LET: ಕರ್ನಾಟಕದಲ್ಲಿಆತ್ಮಾಹುತಿ ಸಂಚು: ಚಾರ್ಜ್ಶೀಟ್ ಸಲ್ಲಿಕೆ
ಕರ್ನಾಟಕದಲ್ಲಿ ಸಂಚು ರೂಪಿಸಿದ್ದ 8 ಲಷ್ಕರ್ ಉಗ್ರರ ವಿರುದ್ಧ ಆರೋಪ ಪಟ್ಟಿ
Team Udayavani, Jan 13, 2024, 12:36 AM IST
ಹೊಸದಿಲ್ಲಿ: ಉಗ್ರ ಸಂಘಟನೆ ಲಷ್ಕರೆ ತಯ್ಯಬಾ (ಎಲ್ಇಟಿ)ದಿಂದ ಕರ್ನಾಟಕದಲ್ಲಿ ಆತ್ಮಾಹುತಿ ದಾಳಿ ನಡೆಸಲು ಸಂಚು ಹಾಗೂ ಜೈಲಿನಲ್ಲೇ ಕುಳಿತು ಭಯೋತ್ಪಾದನೆ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡಿದ ಆರೋಪದ ಮೇರೆಗೆ ಎಂಟು ಮಂದಿ ಉಗ್ರರ ವಿರುದ್ಧ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಶುಕ್ರವಾರ ಆರೋಪ ಪಟ್ಟಿ ದಾಖಲಿಸಿದೆ.
ಈ ಎಂಟು ಮಂದಿ ಪೈಕಿ ಉಗ್ರರಾದ ಜುನೈದ್ ಅಹ್ಮದ್ ಅಲಿಯಾಸ್ ಜೆಡಿ ಮತ್ತು ಸಲ್ಮಾನ್ ಖಾನ್ ತಲೆಮರೆಸಿಕೊಂಡಿದ್ದಾರೆ. ಇಬ್ಬರು ವಿದೇಶಕ್ಕೆ ಪರಾರಿ ಯಾಗಿರುವ ಶಂಕೆ ಇದೆ. ಉಳಿದಂತೆ, ಹಲವು ಬಾಂಬ್ ಸ್ಫೋಟ್ ಪ್ರಕರಣದಲ್ಲಿ ಭಾಗಿಯಾಗಿರುವ ಕೇರಳದ ಕಣ್ಣೂರಿನ ಟಿ.ನಸೀರ್ ಜೀವಾವಧಿ ಶಿಕ್ಷೆಗೆ ಒಳಗಾಗಿ 2013ರಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ. ಜತೆಗೆ ಆರೋಪಿಗಳಾದ ಸಯದ್ ಸುಹೇಲ್ ಖಾನ್, ಮೊಹಮ್ಮದ್ ಉಮರ್, ಜಯೀದ್ ತಬ್ರೇಜ್, ಸಯದ್ ಮುದಾಸ್ಸಿರ್ ಪಾಷಾ ಮತ್ತು ಮೊಹಮ್ಮದ್ ಫೈಸಲ್ ರಬ್ಟಾನಿ ಅಲಿಯಾಸ್ ಸದತ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಕಳೆದ ವರ್ಷ ಜುಲೈನಲ್ಲಿ ಈ ಉಗ್ರರ ಅಡ್ಡೆ ಮೇಲೆ ದಾಳಿ ನಡೆಸಿದ್ದ ಬೆಂಗಳೂರು ನಗರ ಪೊಲೀಸರು, ಶಸ್ತ್ರಾಸ್ತ್ರಗಳು, ಮದ್ದು- ಗುಂಡುಗಳು, ಹ್ಯಾಂಡ್ ಗ್ರೆನೇಡ್ಗಳು ಮತ್ತು ವಾಕಿ-ಟಾಕಿಗಳನ್ನು ವಶಪಡಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು