ಕನ್ನಡ-ಮರಾಠಿಗರೊಂದಿಗೆ ಸುಮಧುರ ಸಂಬಂಧ ಹೊಂದಿದ್ದ ಸುರೇಶ ಅಂಗಡಿ


Team Udayavani, Sep 24, 2020, 1:19 PM IST

ಕನ್ನಡ-ಮರಾಠಿಗರೊಂದಿಗೆ ಸುಮಧುರ ಸಂಬಂಧ ಹೊಂದಿದ್ದ ಸುರೇಶ ಅಂಗಡಿ

ಬೆಳಗಾವಿ: ಗಡಿ ಭಾಗದ ರಾಜಕಾರಣದಲ್ಲಿ ಸುರೇಶ ಅಂಗಡಿ ಅಚ್ಚಳಿಯದೇ ಸದಾ ನೆನಪಿನಲ್ಲಿ ಉಳಿಯುವ ಹೆಸರು. ಯಾವುದೇ ವಿವಾದಕ್ಕೊಳಗಾಗದೆ ತಮ್ಮ ಇತಿಮಿತಿಯಲ್ಲಿ ರಾಜಕಾರಣ ಮಾಡುತ್ತ ಬಂದಿದ್ದ ಸುರೇಶ ಅಂಗಡಿ ತಮ್ಮ ಕಾರ್ಯಶೈಲಿ, ಜನರ ಜೊತೆಗಿನ ನಿಕಟ ಸಂಪರ್ಕ ಹಾಗೂ ಅನುಭವದ ಮೇಲೆ ಕೇಂದ್ರದಲ್ಲಿ ಬಹಳ ಮಹತ್ವದ ಜವಾಬ್ದಾರಿ ವಹಿಸಿಕೊಂಡಿದ್ದರು.

ಬೆಳಗಾವಿ ಎಂದಾಕ್ಷಣ ಇಲ್ಲಿ ಮರಾಠಿ ಭಾಷಿಕರ ಪ್ರಾಬಲ್ಯ. ಅದರಲ್ಲೂ ಚುನಾವಣೆಯ ಸಮಯದಲ್ಲಿ ಇವರೇ ನಿರ್ಣಾಯಕ ಮತದಾರರು ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಇದರ ಮಧ್ಯೆ ಗಡಿ ಹಾಗೂ ಭಾಷಾ ವಿವಾದ ರಾಜಕಾರಣದ ಮೇಲೆ ಬಹಳ ಪ್ರಭಾವ ಬೀರಿದ್ದವು. ರಾಜಕಾರಣಿಗಳ ಸುತ್ತ ಈ ಎರಡೂ ಅಂಶಗಳು ಬಹಳ ಗಾಢವಾಗಿ ಸುತ್ತಿಕೊಂಡಿದ್ದವು. ಹೀಗಾಗಿ ಗಡಿ ವಿವಾದ ಹಾಗೂ ಬೆಳಗಾವಿ ರಾಜಕಾರಣಿಗಳು ಸದಾ ಸುದ್ದಿಯಲ್ಲಿರುತ್ತಿದ್ದವು.

2004 ರಲ್ಲಿ ಮೊದಲ ಬಾರಿಗೆ ಲೋಕಸಭೆ ಚುನಾವಣೆ ಎದುರಿಸಿದ ಸುರೇಶ ಅಂಗಡಿ ಆಗ ಗಡಿ ಹಾಗೂ ಭಾಷಾ ವಿಷಯಗಳನ್ನು ಬಹಳ ಸೂಕ್ಷ್ಮವಾಗಿ ಹಾಗೂ ಚಾಣಾಕ್ಷತನದಿಂದ ನಿಭಾಯಿಸಿದ್ದರು. ಯಾವ ಸಮಯದಲ್ಲೂ ವಿವಾದಾತ್ಮಕ ಹೇಳಿಕೆಯ ಗೊಡವಿಗೆ ಹೋಗದೆ ಕನ್ನಡ ಹಾಗೂ ಮರಾಠಿ ಭಾಷಿಕ ಜ®ರನ್ನು ಬಹಳ ವಿಶ್ವಾಸಕ್ಕೆ ತೆಗೆದುಕೊಂಡಿದ್ದರು. ಆಗ ಬದಲಾವಣೆ ಬಯಸಿದ್ದ ಬೆಳಗಾವಿ ಕ್ಷೇತ್ರಕ್ಕೆ ಸುರೇಶ ಅಂಗಡಿ ಹೊಸ ನಾಯಕರಾಗಿ ಉದಯರಾದರು.

2004 ರಿಂದ ಸತತ ನಾಲ್ಕು ಅವಧಿಯವರೆಗೆ ಸುರೇಶ ಅಂಗಡಿ ಹಿಂತಿರುಗಿ ನೋಡಲಿಲ್ಲ. ಭಾಷಾ ಸಮಸ್ಯೆಯನ್ನು ಬಹಳ ಜಾಗರೂಕತೆಯಿಂದ ನಿಭಾಯಿಸಿದ್ದರಿಂದ ಎಲ್ಲಿಯೂ ಸಮಸ್ಯೆ ಎದುರಾಗಲಿಲ್ಲ. ಆಗಾಗ ತಮ್ಮ ವಿರುದ್ಧ ಕನ್ನಡ ಭಾಷಾ ವಿರೋಧಿ ಎಂಬ ಕೂಗು ಹಾಗೂ ಆರೋಪ ಕೇಳಿಬಂದರೂ ಅದರಿಂದ ಸುರೇಶ ಅಂಗಡಿ ವಿಚಲಿತರಾಗಲಿಲ್ಲ ಬದಲಾಗಿ ತಮ್ಮ ವಿರೋಧಿಗಳನ್ನು ಇನ್ನಷ್ಟು ಹತ್ತಿರ ಮಾಡಿಕೊಂಡರು.

ಬಿಜೆಪಿ ಜೊತೆಗೆ ಕಾಂಗ್ರೆಸ್‌, ಎಂ ಇ ಎಸ್‌ ಹಾಗೂ ಶಿವಸೇನೆ ನಾಯಕರ ಜೊತೆ ಉತ್ತಮ ಸಂಬಂಧ ಬೆಳೆಸಿಕೊಂಡರು. ಇದು ಅಂಗಡಿ ಅವರ ರಾಜಕೀಯ ಸಾಧನೆ ಹಾಗೂ ಉನ್ನತ ಹುದ್ದೆಗೇರಲು ಬಹಳ ಸಹಾಯ ಮಾಡಿದವು.

ತಮ್ಮ ಸಂಸದರ ಅವಧಿಯಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ಮೇಲೆ ಭಗವಾಧjಜ ಹಾರಿಸುವ ವಿಷಯದಲ್ಲಿ ಎಂ ಇ ಎಸ್‌ ಹಾಗು ಶಿವಸೇನೆ ಬಹಳ ದೊಡ್ಡ ರಾದ್ಧಾಂತ ಮಾಡಿದ್ದವು ಆಗ ಬೆಳಗಾವಿ ವಿಷಯ ಇಡೀ ದೇಶದ ಗಮನ ಸೆಳೆದಿತ್ತು. ಈ ಸಂದರ್ಭದಲ್ಲಿ ಸುರೇಶ ಅಂಗಡಿ ಪ್ರಬುದ್ಧ ರಾಜಕೀಯತನ ಪ್ರದರ್ಶಿಸಿದರು. ಯಾರಿಗೂ ಕೆಟ್ಟವರಾಗದೆ ವಿವಾದ ತಣ್ಣಗಾಗುವಂತೆ ನೋಡಿಕೊಂಡರು.

ಜಿಲ್ಲಾ ರಾಜಕಾರಣದಲ್ಲಿ ಸುರೇಶ ಅಂಗಡಿ ಅವರ ಪಾತ್ರ ಬಹಳ ಮಹತ್ವದ್ದು. ಪ್ರಭಾವಿ ನಾಯಕರಾದ ಜಾರಕಿಹೊಳಿ ಸಹೋದರರು, ಉಮೇಶ ಕತ್ತಿ ಸಹೋದರರು ಸೇರಿದಂತೆ ಪ್ರತಿಯೊಬ್ಬರ ಜೊತೆ ಅನ್ಯೋನ್ಯ ಸಂಬಂಧ ಹೊಂದಿದ್ದ ಸುರೇಶ ಅಂಗಡಿ ಜಿಲ್ಲೆಯ ರಾಜಕಾರಣದಲ್ಲಿ ಮಹತ್ವದ ನಿರ್ಣಯ ಕೈಗೊಳ್ಳುವಾಗ ಮುಂಚೂಣಿಯಲ್ಲಿರುತ್ತಿದ್ದರು. ಇದು ಅವರ ವ್ಯಕ್ತಿತ್ವದ ವಿಶೇಷ.

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.