ಟಿ20 ವಿಶ್ವಕಪ್‌ ಮುಂದೂಡಿಕೆ ಬಹುತೇಕ ಖಚಿತ

ಮೇ 26-28ರ ಐಸಿಸಿ ಸಭೆಯಲ್ಲಿ ಅಂತಿಮ ನಿರ್ಧಾರ ನಿರೀಕ್ಷೆ

Team Udayavani, May 23, 2020, 6:10 AM IST

ಟಿ20 ವಿಶ್ವಕಪ್‌ ಮುಂದೂಡಿಕೆ ಬಹುತೇಕ ಖಚಿತ

ಮುಂಬಯಿ: ಕೋವಿಡ್‌-19 ಮಹಾಮಾರಿಯಿಂದ ಆಸ್ಟ್ರೇಲಿಯ ಆತಿಥ್ಯದಲ್ಲಿ ಇದೇ ವರ್ಷ ನಡೆಯಬೇಕಿದ್ದ ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್‌ ಕ್ರಿಕೆಟ್‌ ಕೂಟ ಮುಂದೂಡುವುದು ಬಹುತೇಕ ಖಚಿತವೆನಿಸಿದೆ. ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ ಎಂದು ಮೂಲಗಳು ತಿಳಿಸಿವೆ.

ಎಲ್ಲವೂ ಅಂದುಕೊಂಡಂತೆ ನಡೆದರೆ ಅಕ್ಟೋಬರ್‌-ನವೆಂಬರ್‌ ತಿಂಗಳಲ್ಲಿ ಆಸ್ಟ್ರೇಲಿಯದಲ್ಲಿ ಟಿ20 ವಿಶ್ವಕಪ್‌ ಟೂರ್ನಿ ಆರಂಭವಾಗಬೇಕಿತ್ತು ಆದರೆ ಇದೀಗ ಬಂದಿರುವ ಮಾಹಿತಿಗಳ ಪ್ರಕಾರ ಟಿ20 ವಿಶ್ವಕಪ್‌ ಮುಂದೂಡಲಾಗುತ್ತಿದ್ದು, ಈ ಬಗ್ಗೆ ಅಧಿಕೃತ ಪ್ರಕಟನೆಯು ಮುಂದಿನ ವಾರ ಹೊರಬೀಳಲಿದೆ. ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿ (ಐಸಿಸಿ) ಸಭೆಯು ಮೇ 26ರಿಂದ 28ರ ವರೆಗೆ ನಡೆಯುತ್ತದೆ. ಈ ವೇಳೆ ವಿಶ್ವಕಪ್‌ ಬಗ್ಗೆ ಅಂತಿಮ ನಿರ್ಧಾರವನ್ನು ನಿರೀಕ್ಷಿಸಬಹುದಾಗಿದೆ.

ಮುಂದಿನ ವರ್ಷ ನಡೆಯುವ ಸಾಧ್ಯತೆ
ಈ ವಿಶ್ವಕಪ್‌ ಕೂಟ 2021ರ ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಅವಧಿಯಲ್ಲಿ ಆಯೋಜನೆಯಾಗುವ ಸಾಧ್ಯತೆಯಿದೆ. ಆದರೆ ಮೂಲಗಳ ಪ್ರಕಾರ ಖಚಿತವಾಗಿ ಇಂತಹದ್ದೇ ತಿಂಗಳಿನಲ್ಲಿ ನಡೆಯತ್ತದೆ ಎನ್ನುವುದನ್ನು ಹೇಳಲು ಈಗ ಸಾಧ್ಯವಿಲ್ಲ. ಏಕೆಂದರೆ ಈ ವೇಳೆಯಲ್ಲಿ ಇಂಗ್ಲೆಂಡ್‌ ತಂಡದ ಭಾರತ ಪ್ರವಾಸದ ಮೇಲೂ ಪರಿಣಾಮ ಬೀಳಲಿದೆ ಮತ್ತು ಈ ಪ್ರಸ್ತಾವಕ್ಕೆ ಜಾಹೀರಾತು ಹಕ್ಕುದಾರರು ಒಪ್ಪಿಗೆ ಸೂಚಿಸುವ ಸಾಧ್ಯತೆ ಕಡಿಮೆಯಾಗಿದೆ ಎನ್ನಲಾಗಿದೆ.

ಬಿಸಿಸಿಐ ಮನಸ್ಸು ಮಾಡಬೇಕು
ಐಸಿಸಿ ಫ್ಯೂಚರ್‌ ಟೂರ್‌ ಪ್ರೋಗ್ರಾಂನಂತೆ ಮುಂದಿನ ಟಿ20 ವಿಶ್ವಕಪ್‌ ಭಾರತದಲ್ಲಿ ನಡೆಯಬೇಕು. ಹಾಗಾಗಿ ಮುಂದಿನ ವರ್ಷ ಚುಟುಕು ವಿಶ್ವಕಪ್‌ ಆಯೋಜಿಸಲು ಆಸೀಸ್‌ಗೆ ಅವಕಾಶ ನೀಡಲು ಬಿಸಿಸಿಐ ದೊಡ್ಡ ಮನಸ್ಸು ಮಾಡಬೇಕಿದೆ. ಹಾಗೆಯೇ ಭಾರತ ಇನ್ನೂ ಒಂದು ವರ್ಷ ಬಿಟ್ಟು 2022ನೇ ಇಸವಿಯಲ್ಲಿ ಟಿ20 ವಿಶ್ವಕಪ್‌ ಆಯೋಜಿಸಬಹುದಾಗಿದೆ. ಆದರೆ ಇದಕ್ಕೂ ಸಾಧ್ಯತೆ ಕಡಿಮೆ ಎನ್ನಲಾಗಿದೆ.

2022ರಲ್ಲಿ ಆತಿಥ್ಯ
ಅಂತಿಮವಾಗಿ ಆಸ್ಟ್ರೇಲಿಯ ಎರಡು ವರ್ಷ ಬಿಟ್ಟು 2022ರಲ್ಲಿ ಟಿ20 ವಿಶ್ವಕಪ್‌ ಆಯೋಜಿಸುವ ಸಾಧ್ಯತೆಯಿದೆ. ಬೇರೆ ಯಾವುದೇ ಐಸಿಸಿ ಪ್ರಮುಖ ಟೂರ್ನಿಗಳು ಆಯೋಜನೆಯಾಗದಿದ್ದರೆ ಇದಕ್ಕೆ ಅವಕಾಶವಿರುತ್ತದೆ. ಒಟ್ಟಿನಲ್ಲಿ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿ ಆಯೋಜನೆಗೆ ಆಸ್ಟ್ರೇಲಿಯ ಸರಕಾರದ ನಿರ್ಧಾರ ಅಂತಿಮವೆನಿಸಲಿದೆ. 16 ತಂಡಗಳು ಭಾಗವಹಿಸುವ ಟೂರ್ನಿಯನ್ನು ಆಯೋಜಿಸುವಾಗ ದೊಡ್ಡ ಸವಾಲೇ ಎದುರಾಗಲಿದೆ. ಮುಚ್ಚಿದ ಕ್ರೀಡಾಂಗಣದಲ್ಲಿ ಆಯೋಜಿಸುವ ಸಾಧ್ಯತೆ ಕಡಿಮೆಯಾಗಿದೆ. ಯಾಕೆಂದರೆ ಇದು ಆದಾಯದ ಮೇಲೆ ಪರಿಣಾಮ ಬೀರಲಿದೆ. ಒಟ್ಟಿನಲ್ಲಿ ಅಂತಿಮ ನಿರ್ಧಾರ ಇದೇ 28ರಂದು ಹೊರಬೀಳಲಿದೆ.

ಟಾಪ್ ನ್ಯೂಸ್

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.