ಸಿಕ್ಖ್ ಅಲ್ಲವೆಂದು ಸಿಎಂ ಮಾಡಲಿಲ್ಲ: ಸುನೀಲ್ ಜಾಖಡ್
Team Udayavani, Feb 3, 2022, 6:10 AM IST
ಪಂಜಾಬ್ನಲ್ಲಿ ಚರಣ್ಜಿತ್ ಸಿಂಗ್ ಚನ್ನಿಯನ್ನು ಕಾಂಗ್ರೆಸ್ ನೂತನ ಮುಖ್ಯಮಂತ್ರಿಯನ್ನಾಗಿ ನೇಮಿಸಿದ್ದು ಈಗ ಹಳೆಯ ಸುದ್ದಿ.
ಆದರೆ ಅಲ್ಲಿ ಒಳಜಗಳ ಮಾತ್ರ ಮುಗಿದೇ ಇಲ್ಲ. ಅದಕ್ಕೆ ಹೊಸತೊಂದು ಸಾಕ್ಷಿಯೆಂಬಂತೆ, ಪಂಜಾಬ್ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ಸುನೀಲ್ ಜಾಖಡ್ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.
“ಕಳೆದ ವರ್ಷ, ಅಮರೀಂದರ್ ಸಿಂಗ್ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಕ್ಕಿಳಿದ ಅನಂತರ ನಾನೇ ಮುಖ್ಯಮಂತ್ರಿಯಾಗಬೇಕೆಂದು ಕಾಂಗ್ರೆಸ್ನ 42 ಶಾಸಕರು ಬಯಸಿದ್ದರು. ಈ ಮಟ್ಟದ ಬೆಂಬಲ ಬೇರಾರಿಗೂ ಸಿಕ್ಕಿರಲಿಲ್ಲ. ಆದರೆ ನಾನು ಸಿಕ್ಖ್ ಅಲ್ಲವೆಂದು ಮುಖ್ಯಮಂತ್ರಿ ಸ್ಥಾನ ನೀಡಲಿಲ್ಲ. ಇದು ಒಳಗಿನಿಂದ ನನ್ನನ್ನು ಕಾಡುತ್ತಿದೆ” ಎಂದಿದ್ದಾರೆ ಜಾಖಡ್.
ಇದು ಪಂಜಾಬ್ನಲ್ಲಿ ಕಾಂಗ್ರೆಸ್ಗೆ ಮತ್ತೊಂದು ಮುಜುಗರ ತರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಈಗಾಗಲೇ ಮುಖ್ಯಮಂತ್ರಿ ಚನ್ನಿ ಹಾಗೂ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ನಡುವೆ ಸಿಎಂ ಸ್ಥಾನಕ್ಕೆ ತಣ್ಣನೆಯ ಪೈಪೋಟಿ ನಡೆಯುತ್ತಿದೆ. ಅದರ ನಡುವೆಯೇ ಕಾಂಗ್ರೆಸ್ ಸಿಕ್ಖ್ ವಿರೋಧಿ ಎನ್ನುವಂಥ ಹೇಳಿಕೆಯೊಂದು ಜಾಖಡ್ ನೀಡಿರುವುದು ಚುನಾವಣೆಯಲ್ಲಿ ಕಾಂಗ್ರೆಸ್ಸನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ