ಮಗಳ ಜನ್ಮದಿನಕ್ಕೆ ಕಿಚ್ಚನ ಭಾವನಾತ್ಮಕ ಪತ್ರ


Team Udayavani, May 21, 2020, 4:28 AM IST

Sudeep Dughter

ಆಸೆಬುರುಕ ಅಪ್ಪನಿಗಾಗಿ ಮತ್ತೆ ಮಗುವಾಗು ನೀನು ಎಂದು ವಿಶೇಷ ಬೇಡಿಕೆ ಇಡುವ ಮೂಲಕ ಕಿಚ್ಚ ಸುದೀಪ್‌ ಅವರು ತಮ್ಮ ಮುದ್ದು ಮಗಳಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಕಿಚ್ಚ ಸುದೀಪ್‌ ಅವರ ಮಗಳು ಸಾನ್ವಿ ಸುದೀಪ್‌ಗೆ  ಬುಧುವಾರ 16ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಈ ವೇಳೆ ಮಗಳಿಗಾಗಿ, ಸ್ಪೆಷಲ್‌ ವಿಶ್‌ ಮಾಡಿರುವ ಕಿಚ್ಚ ಸುದೀಪ್‌, ಎದೆಯೆತ್ತರ ಬೆಳದಿರೋ ಕನಸು ನೀನು ಎಂದು ಮಗಳನ್ನು ಭಾವನಾತ್ಮಕವಾಗಿ ಬಣ್ಣಿಸಿದ್ದಾರೆ.

ಮಗಳ  ಹುಟ್ಟುಹಬ್ಬದ ವಿಚಾರವಾಗಿ ಟ್ವೀಟ್‌ ಮಾಡಿರುವ ಕಿಚ್ಚ ಸುದೀಪ್‌ ಅವರು, ನಿನ್ನೆ ಮೊನ್ನೆ ಇದ್ದ ಹಾಗಿದೆ. ಹೇಗಪ್ಪಾ ನಂಬೋದು ನನ್ನ ಮಗಳಿಗೀಗ ಹದಿನಾರು ವರುಷ. ನೀ ಇಟ್ಟ ಅಂಬೆಗಾಲು, ಮುದ್ದಾದ ಮೊದಲುಗಳು, ಕೂಡಿಟ್ಟಿರುವೆ  ನಾ ಒಂದೊಂದು ನಿಮಿಷ. ಎದೆಯೆತ್ತರ ಬೆಳೆದಿರೋ ಕನಸು ನೀನು. ನಿನ್ನಿಂದಲೇ ಕಲಿಯುವ ಕೂಸು ನಾನು. ಆಸೆಬುರುಕ ಅಪ್ಪ ನಾನು ಮತ್ತೆ ಮಗುವಾಗು ನೀನು ಎಂದು ಬರೆದು ಮಗಳ ಸವಿನೆನಪಿನ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಕಿಚ್ಚ ಸುದೀಪ್‌ ಅವರ ಮಗಳ ಹುಟ್ಟುಹಬ್ಬಕ್ಕೆ ಅವರ ಅಭಿಮಾನಿಗಳು ಕೂಡ ವಿಶ್‌ ಮಾಡುತ್ತಿದ್ದು, ಕಿಚ್ಚ ಸುದೀಪ್‌ ಅವರ ಪತ್ನಿ ಪ್ರಿಯಾ ಮತ್ತು ಮಗಳು ಸಾನ್ವಿ ಇರುವ ಫೋಟೋವನ್ನು ಕಾಮನ್‌ ಡಿಪಿ ಆಗಿ ಬಳಸಿ  ಶುಭ ಕೋರುತ್ತಿದ್ದಾರೆ. ಕಿಚ್ಚ ಸುದೀಪ್‌ ಅವರು ಮಗಳ ಹುಟ್ಟುಹಬ್ಬದ ಬಗ್ಗೆ ಟ್ವೀಟ್‌ ಮಾಡುತ್ತಿದ್ದಂತೆ ಅವರ ಅಭಿಮಾನಿಗಳು ಕೂಡ ಕಮೆಂಟ್‌ ಮಾಡಿದ್ದು, ತನ್ನ ನೆಚ್ಚಿನ ನಟನ ಮಗಳಿಗೆ ಶುಭಾಶಯ ತಿಳಿಸಿ ಹರಸಿದ್ದಾರೆ.

2001 ಅಕ್ಟೋಬರ್‌  18ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟ ಸುದೀಪ್‌ ಮತ್ತು ಪ್ರಿಯಾ ದಂಪತಿಗೆ ಮದುವೆಯಾದ ಮೂರು ವರ್ಷದ ನಂತರ, 2004 ಮೇ 20ರಂದು ಹೆಣ್ಣು ಮಗು ಸಾನ್ವಿ ಜನಿಸಿರುತ್ತಾರೆ. ಸಾನ್ವಿ ಹುಟ್ಟಿದಾಗ ಚಿತ್ರರಂಗದಲ್ಲಿ  ಆಗ ತಾನೇ  ಗುರುತಿಸಿಕೊಳ್ಳುತ್ತಿದ್ದ ಸುದೀಪ್‌ , ಈಗ ಭಾರತದ ಚಿತ್ರರಂಗದಲ್ಲಿ ಬಹು ಬೇಡಿಕೆಯ ಸ್ಟಾರ್‌ ನಟನಾಗಿ ಬೆಳೆದು ನಿಂತಿದ್ದಾರೆ.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.