ಸುಂಕದಕಟ್ಟೆ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕಳವು ಪ್ರಕರಣ : ಓರ್ವನ ಬಂಧನ
Team Udayavani, Jan 21, 2021, 8:17 PM IST
ಬಜಪೆ: ಸುಂಕದಕಟ್ಟೆ ಶ್ರೀ ನಿರಂಜನ ಸ್ವಾಮಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2020ರ ಡಿ.9ರಂದು ಕಚೇರಿಯ ಬೀಗ ಮುರಿದು ಕಪಾಟಿನಲ್ಲಿದ್ದ 5.41ಲ. ರೂ. ಕಳವು ಮಾಡಿದ್ದ ಆರೋಪದಲ್ಲಿ ವಾಮಂಜೂರು ತಿರುವೈಲು ಗ್ರಾಮದ ಈಸ್ಲಾ ಉಲ್ ಜುಮ್ಮಾ ಮಸೀದಿ ಕಾಂಪೌಂಡಿನ ನಿವಾಸಿ ಆರೀಫ್ (26)ನನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.
ಈತನ ಮೇಲೆ ಕಳವು, ಸುಲಿಗೆ, ದರೋಡೆ, ಕೊಲೆಗೆ ಯತ್ನ ಮತ್ತು ಎ.ಟಿ.ಎಂ. ಕಳವಿಗೆ ಸಂಬಂಧಿಸಿ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ 7 ಪ್ರಕರಣ, ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ 4, ಕಾವೂರು ಮತ್ತು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ತಲಾ 2, ಬಂಟ್ವಾಳ ನಗರ , ಗ್ರಾಮಾಂತರ ಹಾಗೂ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ತಲಾ ಒಂದು ಸಹಿತ ಸುಮಾರು 18 ಪ್ರಕರಣಗಳು ದಾಖಲಾಗಿವೆ.
ಇದನ್ನೂ ಓದಿ:ಮನಕಲಕುವ ಘಟನೆ: ಕಬಡ್ಡಿ … ಕಬಡ್ಡಿ… ಎನ್ನುತ್ತಲೇ ಪ್ರಾಣಬಿಟ್ಟ ಯುವಕ !
ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಬೆಳ್ಳಿಯಪ್ಪ ಮತ್ತು ಬಜಪೆ ಪೊಲೀಸ್ ನಿರೀಕ್ಷಕ ಕೆ. ಆರ್. ನಾಯ್ಕ ನೇತೃತ್ವದಲ್ಲಿ ಪಿಎಸ್ಐ ಪೂವಪ್ಪ ಎಚ್.ಎಂ., ರಾಘವೇಂದ್ರ ನಾಯ್ಕ, ಎಎಸ್ಐ ರಾಮ ಪೂಜಾರಿ, ಲಕ್ಷ್ಮಣ ಗೌಡ, ಸಿಬಂದಿ ವರ್ಗದ ಸುಧೀರ್ ಶೆಟ್ಟಿ , ಸಂತೋಷ್ ಡಿ.ಕೆ., ರಶೀದ್ ಶೇಖ್, ಲಕ್ಷ್ಮಣ್, ವಕೀಲ್ ಲಮಾಣಿ ಮತ್ತು ವಿನೋದ್ ಕುಮಾರ್ ಅವರು ಪತ್ತೆ ಕಾರ್ಯದಲ್ಲಿ ಭಾಗವಹಿಸಿರುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ