ತಬ್ಲಿಘಿ ಹಿಂದಿದೆ ಜೆಹಾದ್ ಹುನ್ನಾರ: ಶೋಭಾ
Team Udayavani, Apr 5, 2020, 10:08 AM IST
ಚಿಕ್ಕಮಗಳೂರು: ದಿಲ್ಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ನಡೆದ ತಬ್ಲಿ ಸಮಾವೇಶದಲ್ಲಿ ಭಾಗವಹಿಸಿದ್ದ ಅನೇಕರು ನಾಪತ್ತೆ ಯಾಗಿದ್ದಾರೆ. ದೇಶಾದ್ಯಂತ ಕೋವಿಡ್ 19 ಹಬ್ಬಿಸುವ ದುಷ್ಕೃತ್ಯ ನಡೆದಿದ್ದು, ಇದರ ಹಿಂದೆ ಕೋವಿಡ್ 19 ಜೆಹಾದಿ ವಾಸನೆ ಕಂಡುಬರುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದರು.
ಪತ್ರಕರ್ತರೊಂದಿಗೆ ಮಾತನಾಡಿ, ದಿಲ್ಲಿ ಸಮಾವೇಶದಲ್ಲಿ ಭಾಗ ವಹಿಸಿದ್ದವರನ್ನು ಪತ್ತೆ ಹಚ್ಚುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದಾರೆ. ಆದರೆ ಅವರು ಕೋವಿಡ್ 19 ಮುಕ್ತ ಮಾಡಲು ಸಹಕಾರ ನೀಡುತ್ತಿಲ್ಲ ಎಂಬುದು ಅವರ ವರ್ತನೆಯಿಂದಲೇ ಗೊತ್ತಾ ಗುತ್ತಿದೆ. ಬೆಂಗಳೂರಿನ ಸಾದಿಕ್ ನಗರದ ಕೋವಿಡ್ 19 ಪೀಡಿತರ ಮಾಹಿತಿ ಕಲೆ ಹಾಕಲು ಆಶಾ ಕಾರ್ಯಕರ್ತೆ ಹೋದ ಸಂದರ್ಭ ಅವರ ಮೇಲೆ ಹಲ್ಲೆ ನಡೆದಿರುವುದು ಒಂದು ಸಮುದಾಯ ಕೊರೊನಾ ತಡೆಗೆ ಸಹಕಾರ ನೀಡುತ್ತಿಲ್ಲ ಎಂಬುದನ್ನು ಸಾಬೀತು ಮಾಡಿದೆ ಎಂದರು.
ಯಾರು ಈ ನೆಲದ ಕಾನೂನನ್ನು ಗೌರವಿಸುವುದಿಲ್ಲವೋ ಅವರಿಗೆ ಮುಂದಿನ ದಿನಗಳಲ್ಲಿ ಕಾನೂನಿನ ರುಚಿ ತೋರಿಸಬೇಕಾಗುತ್ತದೆ. ನಮ್ಮ ನೆಲದ ಕಾನೂನು ಪಾಲನೆ ಮಾಡುವುದಿಲ್ಲ ಎಂದರೆ ಅದರ ಹಿಂದೆ ಯಾವುದೋ ಷಡ್ಯಂತ್ರ ನಡೆಯುತ್ತಿದೆ ಎಂದು ಅರ್ಥ. ಯಾರು ಕೋವಿಡ್ 19 ಸೋಂಕು ಇನ್ನೊಬ್ಬರಿಗೆ ಹಬ್ಬಿಸುತ್ತಿದ್ದಾರೋ ಅವರನ್ನು ಪತ್ತೆ ಮಾಡಿ ಸರಕಾರ ಉಗ್ರ ಶಿಕ್ಷೆಗೆ ಗುರಿಪಡಿಸುತ್ತದೆ ಎಂಬ ವಿಶ್ವಾಸವನ್ನು ಕರಂದ್ಲಾಜೆ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್