Gnanavapi: ಜ್ಞಾನವಾಪಿ ಮಸೀದಿಯ ನೀರಿನ ತೊಟ್ಟಿ ಶುಚಿಗೊಳಿಸಲು ಸುಪ್ರೀಂ ಅನುಮತಿ
ಮಸೀದಿ ಆವರಣದಲ್ಲಿ ಸೀಲ್ ಮಾಡಿದ ಪ್ರದೇಶದಲ್ಲಿರುವ ನೀರಿನ ತೊಟ್ಟಿ
Team Udayavani, Jan 16, 2024, 8:00 PM IST
ನವದೆಹಲಿ: ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿ ಆವರಣದಲ್ಲಿ ಸೀಲ್ ಮಾಡಿದ ಪ್ರದೇಶದಲ್ಲಿರುವ ನೀರಿನ ತೊಟ್ಟಿ ಶುಚಿಗೊಳಿಸಲು ಸುಪ್ರೀಂ ಕೋರ್ಟ್ ಮಂಗಳವಾರ ಅನುಮತಿ ನೀಡಿದೆ. ಕಾಶಿ ವಿಶ್ವನಾಥ ದೇಗುಲ ಪಕ್ಕದ ಮಸೀದಿಯ ನೀರಿನ ತೊಟ್ಟಿಯಲ್ಲಿ ಕೆಲ ಮೀನುಗಳು ಸತ್ತಿದ್ದು, ಸ್ವತ್ಛಗೊಳಿಸಲು ಅನುಮತಿ ಕೋರಿ ಹಿಂದೂ ಮಹಿಳಾ ಅರ್ಜಿದಾರರು ಅರ್ಜಿ ಸಲ್ಲಿಸಿದ್ದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅಂಜುಮಾನ್ ಇಂತೆಜಾಮಿಯಾ ಮಸೀದಿ ಸಮಿತಿ, ನೀರಿನ ತೊಟ್ಟಿ ಸ್ವತ್ಛಗೊಳಿಸುವುದು ತಮ್ಮ ಕರ್ತವ್ಯ ಎಂದಿತ್ತು. ವಿಚಾರಣೆ ನಡೆಸಿದ ಸಿಜೆಐ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ, ವಾರಣಾಸಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮೇಲುಸ್ತುವಾರಿಯಲ್ಲಿ ನೀರಿನ ತೊಟ್ಟಿ ಶುಚಿಗೊಳಿಸುವಂತೆ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ