ಶಕ್ತಿ ಪ್ರದರ್ಶನಕ್ಕೆ ಮಠಾಧೀಶರು ಸಜ್ಜು

ರಾಜ್ಯದ ಮಠಾಧಿಪತಿಗಳು ಶನಿವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ.

Team Udayavani, Jul 24, 2021, 1:29 PM IST

ಶಕ್ತಿ ಪ್ರದರ್ಶನಕ್ಕೆಮಠಾಧೀಶರು ಸಜ್ಜು

ಬೆಂಗಳೂರು: ಅತ್ತ “ಮುಖ್ಯಮಂತ್ರಿ ಬದಲಾವಣೆ’ ವಿಚಾರ ದಿನದಿಂದ ದಿನಕ್ಕೆಕಾವು ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇತ್ತ ಬಿ.ಎಸ್‌. ಯಡಿಯೂರಪ್ಪ ಪರ ಮಠಾಧೀಶರ ದನಿ ಮತ್ತಷ್ಟು ಗಟ್ಟಿಗೊಳ್ಳುತ್ತಿದೆ. ಈ ಮಧ್ಯೆ ಇನ್ನೂ ಒಂದು ಹೆಜ್ಜೆ ಮುಂದೆಹೋಗಿ ರಾಜ್ಯದ ವಿವಿಧ ಮಠಾಧೀಶರು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಭಾನುವಾರ (ಜುಲೈ 25) ನಗರದ ಅರಮನೆ ಮೈದಾನದಲ್ಲಿ ಮಠಾಧೀಶರು ಸಭೆ ಏರ್ಪಡಿಸಲಾಗಿದೆ.

ಅಲ್ಲಿ ರಾಜ್ಯದ ಅಗ್ರಗಣ್ಯ ಮಠಾಧಿಪತಿಗಳೆಲ್ಲರೂ ಭಾಗವಹಿಸಲಿದ್ದು, “ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಮಾಡಬಾರದು. ಹಾಗೊಂದು ವೇಳೆ ಈ ನಿಟ್ಟಿನಲ್ಲಿ ಮುಂದಾದರೆ, ಸಮಸ್ಯೆ ಎದುರಿಸಬೇಕಾಗಬಹುದು’ ಎಂಬ ಸಂದೇಶವನ್ನು ಬಿಜೆಪಿ ಹೈಕಮಾಂಡ್‌ಗೆ ರವಾನಿಸಲು ವೇದಿಕೆ ಸಜ್ಜಾಗುತ್ತಿದೆ.

ಈ ಸಂಬಂಧ ನಗರದಲ್ಲಿ ಶುಕ್ರವಾರ ವಿವಿಧ ಮಠಾಧೀಶರು ಜಂಟಿ ಸುದ್ದಿಗೋಷ್ಠಿ ನಡೆಸಿ, “ಸಮಾಜದಲ್ಲಿ ಗೊಂದಲ ಉಂಟಾದಾಗ, ಭಕ್ತರು ಮಠಕ್ಕೆ ಭೇಟಿ ನೀಡಿ, ಸಲಹೆಗಳನ್ನು ನೀಡುತ್ತಾರೆ. ಸಮಾಜದ ಅಂಕುಡೊಂಕುಗಳನ್ನು ಸರಿಪಡಿಸುವುದು ಮಠಾಧೀಶರ ಕರ್ತವ್ಯ ಕೂಡ ಆಗಿದೆ. ಹೀಗಾಗಿ, 25ರಂದು ಸಭೆ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಅಗ್ರಗಣ್ಯ ಮಠಾಧಿಪತಿಗಳು ಕೂಡ ಭಾಗವಹಿಸಲಿದ್ದಾರೆ’ ಎಂದು ಹೇಳಿದರು.

ತಿಪಟೂರಿನ ಷಡಕ್ಷರಿ ರುದ್ರಮುನಿ ಸ್ವಾಮೀಜಿ ಮಾತನಾಡಿ, “ಮಠಗಳು ಸಮಾಜಕ್ಕೆ ತಮ್ಮದೆ ಆದ ಕೊಡುಗೆ ನೀಡಿವೆ. ಮಠಾಧಿಪತಿಗಳ ಸಾಲಿನ ರಾಜ್ಯಕ್ಕೆ ವಿಶಿಷ್ಟ ಸ್ಥಾನಮಾನವಿದೆ. ಸಮಾಜದಲ್ಲಿ ಗೊಂದಲವಾದಾಗ ಜನ ಮಠಕ್ಕೆ ಭೇಟಿ ನೀಡುತ್ತಾರೆ. ಸಲಹೆಗಳನ್ನ ಕೇಳುತ್ತಾರೆ. ಸಮಾಜದ ಅಂಕುಡೊಂಕು ಸರಿಪಡಿಸಬೇಕು. ಇದು ಯಾವೊಂದು ಸಮುದಾಯದ ಅಥವಾ ಸಾರ್ವಜನಿಕ ಸಭೆ ಅಲ್ಲ; ಮಠಾಧಿಪತಿಗಳ ಸಭೆ ಆಗಿದೆ. ಇಲ್ಲಿ ರಾಜಕೀಯ ಸೇರಿದಂತೆ ವರ್ತಮಾನದ ಎಲ್ಲ ವಿಚಾರಗಳು ಚರ್ಚೆ ಆಗಲಿವೆ’ ಎಂದರು.

ಬಾಳೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಮಾತನಾಡಿ, “ವರ್ತಮಾನದ ವಿಚಾರಗಳ ಚರ್ಚೆಗೆ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶದ ಉದ್ದೇಶ ರಾಜ್ಯದ ಹಿತರಕ್ಷಣೆಯಾಗಿದೆ. ಮಠಾಧಿಪತಿ ಗಳ ಕರ್ತವ್ಯ ಕುರಿತು ಚಿಂತನೆ ನಡೆಯಲಿದೆ. ಯಾವುದೇ ವ್ಯಕ್ತಿ ಕುರಿತು ಸಮಾವೇಶ ಮಾಡುತ್ತಿಲ್ಲ. ಹಲವು ಧ್ಯೇಯೋದ್ದೇಶಗಳನ್ನ ಕುರಿತು ಚರ್ಚಿಸಲಿ ದ್ದೇವೆ. ರಾಜ್ಯದ ಮಠಾಧಿಪತಿಗಳು ಶನಿವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. ಎಲ್ಲರಿಗೂ ವಸತಿ,ಊಟದ ವ್ಯವಸ್ಥೆ ಮಾಡಲಾಗುತ್ತದೆ’ ಎಂದು ಹೇಳಿದರು.

ರಾಜಕಾರಣಕ್ಕೆ ಮಠಾಧೀಶರ ಮಧ್ಯಪ್ರವೇಶದ ಬಗ್ಗೆ ಪ್ರತಿಕ್ರಿಯಿಸಿದ ದಿಂಗಾಲೇಶ್ವರ ಸ್ವಾಮೀಜಿ, ” ನಾವು ಯಾವುದೇ ಹೊಸ ಸಂಪ್ರದಾಯ ಮಾಡಿಕೊಂಡಿಲ್ಲ. ಶಿಕ್ಷಣ ಸಂಸ್ಥೆಗಳನ್ನು ಮಠಗಳುಕಟ್ಟಿವೆ. ಶಿಕ್ಷಣದಕೆಲಸಗ ಳನ್ನುಮಾಡಿಕೊಳ್ಳಬೇಕಾದರೆ ಬರಬೇಕಾಗುತ್ತದೆ. ಯಾವುದೇ ಪಕ್ಷದ ಪರ ಮಠಗಳು ನಿಂತಿಲ್ಲ. ಅನ್ಯಾಯವಾದಾಗ ಮಠಾಧೀಶರು ಮಧ್ಯಪ್ರವೇಶ ಮಾಡುತ್ತಾರೆ. ವ್ಯಕ್ತಿಗೆ ಅನ್ಯಾಯವಾದಾಗ ಕೇಳುವು ದರಲ್ಲಿ ತಪ್ಪಿಲ್ಲ. ಎಲ್ಲಿ ಅನ್ಯಾಯ ನಡೆಯುತ್ತದೆಯೋ ಅಲ್ಲಿ ಮಾರ್ಗದರ್ಶನ ಮಾಡಬೇಕಾಗುತ್ತದೆ’ ಎಂದು ಸಮಜಾಯಿಷಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಪುಷ್ಪಗಿರಿ ಸಂಸ್ಥಾನದ ಸೋಮಶೇಖರ ಸ್ವಾಮೀಜಿ ಸೇರಿದಂತೆ ಬೊಮ್ಮನಹಳ್ಳಿ, ಅಗಡಿ ಸೂಗೂರು ಅರಕಲಗೂಡು, ಶಿಗ್ಗಾವಿ, ಅಕ್ಕಿಆಲೂರು ಸ್ವಾಮೀಜಿಗಳು ಉಪಸ್ಥಿತರಿದ್ದರು.

ಕಾಣಿಕೆ ನೀಡುವುದು ಸಂಸ್ಕೃತಿ; ಸ್ವಾಮೀಜಿ ಸಮಜಾಯಿಷಿ ಸಚಿವರು ಕಾಗದ ತೋರಿಸಿದ್ದಕ್ಕೆ ಅಷ್ಟು ಸುದ್ದಿ ಆಯಿತು. ನಂತರ ಅದರಲ್ಲಿರುವುದು ಗೊತ್ತಾದ
ನಂತರ ಮೌನಕ್ಕೆ ಶರಣಾದಿರಿ ಎಂದು ದಿಂಗಾಲೇಶ್ವರ ಸ್ವಾಮೀಜಿ ತೀಕ್ಷ್ಣವಾಗಿ ಹೇಳಿದರು. ಮುಖ್ಯಮಂತ್ರಿ ನಿವಾಸದಲ್ಲಿ ಮಠಾಧೀಶರಿಗೆ ಕವರ್‌ ನೀಡಿದ ಬಗ್ಗೆ ಪ್ರಸ್ತಾಪಿಸಿದ ಅವರು, ಕವರ್‌ನಲ್ಲಿ ಏನೂ ಇರಲಿಲ್ಲ. ಮಠಾಧೀಶರಿಗೂ ಪತ್ರಕೊಟ್ಟಿದ್ದಾರೆ. ಇದನ್ನೇಬೇರೆ ರೀತಿಯಲ್ಲಿ ತೋರಿಸಿದ್ದು ಮನಸ್ಸಿನ ವಿಕೃತಿ ತೋರಿಸುತ್ತದೆ. ಅಷ್ಟಕ್ಕೂ ಮಠಾಧೀಶರು ಹೋದಾಗ ಹಣ್ಣುಹಂಪಲು ಕೊಡುತ್ತಾರೆ. ಮನೆಗಳಿಗೆ ಬಂದಾಗ ಭಕ್ತರು ಅಷ್ಟೇ ಯಾಕೆ ನೀವೇ ಕೊಡು
ತ್ತೀರಿ. ಅದನ್ನೇ ಬೇರೆ ರೀತಿಯಲ್ಲಿ ಬಿಂಬಿಸಿದರೆ ಏನು ಮಾಡುವುದು? ಕಾಣಿಕೆ ಕೊಡುವ ಸಂಸ್ಕೃತಿ ಭಕ್ತರಲ್ಲಿದೆ. ಇದಕ್ಕೆ ಬೇರೆ ಅರ್ಥಮಾಡಿಕೊಳ್ಳುವುದು ಸರಿಯಲ್ಲ ಎಂದು ಖಾರವಾಗಿ ಹೇಳಿದರು.

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.