ಪೂರ್ಣಗೊಳ್ಳದ ಜಲಸಿರಿ ನಗರಕ್ಕೆ ಬೇಸಗೆಯ ಚಿಂತೆ


Team Udayavani, Sep 27, 2021, 5:01 AM IST

ಪೂರ್ಣಗೊಳ್ಳದ ಜಲಸಿರಿ ನಗರಕ್ಕೆ ಬೇಸಗೆಯ ಚಿಂತೆ

ಸಾಂದರ್ಭಿಕ ಚಿತ್ರ.

ಮಳೆಯ ಅಬ್ಬರ ಇಳಿಮುಖಗೊಂಡು ಬೇಸಗೆಯ ಬಿಸಿ ನಿಧಾನವಾಗಿ ಆವರಿಸುತ್ತಿದೆ. ಇದರರ್ಥ ನದಿ, ತೋಡು, ಕೆರೆ, ಬಾವಿಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿ ದಿನ ಬಳಕೆಯ ನೀರಿಗಾಗಿ ಎಚ್ಚೆತ್ತುಕೊಳ್ಳಬೇಕು ಎಂಬ ಸಂದೇಶವದು. ಪುತ್ತೂರು ನಗರದಲ್ಲಿ ನೀರಿನ ಬರ ಬಾರದ ಹಾಗೆ ಎರಡು ವರ್ಷದ ಹಿಂದೆ ಪ್ರಾರಂಭಗೊಂಡಿರುವ ಜಲಸಿರಿ ಯೋಜನೆ ಕಾಮಗಾರಿ ವೇಗ ಪಡೆದುಕೊಳ್ಳದಿರುವುದು ಈ ಬೇಸಗೆಯಲ್ಲೂ ನೀರಿನ ಕೊರತೆ ಎದುರಿಸುವ ಆತಂಕಕ್ಕೆ ಕಾರಣವಾಗಿದೆ.

ಸುಮಾರು 31 ವಾರ್ಡ್‌ಗಳನ್ನು ಹೊಂದಿರುವ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ 60 ಸಾವಿರಕ್ಕೂ ಅಧಿಕ ಜನಸಂಖ್ಯೆ ಇದೆ. ನಗರಕ್ಕೆ ವರ್ಷವಿಡೀ ಉಪ್ಪಿನಂಗಡಿಯ ಕುಮಾರಧಾರಾ ನದಿ ನೀರೇ ಪ್ರಮುಖ ಆಧಾರ. ಕೊಳಬೆಬಾವಿ ಕೈ ಕೊಟ್ಟರೆ ನದಿ ನೀರನ್ನೇ ನಂಬಿರುವ ನಗರದಲ್ಲಿ ನೀರಿನ ಬವಣೆಯನ್ನು ಶಾಶ್ವತವಾಗಿ ನೀಗಿಸುವ ನಿಟ್ಟಿನಲ್ಲಿ 113 ಕೋಟಿ ರೂಪಾಯಿ ವೆಚ್ಚದಲ್ಲಿ ನಿರಂತರ ನೀರು ಸರಬರಾಜು ಮಾಡುವ
ಜಲಸಿರಿ ಯೋಜನೆ ಅನುಷ್ಠಾನಕ್ಕೆ ಚಾಲನೆ ನೀಡಲಾಗಿತ್ತು. ಆದರೆ ಎರಡು ವರ್ಷ ಕಳೆದರೂ ಕಾಮಗಾರಿ ಶೇ.50ರಷ್ಟು ಕೂಡ ಪೂರ್ಣಗೊಂಡಿಲ್ಲ.

71.46 ಕೋಟಿ ರೂ. ಕಾಮಗಾರಿ ವೆಚ್ಚ ಮತ್ತು 41.62 ಕೋಟಿ ರೂ. 8 ವರ್ಷದ ನಿರ್ವಹಣ ವೆಚ್ಚವಿದ್ದು 2020ರ ಡಿಸೆಂಬರ್‌ ಒಳಗಾಗಿ ಯೋಜನೆ ಪೂರ್ಣಗೊಳ್ಳಲಿದೆ ಎಂದು ನಗರಸಭೆ ಹೇಳಿದ್ದರೂ 2021 ಮುಗಿಯುವ ಹಂತಕ್ಕೆ ಬಂದರೂ ಕಾಮಗಾರಿ ಗುರಿ ತಲುಪುವ ಲಕ್ಷಣ ಕಂಡು ಬಂದಿಲ್ಲ. ಗುತ್ತಿಗೆ ಸಂಸ್ಥೆಯ ಕೋರಿಕೆಯ ಮೇರೆಗೆ 2022 ಜನವರಿಗೆ ಗಡುವು ನೀಡಿದ್ದರೂ ಆ ಅವಧಿಗೂ ಪೂರ್ಣಗೊಳ್ಳುವುದು ಅನುಮಾನ ಎನ್ನುತ್ತಿದೆ ಸದ್ಯದ ಚಿತ್ರಣ.

ಇದನ್ನೂ ಓದಿ:ಕೋವಿಡ್ : ರಾಜ್ಯದಲ್ಲಿಂದು 775 ಪ್ರಕರಣ| 860 ಸೋಂಕಿತರು ಗುಣಮುಖ

ಜಲಸಿರಿ ಯೋಜನೆಯಲ್ಲಿ ಹೆಚ್ಚುವರಿ ಸಾಮರ್ಥ್ಯದ ಯಂತ್ರ ಬಳಸಿ ನೆಕ್ಕಿಲಾಡಿ ಅಣೆಕಟ್ಟಿನಿಂದ ಎತ್ತಲಾಗುವ ನೀರನ್ನು ರೇಚಕ ಸ್ಥಾವರದಲ್ಲಿ ಶುದ್ಧೀಕರಿಸಿ ನಗರಕ್ಕೆ ಪೂರೈಸುವುದಾಗಿದೆ. ನೆಕ್ಕಿಲಾಡಿಯಿಂದ ಎಕ್ಸ್‌ಪ್ರೆಸ್‌ ಫೀಡರ್‌ನ ವಿದ್ಯುತ್‌ ಬಳಸಿ ನೀರು ಸರಬರಾಜು ಮಾಡುವುದು, ಬಳಿಕ ನಗರ ವ್ಯಾಪ್ತಿಯೊಳಗೆ ವಿದ್ಯುತ್‌ ಬಳಸದೆ ಭೌಗೋಳಿಕವಾದ ಇಳಿಜಾರನ್ನು ಬಳಸಿ ನಳ್ಳಿ ಮೂಲಕ ನೀರು ಸಂಪರ್ಕಿಸುವುದು ಯೋಜನೆಯ ಮುಖ್ಯಾಂಶ. ಪ್ರಸ್ತುತ ನೀರು ಸಂಗ್ರಹಕ್ಕೆ ನಗರದೊಳಗೆ 4 ಓವರ್‌ಹೆಡ್‌ ಟ್ಯಾಂಕ್‌ ನಿರ್ಮಾಣ ಹಂತದಲ್ಲಿದ್ದು ಎರಡು ಮಾತ್ರ ಪೂರ್ಣಗೊಂಡಿದೆ. ಉಳಿದ ಎರಡು ಇನ್ನೂ ಅಡಿಪಾಯ ಹಂತದಲ್ಲೇ ಇದೆ.

ಪೈಪ್‌ಲೈನ್‌ ಕಾಮಗಾರಿ 2020ರ ಫೆಬ್ರವರಿ ವೇಳೆಗೆ ಪೂರ್ಣಗೊಳ್ಳಬೇಕಿತ್ತು. ಆದರೆ ಕೋವಿಡ್‌ ಲಾಕ್‌ಡೌನ್‌, ಕಾರ್ಮಿಕರ ಕೊರತೆ ಇತ್ಯಾದಿ ಕಾರಣಗಳಿಂದ ಅದಿನ್ನೂ ಗುರಿ ತಲುಪಿಲ್ಲ ಎನ್ನುವ ಉತ್ತರ ಬಂದಿದೆ. ಇದುವರೆಗೆ ಶೇ. 50ರಷ್ಟು ಪೈಪ್‌ ಅಳವಡಿಸುವ ಕಾಮಗಾರಿಯಷ್ಟೇ ಆಗಿದೆ.
ಜನರ ನೀರಿನ ಸಮಸ್ಯೆ ಪರಿಹಾರ ಆಗಬೇಕೆಂಬ ನಿಟ್ಟಿನಲ್ಲಿ ಸರಕಾರ ಆರಂಭಿಸಿರುವ ಯೋಜನೆ ಉತ್ತಮವಾಗಿದ್ದರೂ ಅದನ್ನು ನಿಗದಿತ ಸಮಯದೊಳಗೆ ಜಾರಿಗೊಳಿಸುವ ಪ್ರಕ್ರಿಯೆಯೂ ಆಗಬೇಕು. ಕಾಮಗಾರಿ ಕುಂಟುತ್ತಾ ಸಾಗುತ್ತಿರುವುದರಿಂದ ನಗರಕ್ಕೆ ಶಾಶ್ವತ ನೀರೋದಗಿಸುವ ಯೋಜನೆ ಪೂರ್ಣಗೊಳ್ಳಲು ಇನ್ನೆ°ಷ್ಟು ಕಾಲ ಕಾಯಬೇಕು ಎನ್ನುವ ಪ್ರಶ್ನೆ ಜನರಲ್ಲಿ ಮೂಡಿದೆ.

-ಸಂ

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.