Supreme Court: ನ್ಯಾಯಾಧೀಶರು ಬೋಧನೆ ಮಾಡಬಾರದು!
-ಕಲ್ಕತ್ತಾ ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ ಸರ್ವೋಚ್ಚ ಪೀಠದಿಂದ ನೇರನುಡಿ
Team Udayavani, Dec 8, 2023, 8:42 PM IST
ನವದೆಹಲಿ: ನ್ಯಾಯಮೂರ್ತಿಗಳು ಬೋಧನೆ ಮಾಡುವುದು ಅಥವಾ ತಮ್ಮ ವೈಯಕ್ತಿಕ ಅಭಿಪ್ರಾಯ ತಿಳಿಸುವುದರಿಂದ ಹಿಂದೆ ಸರಿಯಬೇಕು ಎಂದು ಸರ್ವೋಚ್ಚ ನ್ಯಾಯಪೀಠ ಸ್ಪಷ್ಟವಾಗಿ ಹೇಳಿದೆ.
ಕಲ್ಕತ್ತಾ ಉಚ್ಚ ನ್ಯಾಯಾಲಯ ಈ ವರ್ಷ ಅ.18ರಂದು ಪೋಕ್ಸೋ ಪ್ರಕರಣದಲ್ಲಿ ನೀಡಿದ್ದ ತೀರ್ಪನ್ನು ಗಮನದಲ್ಲಿಟ್ಟುಕೊಂಡು, ಸರ್ವೋಚ್ಚ ಪೀಠ ಹೀಗೆಂದು ಹೇಳಿದೆ. ಸಮ್ಮತಿಯ ಸಂಭೋಗ ಪ್ರಕರಣದಲ್ಲಿ ವ್ಯಕ್ತಿಯೊಬ್ಬರನ್ನು ಖುಲಾಸೆ ಮಾಡಿದ್ದ ಕಲ್ಕತ್ತಾ ನ್ಯಾಯಪೀಠ, ಯುವತಿಯರು 2 ನಿಮಿಷದ ಸುಖಕ್ಕಾಗಿ ಮೈಮರೆಯಬಾರದು, ತಮ್ಮ ಲೈಂಗಿಕ ಬಯಕೆಗಳನ್ನು ಅದುಮಿಟ್ಟುಕೊಳ್ಳಬೇಕು ಎಂದು ಸಲಹೆ ನೀಡಿತ್ತು. ಆ ವೇಳೆ ಪೋಕ್ಸೋದ ಕೆಲವು ನ್ಯೂನತೆಗಳನ್ನು ಎತ್ತಿ ತೋರಿಸಿತ್ತು.
ನಿರ್ದಿಷ್ಟ ಪ್ರಕರಣದಲ್ಲಿ ಅಪ್ರಾಪ್ತ ವಯಸ್ಕಳನ್ನು ವ್ಯಕ್ತಿಯೊಬ್ಬರು ಅತ್ಯಾಚಾರಕ್ಕೊಳಪಡಿಸಿದ್ದಾರೆ ಎನ್ನಲಾಗಿತ್ತು. ಆದರೆ ಆಕೆಯೊಂದಿಗೆ ಆತನಿಗೆ ಮುಂಚೆಯಿಂದಲೂ ಪ್ರಣಯ ಸಂಬಂಧವಿತ್ತು ಎಂದು ವಿಚಾರಣೆಯಲ್ಲಿ ತಿಳಿದುಬಂದಿತ್ತು. ಈ ಹಿನ್ನೆಲೆಯಲ್ಲಿ ಸಮ್ಮತಿಯ ಸಂಭೋಗವನ್ನೂ ಈ ಪ್ರಕರಣದ ವ್ಯಾಪ್ತಿಯಲ್ಲಿ ತಂದಿದ್ದಕ್ಕೆ ಕಳಕಳಿ ವ್ಯಕ್ತಪಡಿಸಿತ್ತು. 16 ವರ್ಷ ದಾಟಿದವರು ಸಮ್ಮತಿಯ ಕ್ರಿಯೆಯಲ್ಲಿ ತೊಡಗಿದ್ದರೆ, ಅದನ್ನು ಅಪರಾಧದ ಚೌಕಟ್ಟಿನಿಂದ ಹೊರಗಿಡಬೇಕು ಎಂದು ಹೇಳಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ