ರ ಮೋದಿ, ಪೆಟ್ರೋಲಿಯಂ ಸಚಿವರಿಗೆ ರಾಜ್ಯದ ಪರವಾಗಿ ಧನ್ಯವಾದ.
– ಶೋಭಾ ಕರಂದ್ಲಾಜೆ, ಕೇಂದ್ರ ಸಚಿವೆ

ಮೀನುಗಾರರಿಂದ ಕೃತಜ್ಞತೆ
ರಾಜ್ಯದ ಮೀನುಗಾರರ ಬೇಡಿಕೆಗೆ ಕ್ಷಿಪ್ರಗತಿಯಲ್ಲಿ ಸ್ಪಂದಿಸಿ, ಬಾಕಿ ಸೀಮೆಎಣ್ಣೆ ಬಿಡುಗಡೆಗೆ ಬಹುಮುಖ್ಯವಾಗಿ ಶ್ರಮಿಸಿದ ಸಚಿವೆ ಶೋಭಾ ಕರಂದ್ಲಾಜೆ, ಮೀನುಗಾರಿಕಾ ಸಚಿವ ಎಸ್‌. ಅಂಗಾರ, ಕರಾವಳಿಯ ಎಲ್ಲ ಸಂಸದರು, ಶಾಸಕರಿಗೆ ಎಲ್ಲ ನಾಡದೋಣಿ ಮೀನುಗಾರರ ಪರವಾಗಿ ಕೃತಜ್ಞತೆಗಳು.
– ಆನಂದ ಖಾರ್ವಿ, ಅಧ್ಯಕ್ಷರು, ರಾಜ್ಯ ಸಾಂಪ್ರದಾಯಿಕ
ನಾಡದೋಣಿ ಮೀನುಗಾರರ ಒಕ್ಕೂಟ

ಜ. 5ರಂದು ಉದಯವಾಣಿಯಲ್ಲಿ ಪ್ರಕಟಗೊಂಡ ವರದಿ
ಕೇರಳಕ್ಕೆ ಈ ಮೊದಲೇ ಸೀಮೆಎಣ್ಣೆ ಬಿಡುಗಡೆ ಮಾಡಿದ್ದ ಕೇಂದ್ರ ಸರಕಾರವು, ರಾಜ್ಯದ ಮೀನುಗಾರರಿಗೆ ಸೀಮೆಎಣ್ಣೆ ಬಿಡುಗಡೆಗೆ ವಿಳಂಬ ನೀತಿ ಅನುಸರಿಸುತ್ತಿದ್ದ ಬಗ್ಗೆ “ಉದಯವಾಣಿ’ಯು ಜ. 5ರಂದು “ರಾಜ್ಯಕ್ಕೆ ಕೇಂದ್ರದ ಮಲತಾಯಿ ಧೋರಣೆ’ ಎನ್ನುವುದಾಗಿ ವಿಶೇಷ ವರದಿ ಪ್ರಕಟಿಸಿ, ಗಮನಸೆಳೆದಿತ್ತು.

ಟಾಪ್ ನ್ಯೂಸ್

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.