Muddebihala: ಗುತ್ತಿಗೆದಾರರ ದಿಢೀರ್ ಪ್ರತಿಭಟನೆ:ತಾ.ಪಂ ಕಚೇರಿ ಗೇಟ್‌ಗೆ ಬೀಗ ಜಡಿದು ಆಕ್ರೋಶ


Team Udayavani, Jan 19, 2024, 5:42 PM IST

TP

ಮುದ್ದೇಬಿಹಾಳ: ಮುದ್ದೇಬಿಹಾಳ ಗ್ರಾಮಂ ವ್ಯಾಪ್ತಿಯ ಉದ್ಯೋಗ ಖಾತ್ರಿ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಲು ಅಗತ್ಯವಾಗಿರುವ ಎಫ್ಟಿಪಿಯನ್ನು ಏಕಾಏಕಿ ಡಿಲೀಟ್ ಮಾಡಿರುವುದನ್ನು ಆಕ್ಷೇಪಿಸಿ ಗುತ್ತಿಗೆದಾರರು ಇಲ್ಲಿನ ತಾಪಂ ಕಚೇರಿ ಎದುರು ಮುಖ್ಯ ಗೇಟಗೆ ಬೀಗ ಜಡಿದು ದಿಢಿರ್ ಪ್ರತಿಭಟನೆ ನಡೆಸಿದರು. ಈ ಸಂದರ್ಬ ಕಚೇರಿಗೆ ಬಂದ ಸಹಾಯಕ ನಿರ್ದೇಶಕ ಖುಬಾಸಿಂಗ್ ಜಾಧವಗೆ ಘೇರಾವ್ ಹಾಕಿ ತೀವ್ರ ತರಾಟೆಗೆ ತೆಗೆದುಕೊಂಡರು. ಸಿಟ್ಟಿಗೆದ್ದ ಜಾಧವ ಪೊಲೀಸರಿಗೆ ದೂರು ಕೊಡುವುದಾಗಿ ಬೆದರಿಸಿದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಮಾತಿನ ಚಕಮಕಿ ನಡೆಯಿತು.

ಗೇಟ್ ಎದುರು ಧರಣಿ ಕುಳಿತ ಗುತ್ತಿಗೆದಾರರು ಜಿಪಂ ಸಿಇಓ, ತಾಪಂ ಇಓ, ಎಡಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ವಿಷಯ ತಿಳಿದು ಪಿಎಸೈ ಸಂಜಯ್ ತಿಪರಡ್ಡಿ ಸ್ಥಳಕ್ಕಾಗಮಿಸಿ ಬೀಗ ತೆರೆಯುವಂತೆ ಮನವೊಲಿಸುವ ಪ್ರಯತ್ನಕ್ಕೆ ಸ್ಪಂಧನೆ ಸಿಗಲಿಲ್ಲ. ಈ ವೇಳೆ ಜಿಪಂ ಸಿಇಓ, ತಾಪಂ ಇಓ ಸ್ಥಳಕ್ಕೆ ಬಂದು ಸಮಸ್ಯೆ ಬಗೆಹರಿಸಬೇಕೆಂದು ಗುತ್ತಿಗೆದಾರರು ಪಟ್ಟು ಹಿಡಿದರು. ಪಿಎಸೈ ಎಡಿ, ಇಓ ಜೊತೆ ಮಾತನಾಡಿ ಸ್ಥಳಕ್ಕೆ ಬರುವಂತೆ ತಿಳಿಸಿ ಗೇಟ್ ಬೀಗ ತೆಗೆಸಿದರು. ಸ್ಥಳೀಯ ಶಾಸಕ ಸಿ.ಎಸ್.ನಾಡಗೌಡ ಅವರು ಗುತ್ತಿಗೆದಾರರ ಬಿಲ್ ತಡೆಹಿಡಿಯದೆ ಕೊಡುವಂತೆ ತಿಳಿಸಿದ್ದರೂ ಅಧಿಕಾರಿಗಳು ಅವರ ಮಾತಿಗೂ ಕಿಮ್ಮತ್ತು ಕೊಡದೆ ಗುರುವಾರ ರಾತ್ರಿ ಎಫ್ಟಿಪಿ ಡಿಲೀಟ್ ಮಾಡಿದ್ದಾರೆ.

ಇಂದು ಶುಕ್ರವಾರ ಸಂಜೆಯೊಳಗೆ ಎಫ್ಟಿಪಿ ಅನುಮೋದನೆ ಆಗದಿದ್ದರೆ ಮತ್ತೇ ಎರಡು ವರ್ಷ ಬಿಲ್ ಸಿಗುವುದಿಲ್ಲ. ಇಂಥ ಪರಿಸ್ಥಿತಿಯಲ್ಲಿ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂದು ಗೋಳು ತೋಡಿಕೊಂಡರು. ಶನಿವಾರ ಸಂಜೆ 5 ಗಂಟೆಯೊಳಗೆ ಅನುಮೋದನೆ ಆಗದಿದ್ದರೆ ತಾಲೂಕಿನ ಎಲ್ಲ 21 ಪಂಚಾಯಿತಿ ವ್ಯಾಪ್ತಿಯ ಕೋಟ್ಯಾಂತರ ಮೊತ್ತದ ಬಿಲ್ ಬಿಡುಗಡೆ ಆಗುವುದಿಲ್ಲ‌. ಜಿಲ್ಲೆಯ ಎಲ್ಲ ತಾಲೂಕುಗಲಿಗೆ ಬಿಡುಗಡೆ ಆಗಿದೆ. ಆದರೆ ಮುದ್ದೇಬಿಹಾಳ ತಾಲೂಕಿಗೆ ಮಾತ್ರ ಈ ಸಮಸ್ಯೆ ಎದುರಾಗಿದೆ. ಎಂಐಎಸ್ ಕೋಆರ್ಡಿನೇಟರ್ ಮಲ್ಲಿಕಾರ್ಜುನ ಎಂಬಾತನ ಮೂಲಕ ಇಓ ಇದನ್ನು ಮಾಡಿಸಿದ್ದಾರೆ ಎಂದು ಗುತ್ತಿಗೆದಾರರು ಆರೋಪಿಸಿದರು. ಕಾಮಗಾರಿಗೆ ಸಾಮಗ್ರಿ ವೆಚ್ಚ ಎಫ್ & ಎಫ್ ಎಂದು ಕೊಡುತ್ತಾರೆ. ಈಗ ಡಿಲೀಟ್ ಆಗಿದ್ದು ಏನೂ ಮಾಡಲಾಗೊಲ್ಲ. ಈ ಅನುದಾನ ವರ್ಷಕ್ಕೋ, ಎರಡು ವರ್ಷಕ್ಕೋ ಒಮ್ಮೆ ಬರುತ್ತದೆ. ಈಗ ನಮ್ಮ ಗೋಳು ಯಾರಿಗೆ ಹೇಳಬೇಕು ಎಂದು ಅಳಲು ತೋಡಿಕೊಂಡರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.