![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ
Team Udayavani, May 25, 2024, 12:18 AM IST
![Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ](https://www.udayavani.com/wp-content/uploads/2024/05/DAM-1-620x385.jpg)
ಸುಳ್ಯ: ಸುಳ್ಯದ ಕಲ್ಲುಮುಟ್ಲು ಡ್ಯಾಂನ ಗೇಟ್ ತೆರವು ಮಾಡಿ ನೀರು ಹೊರಕ್ಕೆ ಬಿಟ್ಟ ಪರಿಣಾಮ ಹೀರು ಸಂಗ್ರಹಗೊಂಡಿದ್ದ ಡ್ಯಾಂ ಮೇಲ್ಭಾಗದಲ್ಲಿ ಮಣ್ಣು ಕುಸಿತಗೊಂಡ ಘಟನೆ ಸಂಭವಿಸಿದೆ.
ಬೇಸಗೆಯಲ್ಲಿ ಡ್ಯಾಂ ಗೇಟ್ ಅಳವಡಿಸಿದ್ದರಿಂದ ಅಣೆಕಟ್ಟಿನಲ್ಲಿ ಸುಮಾರು 10-15 ಅಡಿ ಎತ್ತರದಲ್ಲಿ ನೀರು ಸಂಗ್ರಹಗೊಂಡು ಎರಡು ಭಾಗದಲ್ಲಿ ಕೃಷಿ ತೋಟಗಳು ಕಳೆದ 6 ತಿಂಗಳ ಕಾಲ ಪೂರ್ಣ ಪ್ರಮಾಣದಲ್ಲಿ ಜಲಾವೃತಗೊಂಡಿದ್ದವು.
ಡ್ಯಾಂನಲ್ಲಿ ನೀರು ಶೇಖರಣೆಯಿಂದ ಸುಳ್ಯ ನಗರ ನಿವಾಸಿಗಳಿಗೆ ಹಾಗೂ ನದಿಯ ಆಸು-ಪಾಸಿನ ಕೃಷಿಕ ರಿಗೂ ಪ್ರಯೋಜನವಾಗಿತ್ತು. ನಾಗಪಟ್ಟಣ ದಿಂದ ಮೇಲೆ ಅರಂಬೂರು ಪೆರಾಜೆ ವರೆಗೆ ನೀರು ಸಂಗ್ರಹಗೊಂಡು ನದಿ ಬದಿಯ ತೋಟಗಳು ಜಲಾವೃತ ಗೊಂಡಿದ್ದವು ಎನ್ನುತ್ತಾರೆ ಕೃಷಿಕರು.
ನದಿ ಬದಿಯ ಮಣ್ಣು ಕುಸಿತಇದೀಗ ನಿರಂತರ ಮಳೆ ಹಿನ್ನೆಲೆಯಲ್ಲಿ ನದಿಯಲ್ಲಿ ನೀರಿನ ಹರಿವು ಹೆಚ್ಚಳಗೊಂಡಿದ್ದರಿಂದ ಡ್ಯಾಂ ಗೇಟ್ ತೆರವು ಮಾಡಿ ನೀರು ಹೊರಕ್ಕೆ ಬಿಡಲಾಗಿದೆ. ಪರಿಣಾಮ ನದಿ ಬದಿಯಲ್ಲಿ ಮಣ್ಣು ಕುಸಿತಗೊಳ್ಳುತ್ತಿದ್ದು, ನದಿ ಬದಿಯ ಮಣ್ಣು ಮರ ಸಮೇತ ನದಿಗೆ ಬೀಳುತ್ತಿದೆ. ಜತೆಗೆ ಕೆಲವೆಡೆ ಕೃಷಿ ಬೆಳೆಗಳು ನದಿಗುರುಳುತ್ತಿರುವ ಘಟನೆ ಸಂಭವಿಸುತ್ತಿವೆ. ಮಳೆಗಾಲದಲ್ಲಿ ಹೆಚ್ಚಿನ ಮಳೆಗೆ ಇನ್ನಷ್ಟು ಕುಸಿತ ಸಂಭವಿಸುವ ಮೊದಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.