ಸುಳ್ಯ ನಗರ ಪಂಚಾಯತ್‌ಗೆ ಜಿಲ್ಲಾಧಿಕಾರಿ ಭೇಟಿ : ಕಚೇರಿ ಅವ್ಯವಸ್ಥೆ, ತರಾಟೆ


Team Udayavani, Jan 15, 2022, 12:53 PM IST

ಸುಳ್ಯ ನಗರ ಪಂಚಾಯತ್‌ಗೆ ಜಿಲ್ಲಾಧಿಕಾರಿ ಭೇಟಿ : ಕಚೇರಿ ಅವ್ಯವಸ್ಥೆ, ತರಾಟೆ

ಸುಳ್ಯ: ಇಲ್ಲಿನ ನಗರ ಪಂಚಾಯತ್‌ಗೆ ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿ ಕಚೇರಿಯ ಅವ್ಯವಸ್ಥೆಯ ಬಗ್ಗೆ ಗರಂ ಆದ ಘಟನೆ ನಡೆದಿದೆ.

ನಗರ ಪಂಚಾಯತ್‌ ಕಚೇರಿಯ ಅವ್ಯವಸ್ಥೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ನಗರ ಪಂಚಾ ಯತ್‌ ಮುಖ್ಯಾಧಿಕಾರಿ, ಎಂಜಿನಿಯರ್‌, ಆರೋಗ್ಯಾಧಿಕಾರಿ ಸೇರಿದಂತೆ ಅಧಿಕಾರಿ ಹಾಗೂ ಸಿಬಂದಿಯನ್ನು ತರಾಟೆ ಗೆತ್ತಿಕೊಂಡರು. ಟೇಬಲ್‌ಗ‌ಳಲ್ಲಿ ಕಡತಗಳು ರಾಶಿ ಬಿದ್ದದ್ದನ್ನು ಕಂಡು ಪ್ರಶ್ನಿಸಿದರು.

ನಗರ ಪಂಚಾಯತ್‌ ಅವರಣದ ಬಳಿ ಇದ್ದ ಕಸದ ರಾಶಿಯ ಬಗ್ಗೆ ನಗರ ಪಂಚಾಯತ್‌ ಆಡಳಿತದಿಂದ ಮಾಹಿತಿ ಪಡೆದುಕೊಂಡರು. ಜಿಲ್ಲಾಧಿಕಾರಿ ಪ್ರಶ್ನೆಗಳಿಗೆ ಅಧಿಕಾರಿಗಳು, ಸಿಬಂದಿಯಿಂದ ಸಮರ್ಪಕ ಉತ್ತರ ನೀಡಲು ಸಾಧ್ಯವಾಗದೆ ಇದ್ದಾಗ ತರಾಟಗೆ ತೆಗೆದುಕೊಂಡ ಡಿಸಿ ಸಾರ್ವಜನಿಕರಿಂದಲೂ ಕೆಲವು ದೂರು ಗಳನ್ನು ಆಲಿಸಿ ನ.ಪಂ. ಆಡಳಿತಕ್ಕೆ ಬಿಸಿ ಮುಟ್ಟಿಸಿದರು. ಬಳಿಕ ಜನ ಪ್ರತಿನಿಧಿ ಹಾಗೂ ಅಧಿಕಾರಿಗಳ ಸಭೆ ನಡೆಸಿದರು.

ಸಚಿವರ ಸೂಚನೆ ಮೇರೆಗೆ ಪರಿಶೀಲನೆ
ಪ್ರಗತಿ ಪರಿಶೀಲನೆ ಸಭೆ ನಡೆಸಿದ ಬಳಿಕ ಮಾತನಾಡಿದ ಡಾ| ರಾಜೇಂದ್ರ ಕೆ.ವಿ., ಜನಪ್ರತಿನಿಧಿಗಳು ಮತ್ತಿತರ ದೂರಿನ ಹಿನ್ನೆಲೆಯಲ್ಲಿ ಸಚಿವರ ಸೂಚನೆಯ ಮೇರೆಗೆ ನಗರ ಪಂಚಾಯತ್‌ಗೆ ಆಗಮಿಸಿ ಪರಿಶೀಲನೆ ನಡೆಸಲಾಗಿದೆ. ಅಧಿಕಾರಿಗಳ ಮಧ್ಯೆ ಸಮನ್ವಯದ ಕೊರತೆ ಕಂಡು ಬಂದಿದೆ. ಮುಖ್ಯಾಧಿಕಾರಿ, ಎಂಜಿನಿಯರ್‌, ಆರೋಗ್ಯಾಧಿಕಾರಿ ಸೇರಿ ದಂತೆ ಅಧಿಕಾರಿಗಳ ಕೆಲಸ ಕಾರ್ಯ ಗಳ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಯೋಜನಾ ನಿರ್ದೇಶಕರಿಗೆ ಸೂಚಿಸಲಾಗಿದೆ. ವರದಿ ದೊರೆತ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಮುಂದಿನ ತಿಂಗಳು ಮತ್ತೆ ಆಗಮಿಸಿ ನಗರ ಪಂಚಾಯತ್‌ನ ಕೆಲಸ ಕಾರ್ಯಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ನಗರ ಪಂಚಾಯತ್‌ ಅಧ್ಯಕ್ಷ ವಿನಯ ಕುಮಾರ್‌ ಕಂದಡ್ಕ, ತಹಶೀಲ್ದಾರ್‌ ಅನಿತಾಲಕ್ಷ್ಮೀ, ನಗರ ಕೋಶ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್‌, ಕಂದಾಯ ಅಧಿಕಾರಿ ಕೊರಗಪ್ಪ ಹೆಗ್ಡೆ, ಸಹಾಯಕ ಕಾರ್ಯಪಾಲಕ ಅಭಿಯಂತ ಅರುಣ್‌ ಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

ವರದಿ ನೀಡಲು ಸೂಚನೆ
ನಗರ ಪಂಚಾಯತ್‌ನಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳ ಕಾರ್ಯ ವೈಖರಿಯ ಬಗ್ಗೆ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿ ಕೂಡಲೇ ವರದಿ ನೀಡುವಂತೆ ಜಿಲ್ಲಾ ಯೋಜನಾ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದು ಡಾ| ರಾಜೇಂದ್ರ ಕೆ.ವಿ. ತಿಳಿಸಿದರು.

ಟಾಪ್ ನ್ಯೂಸ್

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.