ಸ್ವೀಡನ್: ನಿರುದ್ಯೋಗವೇ ಬಿಕ್ಕಟ್ಟು
Team Udayavani, Apr 27, 2020, 2:07 PM IST
ಮಣಿಪಾಲ : ಕೋವಿಡ್-19 ಸೃಷ್ಟಿಸಿರುವ ಅವಾಂತರದಿಂದ ಬಲಿಷ್ಠ, ಅಭಿವೃದ್ಧಿಶೀಲ ರಾಷ್ಟ್ರಗಳಿಂದ ಹಿಡಿದು ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ಪುಟಿದೇಳಿರುವ ಸಾಮಾನ್ಯ ಸಮಸ್ಯೆ ಎಂದರೆ ನಿರುದ್ಯೋಗ. ಬಹುತೇಕ ದೇಶಗಳಂತೂ ಆರ್ಥಿಕವಾಗಿ ಮಹಾಪತನಕ್ಕೆ ಗುರಿಯಾಗಿದ್ದು, ತಲೆದೋರುತ್ತಿರುವ ಸಂಕಷ್ಟಗಳಿಂದ ಹೊರಬರುವ ಬಗೆ ಯೋಚಿಸುತ್ತಿವೆ. ಇಂತಹ ಸ್ಥಿತಿಗೆ ಸ್ವೀಡನ್ ಹೊರತಾಗಿಲ್ಲ. ಈ ಹಿನ್ನಲೆಯಲ್ಲಿ ಕೋವಿಡ್-19 ಬಿಕ್ಕಟ್ಟಿನಿಂದಾಗಿ ದೇಶಕ್ಕೆ ಮುಂಬರುವ ಸವಾಲುಗಳ ಕುರಿತು ಮಾಧ್ಯಮ ಸಂದರ್ಶನದಲ್ಲಿ ಸ್ವೀಡನ್ನ ಉಪ ಪ್ರಧಾನಿ ಇಸಾಬೆಲ್ಲಾ ಲೆವಿನ್ ತಮ್ಮ ನಿಲುವನ್ನು ಹಂಚಿಕೊಂಡಿದ್ದು, ಪರಿಸ್ಥಿತಿ ನಿಯಂತ್ರಿಸುವಲ್ಲಿ ಸರಕಾರ ಅನುಸರಿಸುತ್ತಿರುವ ಮಾರ್ಗಗಳನ್ನು ವಿವರಿಸಿದ್ದಾರೆ.
ಕೆಲ ವಾರಗಳಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಬಂದು, ಸೋಂಕು ಪ್ರಸರಣ ಪ್ರಮಾಣ ಕಡಿಮೆಗೊಂಡು ಲಾಕ್ಡೌನ್ ತೆರವುಗೊಳ್ಳಬಹುದು. ಆದರೆ ಬಿಕ್ಕಟ್ಟಿನ ಅನಂತರ ದೇಶಕ್ಕೆ ನಿಜವಾದ ಅಗ್ನಿ ಪರೀಕ್ಷೆ ಎದುರಾಗಲಿದ್ದು, ಜೀವನವು ಸಂಪೂರ್ಣವಾಗಿ ಸಹಜ ಸ್ಥಿತಿಗೆ ಬರಲು ತಿಂಗಳುಗಳ್ಳೋ ಅಥವಾ ವರ್ಷಗಳೇ ಬೇಕಾಗಬಹುದು ಎಂದಿದ್ದಾರೆ ಅವರು.
ಇದೇ ವೇಳೆ ದೇಶದಲ್ಲಿ ತಲೆದೋರುತ್ತಿರುವ ನಿರುದ್ಯೋಗ ಸಮಸ್ಯೆಯನ್ನು ನಿಯಂತ್ರಿಸಲು ಶತಪ್ರಯತ್ನ ಮಾಡುತ್ತಿದ್ದು, ಸ್ವೀಡನ್ ಪ್ರತಿಯೋರ್ವ ಪ್ರಜೆಯ ಉದ್ಯೋಗ ಉಳಿಸಿಕೊಳ್ಳಲು ಆಡಳಿತ ವರ್ಗ ಹಗಲು ರಾತ್ರಿ ಶ್ರಮಿಸುತ್ತಿದೆ. ಆದರೆ ಆ ಪ್ರಯತ್ನ ಸಂಪೂರ್ಣವಾಗಿ ಫಲ ಕೊಡುತ್ತದೆ ಎಂದು ಖಚಿತವಾಗಿ ಹೇಳಲಾರೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ