ಸ್ವಾಜಿಲ್ಯಾಂಡ್ ನಗರ ಪ್ರದೇಶಿಗರಿಗೆ ಆಹಾರ ಪೂರೈಕೆ ಇಲ್ಲ
Team Udayavani, Apr 30, 2020, 7:30 PM IST
ಮಣಿಪಾಲ: ಸುಮಾರು 1.3ಕೋಟಿಯಷ್ಟು ಜನಸಂಖ್ಯೆ ಹೊಂದಿರುವ ಸ್ವಾಜಿಲ್ಯಾಂಡ್ನಲ್ಲಿ ಈಗಾಗಲೇ ಲಕ್ಷಾಂತರ ಮಂದಿ ನಿರುದ್ಯೋಗಿಗಳಾಗಿದ್ದಾರೆ. ಪರಿಣಾಮ ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಈ ಹೊತ್ತಿನಲ್ಲೇ ಸರಕಾರ ಪಟ್ಟಣ ಮತ್ತು ನಗರಗಳಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಆಹಾರ ಪೂರೈಸುವುದಿಲ್ಲ ಎಂದು ತಿಳಿಸಿದೆ.
ಈ ಕುರಿತು ಸ್ವಾಜಿ ಪ್ರಧಾನಿ ಆಂಬ್ರೋಸ್ ಡ್ಲಮಿನಿ ಅವರು ಮಾಧ್ಯಮ ಪ್ರಕಟನೆ ಹೊರಡಿಸಿದ್ದು, ದೇಶದ ನಾಲ್ಕು ಪ್ರದೇಶಗಳಲ್ಲಿ ವಾಸಿಸುತ್ತಿರುವ 63 ಸಾವಿರ ಕುಟುಂಬಗಳ 3 ಲಕ್ಷಕ್ಕೂ ಹೆಚ್ಚು ಜನರಿಗೆ ಆಹಾರವನ್ನು ಪೂರೈಸಲಾಗುವುದು ಎಂದು ತಿಳಿಸಿದ್ದಾರೆ.
ಇದರ ಬೆನ್ನಿಗೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆಯ ವಕ್ತಾರ ವಂಡಿಲೆ ಮಾವುಸೊ, ನಗರ ಪ್ರದೇಶಗಳಲ್ಲಿನ ಜನರಿಗೆ ಸರಕಾರದಿಂದ ಆಹಾರದ ನೆರವು ಸಿಗದು ಎಂದು ಘೋಷಿಸಿದ್ದು, ಗ್ರಾಮೀಣ ಜನರ ಕಷ್ಟಗಳಿಗೆ ಮಾತ್ರ ಸ್ಪಂದಿಸಲಿದೆ ಎಂದು ಹೇಳಿದ್ದಾರೆ.
ಆದರೆ ನಗರಗಳ ಬೀದಿ ಬದಿಗಳಲ್ಲಿ ತರಕಾರಿ ಹಣ್ಣು ವ್ಯಾಪಾರಿಗಳು, ಕೂಲಿಕಾರರು, ಸಲೂನ್ ನಡೆಸುವವರು ಸೇರಿದಂತೆ ಸಣ್ಣಪುಟ್ಟ ಉದ್ಯಮಗಳನ್ನು ನಡೆಸುವ ಕುಟುಂಬಗಳಿವೆ. ಜೀವನೋಪಾಯಕ್ಕಾಗಿ ನಗರವನ್ನೇ ಅವು ಅವಲಂಬಿಸಿವೆ. ಸದ್ಯ ಲಾಕ್ಡೌನ್ ನಿಯಮ ಜಾರಿ ಇರುವ ಕಾರಣ ಇವರೆಲ್ಲಾ ಆದಾಯವಿಲ್ಲದೇ, ಆಹಾರವಿಲ್ಲದೇ ಕಂಗಾಲಾಗಿದ್ದಾರೆ. ಸರಕಾರದ ಆದೇಶಕ್ಕೆ ಇವರೆಲ್ಲರೂ ಬೇಸರ ವ್ಯಕ್ತಪಡಿಸಿದ್ದಾರೆ.
ಸುಮಾರು 270 ಮಿಲಿಯನ್ ಮೊತ್ತದಷ್ಟು ಆರ್ಥಿಕ ನೆರವನ್ನು ಇಲ್ಲಿನ ಆಡಳಿತ ವ್ಯವಸ್ಥೆ ಘೋಷಿಸಿದ್ದು, ನಗರದ ಫ್ಲಾಟ್ಗಳಲ್ಲಿ, ಬಾಡಿಗೆ ಮನೆಗಳಲ್ಲಿ ವಾಸಿಸುವ ಜನರು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಲು ಅನರ್ಹ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ