ಸುಸ್ಥಿರ ಪ್ರವಾಸೋದ್ಯಮವಾಗಿ ಕಾರ್ಕಳ ತಾಲೂಕು ಅಭಿವೃದ್ಧಿ : ಸಚಿವ ಸುನಿಲ್‌


Team Udayavani, Aug 23, 2021, 12:30 PM IST

ಸುಸ್ಥಿರ ಪ್ರವಾಸೋದ್ಯಮವಾಗಿ ಕಾರ್ಕಳ ತಾಲೂಕು ಅಭಿವೃದ್ಧಿ : ಸಚಿವ ಸುನಿಲ್‌

ಕಾರ್ಕಳ : ತಾ|ನ ಪ್ರೇಕ್ಷಣೀಯ ಸ್ಥಳಗಳನ್ನು ಹಲವು ಆಯಾಮಗಳಲ್ಲಿ ಅಭಿವೃದ್ಧಿಗೊಳಿಸಿ ತಾಲೂಕನ್ನು ಸುಸ್ಥಿರ ಪ್ರವಾಸಿ ಕೇಂದ್ರವಾಗಿಸುವ ಚಿಂತನೆ ಇದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್‌ಕುಮಾರ್‌ ಹೇಳಿದರು.
ಸರಕಾರದ ಪ್ರವಾಸೋದ್ಯಮ ಇಲಾಖೆ ವತಿಯಿಂದ ಕಾರ್ಕಳ ಆನೆಕೆರೆ ಜೈನ ಬಸದಿ ಅಭಿವೃದ್ಧಿ, ಸಂಗೀತ ಕಾರಂಜಿ ನಿರ್ಮಾಣ, ಗ್ಯಾಲರಿ ನಿರ್ಮಾಣ ಹೀಗೆ 2 ಕೋ.ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಪ್ರವಾಸೋದ್ಯಮಕ್ಕೆ ಪೂರಕವಾದ ವ್ಯವಸ್ಥೆಗಳು ತಾಲೂಕಿನಲ್ಲಿವೆ. ಬಸದಿಗಳು, ಗೋಮಟೇಶ್ವರ, ಚತುರ್ಮುಖ ಬಸದಿ, ವರಂಗ ಕೆರೆ ಬಸದಿ, ಅನಂತಶಯನ, ವೆಂಕಟ್ರಮಣ ದೇವಸ್ಥಾನ ಇವುಗಳು ಟೆಂಪಲ್‌ ಟೂರಿಸಂಗೆ ಪೂರಕವಾಗಿದೆ. ಇನ್ನು ಮೇಗದ್ದೆಯ ಕೂಡ್ಲು ಫಾಲ್ಸ್, ಕವಿ ಮುದ್ದಣನ ಕ್ಷೇತ್ರ ಹೀಗೆ ಟೂರಿಸಂಗೆ ಬೇಕಾದ ಎಲ್ಲ ಸೌಲಭ್ಯಗಳು ಇಲ್ಲಿವೆ. ಹೊರಜಿಲ್ಲೆ, ರಾಜ್ಯಗಳಿಂದ ಪ್ರವಾಸಿಗರು ಕಾರ್ಕಳಕ್ಕೆ ಬಂದಾಗ ಒಂದೆರಡು ದಿನಗಳು ಇದ್ದು ಸುತ್ತಾಡಿ ಹೋಗುವ ರೀತಿಯಲ್ಲಿ ಹತ್ತಾರು ಆಯಾಮಗಳ ಚಿಂತನೆಯಿಂದ ವ್ಯವಸ್ಥೆಗಳನ್ನು ರೂಪಿಸಲಾಗುವುದು. ಕೋಟಿ ಚೆನ್ನಯ ಥೀಂ ಪಾರ್ಕ್‌, ಬೈಲೂರಿನಲ್ಲಿ ಪರಶುರಾಮ ಕೇಂದ್ರ ಹೀಗೆ ಎಲ್ಲ ದೃಷ್ಟಿಯಿಂದಲೂ ತಾಲೂಕು ಪ್ರವಾಸಿ ಕೇಂದ್ರವಾಗಿ ಹಂತಹಂತವಾಗಿ ಅಭಿವೃದ್ಧಿ ಹೊಂದುತ್ತಿದೆ ಎಂದರು.

ಇದನ್ನೂ ಓದಿ :ನೇಣು ಬಿಗಿದ ಸ್ಥಿತಿಯಲ್ಲಿ ‘ಕಾಂಚನಾ-3’ ನಟಿ ಶವ ಪತ್ತೆ

ಆನೆಕೆರೆ ಚತುಷ್ಪಥ ರಸ್ತೆ ನಿರ್ಮಾಣ
ಆನೆಕೆರೆ ಹೂಳೆತ್ತುವ ಬೇಡಿಕೆಯಿದೆ. ಅದಕ್ಕೂ ಮೊದಲು ಮಸೀದಿ ಹತ್ತಿರದಿಂದ ರಂಗನಾಥ ಕೆಫೆ ತನಕದ ರಸ್ತೆಯನ್ನು ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿ ಪಡಿಸಬೇಕಿದೆ. ರಸ್ತೆ ಹಾದುಹೋಗುವ ಪ್ರದೇಶಗಳ ಖಾಸಗಿ ಭೂಮಾಲಕರ ಜತೆ ಮಾತುಕತೆ ನಡೆಯುತ್ತಿದೆ. ಎರಡು ಮನೆಗಳ ಸ್ಥಳಾಂತರ ಪ್ರಕ್ರಿಯೆ ಮುಗಿದ ಬಳಿಕ ಆನೆಕೆರೆಗೆ ತಡೆಗೋಡೆ ಕಟ್ಟಿ ಹೂಳೆತ್ತಿ ಶಾಶ್ವತವನ್ನಾಗಿಸಲಾಗುವುದು ಎಂದರು.

2 ಕೆರೆ ಅಭಿವೃದ್ಧಿ
ಸಾಣೂರಿನ ಮಠದ ಕೆರೆ ಮತ್ತು ರಾಮಸಮುದ್ರ ಅಭಿವೃದ್ಧಿಯನ್ನು ಈ ವರ್ಷ ಕೈಗೆತ್ತಿಕೊಳ್ಳುತ್ತಿದ್ದೇವೆ. ಜನವರಿಯೊಳಗೆ ಎರಡೂ ಕೆರೆಗಳ ಸಂಪೂರ್ಣ ಅಭಿವೃದ್ಧಿಯನ್ನು ಮಾಡಲಾಗುತ್ತದೆ. ಅದರೊಂದಿ ಗೆ ಕಾರಂಜಿ, ಗ್ಯಾಲರಿ ಕೆಲಸಗಳು ವೇಗವಾಗಿ ನಡೆಯಬೇಕು. ಬಸದಿ ಕಾರ್ಯ ನಿಧಾನವಾಗದಂತೆ ನೋಡಿಕೊಳ್ಳಬೇಕಿದೆ. ಸರಕಾರದಿಂದ ಬಸದಿಗೆ 50 ಲಕ್ಷ ರೂ. ತಡೆಗೋಡೆಗೆ 1 ಕೋ.ರೂ. ನೀಡಲಾಗಿದೆ. ಮುಂದಿನ ಜೀರ್ಣೋದ್ಧಾರ ಕೆಲಸಗಳಿಗೆ ಸಮಾಜದ ಬಂಧುಗಳು ಸಹಕರಿಸಬೇಕು ಎಂದರು.

ಕಾರ್ಕಳದ ಜೈನ ಮಠದ ರಾಜಗುರು ಶ್ರೀ ಲಲಿತ ಕೀರ್ತಿ ಭಟ್ಟಾರಕ ಮಹಾಸ್ವಾಮಿಗಳು ಆಶೀರ್ವಚನ ನೀಡಿ ಏಕಭಾವನೆಯಿಂದ ಕಾರ್ಯಗಳು ನಡೆದಾಗ ಎಲ್ಲ ಸತ್ಕಾರ್ಯಗಳು ಈಡೇರುತ್ತವೆ ಎಂದರು. ಹಿರಿಯ ನ್ಯಾಯವಾದಿ ಎಂ.ಕೆ ವಿಜಯಕುಮಾರ್‌, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮಹಾವೀರ ಹೆಗ್ಡೆ, ಪುರಸಭೆ ಅಧ್ಯಕ್ಷೆ ಸುಮಾಕೇಶವ್‌, ಕೆಆರ್‌ಐಡಿ ಅಧಿಕಾರಿ ಪ್ರಭಾಕರ್‌, ಪುರಸಭೆ ಮುಖ್ಯಾಧಿಕಾರಿ ರೂಪಾ ಡಿ.ಶೆಟ್ಟಿ ಉಪಸ್ಥಿತರಿದ್ದರು. ಗುಣಪಾಲ ಕಡಂಬಳ ಕಾರ್ಯಕ್ರಮ ನಿರ್ವಹಿಸಿದರು. ಗಣ್ಯರು ಉಪಸ್ಥಿತರಿದ್ದರು.

ಗ್ಯಾಲರಿ, ಸಂಗೀತ ಕಾರಂಜಿ
ಬಸದಿಯ ಜೀರ್ಣೋದ್ಧಾರ ಮತ್ತು ಪ್ರವಾಸಿಗರಿಗೆ ಕೆರೆಯನ್ನು ನೋಡಲು ಒಂದೊಳ್ಳೆ ಗ್ಯಾಲರಿಯ ಆವಶ್ಯಕತೆಯಿದೆ ಮತ್ತು ಸಂಜೆ 1 ತಾಸು ಪ್ರವಾಸಿಗರ ಇರುವಿಕೆಯನ್ನು ನೋಡಿಕೊಂಡು ಪ್ರತಿದಿನ ಸಂಗೀತ ಕಾರಂಜಿ ನಿರ್ಮಿಸಲಾಗುತ್ತಿದೆ. ಬಸದಿಯ ಜೀರ್ಣೋದ್ಧಾರ ಕಾರ್ಯಗಳು ಬೇಗ ಪೂರ್ಣಗೊಂಡರೆ ಉಳಿದೆಲ್ಲ ಕಾರ್ಯಗಳು ತ್ವರಿತವಾಗಿ ನಡೆಸಲು ಸುಲಭವಾಗುತ್ತದೆ. ಈ ಹಿನ್ನೆಲೆಯಲ್ಲಿ 2 ಕೋ.ರೂ. ವೆಚ್ಚದ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ್ದೇನೆ ಸುನಿಲ್‌ ಹೇಳಿದರು.

ಟಾಪ್ ನ್ಯೂಸ್

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.