ಸಮಸ್ಯೆಯ ಸುಳಿಯಲ್ಲಿ ಕಬ್ಬು ಬೆಳೆಗಾರರು ; ಭೂಮಿ ತೇವಾಂಶ ಅಧಿಕ ಸಾಗಣೆ ವೆಚ್ಚ ಹೆಚ್ಚು


Team Udayavani, Dec 13, 2021, 4:24 PM IST

ಸಮಸ್ಯೆಯ ಸುಳಿಯಲ್ಲಿ ಕಬ್ಬು ಬೆಳೆಗಾರರು ; ಭೂಮಿ ತೇವಾಂಶ ಅಧಿಕ ಸಾಗಣೆ ವೆಚ್ಚ ಹೆಚ್ಚು

ಹೊಸಪೇಟೆ: ಸಕಾಲಕ್ಕೆ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಣಿಕೆಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ತಾಲೂಕಿನ ಕಬ್ಬು ಬೆಳೆಗಾರರಿಗೆ ಸಂಕಷ್ಟ ಎದುರಾಗಿದ್ದು ಸಮಸ್ಯೆ ಸುಳಿಯಲ್ಲಿ ಸಿಲುಕಿದ್ದಾರೆ.
ಕಬ್ಬು ಖರೀದಿಗೆ ರೈತರ ಬಳಿ ಸಕ್ಕರೆ ಕಾರ್ಖಾನೆ ಅಧಿಕಾರಿಗಳು ಮೀನಮೇಷ ಎಣಿಸುತ್ತಿರುವುದರಿಂದ ಆಕಾಶದತ್ತೆರಕ್ಕೆ ಬೆಳೆದ ನಿಂತು ಕಬ್ಬಿನ ಇಳುವರಿ ಕುಂಠಿತವಾಗಿ ಕೈಬಂದ ತುತ್ತು ಬಾಯಿಗೆ ಬರದಂತಾಗಿದೆ.

ತಾಲೂಕಿನಲ್ಲಿ 4 ಲಕ್ಷಕ್ಕೂ ಅಧಿಕ ಟನ್‌ನಷ್ಟು ಬೆಳೆದ ಕಬ್ಬು ಸೂಲಿಂಗ ಹೊಡೆದಿದ್ದು, ಕಬ್ಬಿನ ತೂಕ ಕಡಿಮೆಯಾಗಿ ರೈತರು ಸಾಲದ ಸುಳಿಯಲ್ಲಿ ಸಿಲುಕುವಂತಾಗಿದ್ದಾರೆ. ಇತ್ತೀಚಿಗೆ ಸುರಿದ ಅಕಾಲಿಕ ಮಳೆಗೆ ಭೂಮಿಯಲ್ಲಿ ತೇವಾಂಶ ಅಧಿಕಗೊಂಡು ಕಬ್ಬು ಕಟಾವ್‌ ಮಾಡಿ ಹೊರ ಸಾಗಿಸಲು ರೈತರಿಗೆ ಹೆಚ್ಚು ನಿರ್ವಹಣೆ ವೆಚ್ಚ ತಗಲಿದೆ. ಇದರಿಂದಾಗಿ ರೈತರಿಗೆ ಸಂಕಷ್ಟಕ್ಕೆ ಗುರಿಯಾಗಲಿದ್ದಾರೆ.

ರೈತರ ಬಳಿ ಸುಳಿಯದ ಕಾರ್ಖಾನೆ: ಈ ಭಾಗದಲ್ಲಿ ಪ್ರತಿವರ್ಷ ಅಕ್ಟೋಬರ್‌ ತಿಂಗಳಲ್ಲಿ ಕಬ್ಬು ಖರೀದಿಗೆ ಆಗಮಿಸುವ ಮೈಲಾರ, ಶಾಮನೂರು ಶುಗರ್ (ದುಗತ್ತಿ), ಮುಂಡ್ರಗಿ ಸಕ್ಕರೆ ಕಾರ್ಖಾನೆ ಅಧಿಕಾರಿಗಳು ಡಿಸೆಂಬರ್‌ ಕಳೆಯುತ್ತ ಬಂದಿದ್ದರೂ ಇನ್ನೂ ಕಬ್ಬು ಬೆಳೆಗಾರರ ಬಳಿ ಸುಳಿದಿರಿವುದು ಈ ಭಾಗದ ರೈತರ ಆತಂಕಕ್ಕೆ ಕಾರಣವಾಗಿದೆ.

ಕಾರ್ಖಾನೆ ಆಡಳಿತ ಮಂಡಳಿ ಹಾಗೂ ರೈತರೊಂದಿಗೆ ನಡುವೆ ಆದ ಒಪ್ಪಂದಂತೆ ಪ್ರತಿ ಟನ್‌ ಕಬ್ಬಿಗೆ 2150 ರೂ ನಿಗದಿಪಡಿಸಲಾಗಿದೆ. ಟನ್‌ ಕಬ್ಬು ಕಟಾವಿಗಾಗಿ ಕಾರ್ಖಾನೆಯವರು ಕೃಷಿ ಕಾರ್ಮಿಕರಿಗೆ 350 ರೂ. ಇಂದ 400 ರೂವರೆಗೆ ಕೊಟ್ಟರೂ ರೈತರಲ್ಲಿ 300-400 ರೂ ಹಣವನ್ನು ಹೆಚ್ಚುವರಿಯಾಗಿ ಪಡೆಯುತ್ತಿದ್ದಾರೆ. ಒಂದೊಮ್ಮೆ ರೈತರು ಹೆಚ್ಚುವರಿ ಹಣ ನೀಡಲು ನಿರಾಕರಿಸಿದರೆ ಕಬ್ಬು ಕಟಾವ್‌ ನಿಲ್ಲಿಸುತ್ತಾರೆ. ಅಲ್ಲದೆ, ಚಾಲಕರಿಗೆ 500ರಿಂದ 700 ವರೆಗೆ ಚಾಲಕರಿಗೆ ಬಾಟ ನೀಡಬೇಕಿದೆ. ಇದು ರೈತರಿಗೆ ಆರ್ಥಿಕ ವೆಚ್ಚದ ಜೊತೆಯಲ್ಲಿ ಆತಂಕಕ್ಕೂ ಕಾರಣವಾಗಿದೆ. ಈ ಭಾಗದ ಕಬ್ಬು ಬೆಳೆಗಾರರ ಅನುಕೂಲವಾಗಿದ್ದ ಆರೇಳು ದಶಕಗಳ ಕಾರ್ಖಾನೆ, ಸ್ಥಗಿತಗೊಂಡು ಆರು ವರ್ಷ ಕಳೆದಿವೆ. ಇದರಿಂದಾಗಿ ಕಬ್ಬು ಬೆಳೆದ ರೈತರು, ಹೊರ
ಜಿಲ್ಲೆಗಳ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸಲು ಹೆಣಗಾಡುತ್ತಿದ್ದಾರೆ.

ಇದನ್ನೂ ಓದಿ : ಹೂಡಿಕೆದಾರರಿಗೆ ನಷ್ಟ: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 503 ಅಂಕ ಇಳಿಕೆ, ನಿಫ್ಟಿಯೂ ಕುಸಿತ

ಇಷ್ಟೆಲ್ಲ ಕಬ್ಬು ಬೆಳೆಗಾರರು ತಾಪತ್ರೆ ಪಡುತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್‌ ಅವರಾಗಲಿ ಅಥಾವ ಜಿಲ್ಲಾಡಳಿತವಾಗಲಿ ಇತ್ತ ಗಮನ ಹರಿಸುದಿರುವುದು ರೈತರ ಆಕ್ರೋಶಕ್ಕೆ
ಕಾರಣವಾಗಿದೆ. ಕೂಡಲೇ ಜಿಲ್ಲಾ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶಿಸಿ ಕಬ್ಬು ಕಟಾವಿಗೆ ದರ ನಿಗದಿಪಡಿಸಬೇಕು. ತಕ್ಷಣವೇ ರೈತರ ಕಬ್ಬನ್ನು ದೂರದ ಕಾರ್ಖಾನೆಗಳಿಗೆ ಸಾಗಿಸಲು ಅನುವು ಮಾಡಿಕೊಡಬೇಕು ಎಂಬುದು ಈ ಭಾಗದ ರೈತಾಪಿವರ್ಗದ ಒತ್ತಾಸೆಯಾಗಿದೆ.

ಕಾರ್ಖಾನೆ ಆಡಳಿತ ಮಂಡಳಿ ಹಾಗೂ ರೈತರೊಂದಿಗೆ ನಡುವೆ ಆದ ಒಪ್ಪಂದಂತೆ ಪ್ರತಿ ಟನ್‌ ಕಬ್ಬಿಗೆ 2150 ರೂವನ್ನು ನಿಗದಿಪಡಿಸಲಾಗಿದೆ. ಟನ್‌ ಕಬ್ಬು ಕಟಾವಿಗಾಗಿ ಕಾರ್ಖಾನೆಯವರು ಕೃಷಿ ಕಾರ್ಮಿಕರಿಗೆ 350 ರೂದಿಂದ 400 ರೂವರೆಗೆ ಕೊಟ್ಟರೂ ರೈತರಲ್ಲಿ 300-400 ರೂ ಹಣವನ್ನು ಹೆಚ್ಚುವರಿಯಾಗಿ ಪಡೆಯುತ್ತಿದ್ದಾರೆ. ಒಂದೊಮ್ಮೆ ರೈತರು ಹೆಚ್ಚುವರಿ ಹಣ ನೀಡಲು ನಿರಾಕರಿಸಿದರೆ, ಕಬ್ಬು ಕಟಾವ್‌ ನಿಲ್ಲಿಸುತ್ತಾರೆ.
∙ ತಾರಿಹಳ್ಳಿ ಗಾಳೆಪ್ಪ,ಕಬ್ಬು ಬೆಳೆಗಾರ ಹೊಸಪೇಟ

ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್‌ ಅವರಾಗಲಿ ಅಥವಾ ಜಿಲ್ಲಾಡಳಿತವಾಗಲಿ ಇತ್ತ ಗಮನ ಹರಿಸದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಕೂಡಲೇ ಜಿಲ್ಲಾ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಕಬ್ಬು ಕಟಾವಿಗೆ ದರ ನಿಗದಿಪಡಿಸಬೇಕು. ತಕ್ಷಣವೇ ರೈತರ ಕಬ್ಬನ್ನು ದೂರದ ಕಾರ್ಖಾನೆಗಳಿಗೆ ಸಾಗಿಸಲು ಅನುವು ಮಾಡಿಕೊಡಬೇಕು.
∙ಕಟಗಿ ಕರಿಹನುಮಂತ, ಪ್ರಾಂತ ರೈತ ಸಂಘದ ತಾಲೂಕು ಅಧ್ಯಕ್ಷರು, ಹೊಸಪೇಟೆ

ಟಾಪ್ ನ್ಯೂಸ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.