“ಟಿ20 ವಿಶ್ವಕಪ್‌ ಮುಂದೂಡಿಕೆಯನ್ನು ಐಪಿಎಲ್‌ ಲಾಭಕ್ಕೆ ಬಳಸುವುದಿಲ್ಲ’


Team Udayavani, May 23, 2020, 6:45 AM IST

“ಟಿ20 ವಿಶ್ವಕಪ್‌ ಮುಂದೂಡಿಕೆಯನ್ನು ಐಪಿಎಲ್‌ ಲಾಭಕ್ಕೆ ಬಳಸುವುದಿಲ್ಲ’

ಹೊಸದಿಲ್ಲಿ: ಆಸ್ಟ್ರೇಲಿಯದಲ್ಲಿ ನಡೆಯುವ ಟಿ20 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿ ಮುಂದೂಡಲ್ಪಟ್ಟರೂ ತಾನು ಈ ಅವಕಾಶವನ್ನು ಐಪಿಎಲ್‌ ನಡೆಸಲು ಬಳಸಿಕೊಳ್ಳುವುದಿಲ್ಲ ಎಂದು ಬಿಸಿಸಿಐ ಆಸ್ಟ್ರೇಲಿಯ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದೆ. ಅಕ್ಟೋಬರ್‌-ನವಂಬರ್‌ ತಿಂಗಳಲ್ಲಿ ಅವಕಾಶ ಸಿಕ್ಕಿದರಷ್ಟೇ ಇದನ್ನು ಐಪಿಎಲ್‌ಗೆ ಪರಿಗಣಿಸಲಾಗುವುದು ಎಂದಿದೆ.

ಅ. 18ರಿಂದ ಆಸೀಸ್‌ನ‌ಲ್ಲಿ ಟಿ20 ವಿಶ್ವಕಪ್‌ ಆರಂಭವಾಗಬೇಕಿದೆ. ಆದರೆ ಬಿಸಿಸಿಐ ಆಸ್ಟ್ರೇಲಿಯ ಕ್ರಿಕೆಟ್‌ ಮಂಡಳಿ ಮೇಲೆ ಒತ್ತಡ ಹೇರಿ ಐಪಿಎಲ್‌ಗೋಸ್ಕರ ಇದನ್ನು
ಮುಂದೂಡಲು ಪ್ರಯತ್ನಿಸುತ್ತಿದೆ ಎಂದು ಆಸೀಸ್‌ ಮಾಧ್ಯಮಗಳು ವರದಿ ಮಾಡಿವೆ.

ಐಸಿಸಿ ನಿರ್ಧಾರವೇ ಅಂತಿಮ
“ನಾವೇಕೆ ಟಿ20 ವಿಶ್ವಕಪ್‌ ಪಂದ್ಯಾವಳಿಯನ್ನು ಮುಂದೂಡಲು ಹೇಳುತ್ತೇವೆ? ಬಿಸಿಸಿಐ ಏಕೆ ಇದರಲ್ಲಿ ಮಧ್ಯ ಪ್ರವೇಶಿಸುತ್ತದೆ? ಇದು ಐಸಿಸಿ ನಡೆಸುವ ಕೂಟವೇ ಹೊರತು ನಮ್ಮ ನಡುವಿನ ದ್ವಿಪಕ್ಷೀಯ ಸರಣಿ ಅಲ್ಲ. ಐಸಿಸಿ ಹಾಗೂ ಆಸ್ಟ್ರೇಲಿಯ ಕ್ರಿಕೆಟ್‌ ಮಂಡಳಿಯ ತೀರ್ಮಾನವೇ ಇಲ್ಲಿ ಅಂತಿಮ’ ಎಂದು ಬಿಸಿಸಿಐ ಖಜಾಂಚಿ ಅರುಣ್‌ ಸಿಂಗ್‌ ಧುಮಾಲ್‌ ಹೇಳಿದ್ದಾರೆ.

ಕ್ರಿಕೆಟ್‌ ಆಸ್ಟ್ರೇಲಿಯದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆವಿನ್‌ ರಾಬರ್ಟ್ಸ್ ಕೂಡ ಇದೇ ಧಾಟಿಯಲ್ಲಿ ಮಾತಾಡಿದ್ದಾರೆ. “ಈ ಬಗ್ಗೆ ನಮಗೆ ಸ್ಪಷ್ಟತೆ ಇಲ್ಲ. ಪರಿಸ್ಥಿತಿ ಸುಧಾರಿಸಿದರೆ ಪಂದ್ಯಾವಳಿ ವೇಳಾಪಟ್ಟಿಯಂತೆ ನಡೆಯಲೂಬಹುದು. ಆದರೆ ಅಂತಿಮ ನಿರ್ಧಾರವೇನಿದ್ದರೂ ಐಸಿಸಿಯದೇ ಆಗಿರುತ್ತದೆ’ ಎಂದು ಹೇಳಿದ್ದಾರೆ.

ಸುಮಾರು 530 ಮಿ. ಡಾಲರ್‌ ಲಾಭವನ್ನು ತಂದುಕೊಡುವ 2020ರ ಐಪಿಎಲ್‌ ಪಂದ್ಯಾವಳಿ ಕೊರೊನಾ ಕಾರಣದಿಂದ ಮುಂದೂಡಲ್ಪಟ್ಟರೂ ಇದು ಯಾವಾಗ ನಡೆದೀತು ಎಂಬ ಬಗ್ಗೆ ಯಾವುದೇ ಅಂತಿಮ ತೀರ್ಮಾನಕ್ಕೆ ಬರಲಾಗಿಲ್ಲ. ಸೂಕ್ತ ದಿನಾಂಕಕ್ಕಾಗಿ ಬಿಸಿಸಿಐ ಹೊಂಚು ಹಾಕುತ್ತಲೇ ಇದೆ. ಟಿ20 ವಿಶ್ವಕಪ್‌ ಪಂದ್ಯಾವಳಿ ಮುಂದೂಡಲ್ಪಟ್ಟರೆ ಐಪಿಎಲ್‌ ಹಾದಿ ಸುಗಮ ಎಂಬುದೊಂದು ಲೆಕ್ಕಾಚಾರ.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.