ಕೋವಿಡ್ ವಿರುದ್ಧ ಹೋರಾಟ: ಮೊದಲ ಸಾಲಲ್ಲಿ ಸ್ವಿಟ್ಸರ್ಲಂಡ್‌


Team Udayavani, Jun 9, 2020, 1:00 PM IST

ಕೋವಿಡ್ ವಿರುದ್ಧ ಹೋರಾಟ: ಮೊದಲ ಸಾಲಲ್ಲಿ ಸ್ವಿಟ್ಸರ್ಲಂಡ್‌

ಹಾಂಗ್‌ಕಾಂಗ್‌: ಚೀನದ ವುಹಾನ್‌ನಿಂದ ಪ್ರಾರಂಭವಾದ ಕೋವಿಡ್‌-19 ಸೋಂಕು ಇಂದು ವಿಶ್ವದ ಹಲವು ದೇಶಗಳಲ್ಲಿ ಹಾನಿಯನ್ನುಂಟುಮಾಡಿದ್ದು, ಜಗತ್ತಿನ ಬಹುತೇಕ ರಾಷ್ಟ್ರಗಳಿಗೆ ಹರಡಿ ಮರಣ ಮೃದಂಗ ಬಾರಿಸುತ್ತಲೇ ಇದೆ. ದಿನೇದಿನೆ ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಿರುವ ಕೋವಿಡ್ ಗೆ ಈಗಾಗಲೇ ವಿಶ್ವದ್ಯಾಂತ ಲಕ್ಷಾಂತರ ಜನ ಬಲಿಯಾಗಿದ್ದು, ಸೋಂಕಿತರ ಸಂಖ್ಯೆಯೂ ಏರುತ್ತಿದೆ. ಈ ಮಹಾಮರಿಯನ್ನು ಕಟ್ಟಿ ಹಾಕಲು ನಾನಾ ರಾಷ್ಟ್ರಗಳು ಕಠಿನ ಕ್ರಮಗಳನ್ನು ಜಾರಿ ಮಾಡಿದ್ದು, ಕಡಿವಾಣ ಹಾಕುವುದರಲ್ಲಿ ತಕ್ಕಮಟ್ಟಿನ ಯಶಸ್ಸು ಸಾಧಿಸಿದೆ.

ಈ ಹಿನ್ನೆಲೆಯಲ್ಲಿಯೇ ತಜ್ಞರ ತಂಡವೊಂದು ಸೋಂಕನ್ನು ಮಟ್ಟ ಹಾಕಿದ ವಿಶ್ವದ 100 ರಾಷ್ಟ್ರಗಳ ಕುರಿತಾಗಿ ವರದಿಯೊಂದನ್ನು ಸಿದ್ಧಪಡಿಸಿದ್ದು, ಸೋಂಕನ್ನು ನಿಯಂತ್ರಿಸುವಲ್ಲಿ ಮತ್ತು ಸುರಕ್ಷಾ ಕ್ರಮಗಳನ್ನು ಜಾರಿ ಮಾಡುವ ನಿಟ್ಟಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ರಾಷ್ಟ್ರಗಳನ್ನು ಪಟ್ಟಿ ಮಾಡಿದೆ. ಈ ಕುರಿತಾದ ವರದಿ ಇಲ್ಲಿದೆ.

2014ರಲ್ಲಿ ಹಾಂಗ್‌ಕಾಂಗ್‌ನಲ್ಲಿ ಸ್ಥಾಪನೆಯಾಗಿದ್ದ ಡೀಪ್‌ ನಾಲೆಡ್ಜ್ ವೆಂಚರ್ಸ್‌ ಒಡೆತನದ ಹೂಡಿಕೆ ಸಂಸ್ಥೆಯಾಗಿರುವ ಡೀಪ್‌ ನಾಲೆಡ್ಜ್ ಗ್ರೂಪ್‌ ಕಂಪೆನಿಯ ಒಕ್ಕೂಟವು ಸಮೀಕ್ಷೆ ನಡೆಸಿ ಈ ವರದಿಯನ್ನು ಸಿದ್ಧಪಡಿಸಿದೆ.

ವರದಿಯ ಪ್ರಕಾರ ಸ್ವಿಟ್ಸರ್ಲಂಡ್‌ ಕೋವಿಡ್‌-19 ಅನ್ನು ಎದುರಿಸುವಲ್ಲಿ ಸಫಲವಾಗಿದ್ದು, ಅತ್ಯಂತ ಸುರಕ್ಷಾ ಗುರುತಿಸಲ್ಪಟ್ಟು ಅಗ್ರಸ್ಥಾನದಲ್ಲಿದೆ. ಆಫ್ರಿಕಾ, ದಕ್ಷಿಣ ಅಮೆರಿಕ, ಮಧ್ಯಪ್ರಾಚ್ಯ ಹಾಗೂ ಏಷ್ಯಾ ಪೆಸಿಫಿಕ್‌ನ ಕೆಲವು ದೇಶಗಳು ಸದ್ಯ ಸೋಂಕಿನ ತೀವ್ರತೆಗೆ ತೆರೆದುಕೊಳ್ಳುವ ಮೂಲಕ ಹೆಚ್ಚು ಅಪಾಯಕಾರಿ ಪ್ರದೇಶಗಳಾಗಿ ಗುರುತಿಸಿಕೊಂಡಿವೆ ಎಂದು ವರದಿ ತಿಳಿಸಿದೆ.

ಈ ವರದಿಯು 130 ಪರಿಮಾಣಾತ್ಮಕ ಮತ್ತು ಗುಣಾತ್ಮಕ ಮಾನದಂಡಗಳನ್ನು ಆಧರಿಸಿಕೊಂಡಿದೆ. ಮುಖ್ಯವಾಗಿ ಸಂಪರ್ಕತಡೆ ನಿಯಮವನ್ನು ಪಾಲಿಸುವಲ್ಲಿ ದಕ್ಷತೆ, ಸೋಂಕು ಪ್ರದೇಶಗಳ ಕುರಿತಾದ ಮೇಲ್ವಿಚಾರಣೆ ಮತ್ತು ಪತ್ತೆ, ಆರೋಗ್ಯ ಸಿದ್ಧತೆ ಮತ್ತು ಸರಕಾರದ ದಕ್ಷತೆ ಸಹಿತ ಹಲವು ವಿಭಾಗಗಳಾಗಿ ವಿಂಗಡಿಸಲಾಗಿದ್ದು, ಸುಮಾರು 11,400ಕ್ಕೂ ದಾಟಾಗಳನ್ನು ಒಳಗೊಂಡಿತ್ತು. ಈ ಎಲ್ಲ ಅಂಶಗಳ ಅನ್ವಯ ವರದಿ ಸಿದ್ಧಪಡಿಸಿದ್ದು, ಮಾನದಂಡಗಳ ಆಧಾರದ ಮೇಲೆ ದರ್ಜೆಯನ್ನು ನೀಡಲಾಗಿದೆ.

ವಿಶೇಷವೆಂದರೆ ಬಿಕ್ಕಟ್ಟಿನ ಪ್ರಾರಂಭದಲ್ಲಿ ಅತಿ ಹೆಚ್ಚು ಸಾವು ನೋವುಗಳನ್ನು ಅನುಭವಿಸಿದ ರಾಷ್ಟ್ರಗಳೇ ಈಗ ಅತ್ಯುನ್ನತ ಸ್ಥಾನದಲ್ಲಿದ್ದು, ಪಿಡುಗಿನಿಂದ ಚೇತರಿಸಿಕೊಳ್ಳುವುದರೊಂದಿಗೆ ಆರ್ಥಿಕವಾಗಿಯೂ ಬಲವಾಗುತ್ತಿವೆ ಎಂದು ವರದಿ ಹೇಳಿದೆ.
ಟಾಪ್‌ ಹತ್ತು ರಾಷ್ಟ್ರಗಳಲ್ಲಿ ಸ್ವಿಟ್ಸರ್ಲಂಡ್‌, ಜರ್ಮನಿ, ಇಸ್ರೇಲ್‌, ಸಿಂಗಾಪುರ, ಜಪಾನ್‌, ಆಸ್ಟ್ರಿಯಾ, ಚೀನ, ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್‌ ಹಾಗೂ ದಕ್ಷಿಣ ಕೊರಿಯಾ ಗುರುತಿಸಿಕೊಂಡಿವೆ. ಭಾರತ 56ನೇ ಸ್ಥಾನದಲ್ಲಿದೆ.

ಪಟ್ಟಿಯ ಕೊನೆಯಲ್ಲಿ ಪನಾಮ, ಬ್ರೆಜಿಲ್‌, ಮೊರಾಕೊ, ಅಲ್ಜೀರಿಯಾ, ಹೊಂಡುರಾಸ್‌, ಪರಾಗ್ವೆ, ಪೆರು, ಇಂಡೋನೇಷ್ಯಾ, ಕಾಂಬೋಡಿಯಾ, ಲಾವೋಸ್‌, ಬಹಾಮಾಸ್‌ ಮೊದಲಾದ ದೇಶಗಳಿವೆ.

ನ್ಯೂಜಿಲೆಂಡ್‌ ಈಗ ಸೋಂಕುಮುಕ್ತ
ವೆಲ್ಲಿಂಗ್ಟನ್‌: ವಿಶ್ವದೆಲ್ಲೆಡೆ ಇದುವರೆಗೂ 70,81,811ಕ್ಕೂ ಹೆಚ್ಚು ಜನರಿಗೆ ಕೋವಿಡ್ ಸೋಂಕು ತಗುಲಿದ್ದು, 4,05,074ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈವರೆಗೆ 34,55,104ಕ್ಕೂ ಹೆಚ್ಚು ಜನ ಚೇತರಿಸಿಕೊಂಡಿದ್ದಾರೆ. ಈ ನಡುವೆಯೇ ಇತ್ತ ನ್ಯೂಜಿಲೆಂಡ್‌ ಸೋಂಕುಮುಕ್ತ ದೇಶವಾಗಿದ್ದು, ಸೋಂಕಿಗೆ ಒಳಗಾಗಿದ್ದ ಅಂತಿಮ ವ್ಯಕ್ತಿಯೂ ಚೇತರಿಸಿಕೊಂಡಿದ್ದಾನೆ ಎಂದು ನ್ಯೂಜಿಲೆಂಡ್‌ನ‌ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿ ಸುಮಾರು 17 ದಿನಗಳಿಂದ ಯಾವುದೇ ಹೊಸ ಕೋವಿಡ್‌-19 ಪ್ರಕರಣಗಳು ಪತ್ತೆಯಾಗಿಲ್ಲ. ಆ ಮೂಲಕ ದೇಶದಲ್ಲಿ ಸೋಂಕು ನಿರ್ಮೂಲನೆ ಆಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.
ಆದರೆ ಬೇರೆ ದೇಶಗಳಿಂದ ಸೋಂಕು ಮತ್ತೆ ನ್ಯೂಜಿಲೆಂಡ್‌ಗೆ ಹರಡುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿರುವ ಆರೋಗ್ಯ ಅಧಿಕಾರಿಗಳು, ಈ ನಿಟ್ಟಿನಲ್ಲಿ ಸಾಕಷ್ಟು ಮುಂಜಾಗರೂಕತೆ ಕೈಗೊಂಡಿದ್ದಾರೆ. ದೇಶದ ಗಡಿಗಳನ್ನು ಮುಚ್ಚಲಾಗಿದ್ದು, ಸೀಮಿತ ವರ್ಗಕ್ಕೆ ಕೆಲವು ವಿನಾಯಿತಿಗಳನ್ನು ನೀಡಲಾಗಿದೆ.

50 ಲಕ್ಷ ಜನಸಂಖ್ಯೆ ಹೊಂದಿರುವ ರಾಷ್ಟ್ರಕ್ಕೆ ಸೋಂಕನ್ನು ತೊಡೆದುಹಾಕಲು ಹಲವಾರು ಅಂಶಗಳು ಸಹಾಯ ಮಾಡಿವೆ. ಆರಂಭದ ದಿನಗಳಲ್ಲಿಯೇ ಅಲ್ಲಿನ ಪ್ರಧಾನಿ ಜಸಿಂಡಾ ಅಡೆರ್ನ್ ಅವರು ಕಟ್ಟುನಿಟ್ಟಾದ ಲಾಕ್‌ಡೌನ್‌ ಹೇರಿದ್ದರು. ಇದರ ಫಲವಾಗಿ ನ್ಯೂಜಿಲೆಂಡ್‌ ಕೋವಿಡ್ ಮುಕ್ತವಾಗಿದೆ ಎಂಬ ಅಭಿಪ್ರಾಯಗಳು ಕೇಳಿ ಬರುತ್ತಿವೆ.

ಟಾಪ್ ನ್ಯೂಸ್

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

man hits his wife because he could not afford the treatment!

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.