ಸೂರ್ಯಕುಮಾರ್ ಯಾದವ್ ಐಪಿಎಲ್ನಿಂದ ಹೊರಕ್ಕೆ
Team Udayavani, May 9, 2022, 11:00 PM IST
ಮುಂಬಯಿ: ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ಬ್ಯಾಟರ್ ಸೂರ್ಯಕುಮಾರ್ ಯಾದವ್ ಎಡ ಮೊಣಕೈ ಸ್ನಾಯು ಸೆಳೆತದಿಂದಾಗಿ ಐಪಿಎಲ್ನಿಂದ ಹೊರಬಿದ್ದರು. ಮೇ 6ರ ಗುಜರಾತ್ ಎದುರಿನ ಪಂದ್ಯದ ವೇಳೆ ಯಾದವ್ ಈ ಸಮಸ್ಯೆಗೆ ಸಿಲುಕಿದ್ದರು ಎಂಬುದಾಗಿ ಐಪಿಎಲ್ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.
ಸೂರ್ಯಕುಮಾರ್ ಯಾದವ್ ಮೊದಲೆರಡು ಪಂದ್ಯಗಳ ವೇಳೆಯೂ ಮುಂಬೈ ತಂಡದಿಂದ ಹೊರಗುಳಿದಿದ್ದರು. ಆಗ ಬೆಂಗಳೂರು ಎನ್ಸಿಎಯಲ್ಲಿ ಪುನಶ್ಚೇತನ ಪ್ರಕ್ರಿಯೆಯಲ್ಲಿ ತೊಡಗಿದ್ದರು. ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ಫೆಬ್ರವರಿಯಲ್ಲಿ ನಡೆದ ಅಂತಿಮ ಟಿ20 ಪಂದ್ಯದ ವೇಳೆದ ಫೀಲ್ಡಿಂಗ್ ನಡೆಸುವಾಗ ಅವರು ಗಾಯಾಳಾಗಿದ್ದರು.
ಸೋಮವಾರದ ಐಪಿಎಲ್ ಪಂದ್ಯಕ್ಕಾಗಿ ಸೂರ್ಯಕುಮಾರ್ ಯಾದವ್ ಸ್ಥಾನದಲ್ಲಿ ರಮಣದೀಪ್ ಸಿಂಗ್ ಕಾಣಿಸಿಕೊಂಡರು.
ಕೆಕೆಆರ್ 5 ಬದಲಾವಣೆ
ಕೆಕೆಆರ್ ಬರೋಬ್ಬರಿ 5 ಬದಲಾವಣೆಗಳೊಂದಿಗೆ ಕಣಕ್ಕಿಳಿಯಿತು. ಅಜಿಂಕ್ಯ ರಹಾನೆ, ವೆಂಕಟೇಶ್ ಅಯ್ಯರ್, ಪ್ಯಾಟ್ ಕಮಿನ್ಸ್, ಶೆಲ್ಡನ್ ಜಾಕ್ಸನ್, ವರುಣ್ ಚಕ್ರವರ್ತಿ ಹನ್ನೊಂದರ ಬಳಗದಲ್ಲಿ ಅವಕಾಶ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ