ಕಲಬುರಗಿ: ಯಡ್ರಾಮಿ ತಹಶೀಲ್ದಾರ್ ಗೂ ಕೋವಿಡ್ ಸೋಂಕು ದೃಢ !
Team Udayavani, Jul 25, 2020, 9:02 PM IST
ಕಲಬುರಗಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹೊತ್ತಿನಲ್ಲೇ ಯಡ್ರಾಮಿ ತಾಲೂಕಿನ ತಹಶೀಲ್ದಾರ್ ಬಸಲಿಂಗಪ್ಪ ನಾಯ್ಕೋಡಿ ಅವರಿಗೂ ಸೋಂಕು ದೃಢಪಟ್ಟಿದೆ.
ತಹಶೀಲ್ದಾರ್ ನಾಯ್ಕೋಡಿ ಆರಂಭದಿಂದಲೂ ಕೋವಿಡ್ ನಿಯಂತ್ರಣ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಕ್ವಾರಂಟೈನ್ ಸೆಂಟರ್ ಗಳಿಗೂ ಅವರು ಭೇಟಿ ನೀಡಿದ್ದರು. ಅನ್ಯಾರೋಗ್ಯ ಕಾರಣದಿಂದ ಕಳೆದ ನಾಲ್ಕು ದಿನಗಳಿಂದ ಅವರು ಕಚೇರಿಗೆ ಆಗಮಿಸಿರಲಿಲ್ಲ. ಕೋವಿಡ್ ಲಕ್ಷಣಗಳ ಹಿನ್ನೆಲೆಯಲ್ಲಿ ಪರೀಕ್ಷೆಗೆ ಒಳಪಟ್ಟಿದ್ದರು ಎಂದು ಗೊತ್ತಾಗಿದೆ.
ಕೋವಿಡ್-19 ಪಾಸಿಟಿವ್ ಇರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಕಲಬುರಗಿ ನಗರದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.