ಅಕ್ರಮ ವಲಸಿಗರ ಮಾಹಿತಿಗೆ ಸಮೀಕ್ಷೆ: ಬೊಮ್ಮಾಯಿ


Team Udayavani, Dec 11, 2019, 3:07 AM IST

akrama-vala

ಹರಿಹರ: ರಾಜ್ಯದಲ್ಲಿ ನೆಲೆಸಿರುವ ಅಕ್ರಮ ವಲಸಿಗರ ಸಂಖ್ಯೆ ಕುರಿತು ಮಾಹಿತಿ ಇಲ್ಲದ್ದರಿಂದ ಸಮೀಕ್ಷೆ ನಡೆಸಲು ಪೊಲೀಸ್‌ ಠಾಣೆಗಳಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ತಾಲೂಕಿನ ಹನಗವಾಡಿ ಸಮೀಪದ ವೀರಶೈವ ಲಿಂಗಾಯಿತ ಪಂಚಮಸಾಲಿ ಮಠಕ್ಕೆ ಮಂಗಳವಾರ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದ ಎಲ್ಲಾ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಇರಬಹುದಾದ ಬೇರೆ ರಾಷ್ಟ್ರದ ಪ್ರಜೆಗಳ ಕುರಿತು ಈಗಾಗಲೆ ಸರ್ವೇ ಕಾರ್ಯ ನಡೆದಿದೆ. ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ರಾಷ್ಟ್ರೀಯ ನೀತಿಯಾಗಬೇಕೆಂಬುದು ಕೇಂದ್ರ ಸರ್ಕಾರದ ಆಶಯ. ರಾಜ್ಯದಲ್ಲಿ ಎಷ್ಟು ಜನ ವಿದೇಶಿಯರಿದ್ದಾರೆಂದು ಈವರೆಗೂ ಅಂದಾಜು ಸಿಕ್ಕದ ಕಾರಣ ರಾಜ್ಯದಲ್ಲಿನ ಎಲ್ಲಾ ಭಾಗದಲ್ಲೂ ಸರ್ವೇ ಕಾರ್ಯ ಕೈಗೊಳ್ಳಲು ಠಾಣೆಗಳಿಗೂ ಸೂಚನೆ ನೀಡಲಾಗುತ್ತಿದೆ ಎಂದರು.

ಬೇರೆ ರಾಷ್ಟ್ರದ ಪ್ರಜೆಗಳ ಪತ್ತೆ ಮಾಡುವುದು ಅವರನ್ನು ಅವರ ಮಾತೃದೇಶಕ್ಕೆ ಹಸ್ತಾಂತರ ಮಾಡುವುದು ಎನ್‌ಆರ್‌ಸಿ ಉದ್ದೇಶವಾಗಿದ್ದು, ಈಗಾಗಲೇ ನೈಜೀರಿಯಾದ 16 ಜನರು, 63 ಬಾಂಗ್ಲಾ ನಾಗರಿಕರನ್ನು ಪತ್ತೆ ಹಚ್ಚಿ ಅವರವರ ದೇಶಕ್ಕೆ ಹಸ್ತಾಂತರಿಸಲಾಗಿದೆ. ನೆರೆಯ ಪಾಕಿಸ್ತಾನ, ಬಾಂಗ್ಲಾ, ಅಪಘಾನಿಸ್ತಾನ ಮುಂತಾದ ರಾಷ್ಟ್ರಗಳು ಇಸ್ಲಾಂ ಧರ್ಮಾಧಾರಿತ ರಾಷ್ಟ್ರಗಳಾಗಿದ್ದು, ಮುಸ್ಲಿಮರಿಗೆ ಅಬಾಧಿತವಾಗಿ ಆಶ್ರಯ ನೀಡುತ್ತಿವೆ.

ಆದರೆ ಈ ರಾಷ್ಟ್ರಗಳಿಂದ ಹೊರದಬ್ಬಲ್ಪಡುವ ಹಿಂದೂ, ಸಿಖ್‌, ಬೌದ್ಧ, ಪಾರ್ಸಿ, ಜೈನ, ಕ್ರಿಶ್ಚಿಯನ್‌ರಿಗೆ ವಾಸಿಸಲು ಬೇರೆ ಸ್ಥಳಗಳಿಲ್ಲದ ಕಾರಣ ಅವರಿಗೆ ಭಾರತದ ನಾಗರಿಕತ್ವ ನೀಡುವ ಪೌರತ್ವ ತಿದ್ದುಪಡಿ ಕಾಯ್ದೆ ಅಗತ್ಯವಾಗಿ ಬೇಕಿದೆ ಎಂದರು. ಸಿಎಂ ಬಿಎಸ್‌ವೈ ಎರಡು ಅಂಶಗಳನ್ನು ಹೇಳಿದ್ದಾರೆ. ಮೊದಲನೆಯದಾಗಿ ಆಡಳಿತ ಯಂತ್ರವನ್ನು ಚುರುಕು ಮಾಡಿ ಸುಧಾರಣೆ ತರುವುದು, ಎರಡನೆಯದಾಗಿ ಅಭಿವೃದ್ಧಿ ಕಾರ್ಯಕ್ಕೆ ಗಮನ ನೀಡುವುದು.

ಫೆಬ್ರವರಿ ತಿಂಗಳಲ್ಲಿ ರಾಜ್ಯ ಬಜೆಟ್‌ ಮಂಡನೆಯಾಗಲಿದ್ದು, ಈಗಾಗಲೇ ಎಲ್ಲಾ ಇಲಾಖೆಗಳ ಕಾರ್ಯಕ್ರಮಗಳ ಪರಮಾರ್ಶೆ ಮಾಡಲು ಹಾಗೂ ಬಜೆಟ್‌ಗೆ ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ ಎಂದರು. ಉಪ ಚುನಾವಣೆಯಲ್ಲಿ ತೋಳ್ಬಲ, ಹಣಬಲದಿಂದ ಬಿಜೆಪಿಗೆ ಜಯಸಿಕ್ಕಿದೆ ಎನ್ನುವುದು ಸೋತಾಗ ಮಾಡುವ ಸಾಮಾನ್ಯ ಆರೋಪ.

ಈ ಹಿಂದೆ ರಾಣಿಬೆನ್ನೂರು ಕ್ಷೇತ್ರದಲ್ಲಿ ಐದು ಬಾರಿ ಗೆದ್ದ ಕಾಂಗ್ರೆಸ್‌ ಅಭ್ಯರ್ಥಿ ಚುನಾವಣೆ ಹೇಗೆ ಮಾಡಿದ್ದರೆಂದು ನಾವೂ ಪ್ರಶ್ನಿಸಬಹುದು. ಮಾಜಿ ಸಿಎಂ ಸಿದ್ದರಾಮಯ್ಯ ರಾಣಿಬೆನ್ನೂರಿಗೆ ಬಂದಾಗ ಹಣ ಹಂಚಿರುವ ವಿಷಯ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ ಎಂದರು. ಇದಕ್ಕೂ ಮುನ್ನ ಬೊಮ್ಮಾಯಿಯವರು ವಚನಾನಂದ ಸ್ವಾಮೀಜಿ ಆಶೀರ್ವಾದ ಪಡೆದರು. ರಾಣಿಬೆನ್ನೂರು ಶಾಸಕ ಅರುಣಕುಮಾರ್‌, ಪೀಠದ ಟ್ರಸ್ಟ್‌ ಧರ್ಮದರ್ಶಿ ಬಿ.ಸಿ.ಉಮಾಪತಿ ಇತರರಿದ್ದರು.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.