Rabkavi Banhatti; ನೀರಿನ ಸಮಸ್ಯೆಯಾಗದಂತೆ ಕ್ರಮ ತೆಗೆದುಕೊಳ್ಳಿ: ಶಾಸಕ ಸಿದ್ದು ಸವದಿ

338 ಕೊಳವೆ ಬಾವಿ, 13 ತೆರೆದ ಬಾವಿಗಳು; 85 ಖಾಸಗಿ ಕೊಳವೆ ಬಾವಿಗಳನ್ನು ಗುರುತಿಸಲಾಗಿದೆ

Team Udayavani, Mar 15, 2024, 6:19 PM IST

Rabkavi Banhatti; ನೀರಿನ ಸಮಸ್ಯೆಯಾಗದಂತೆ ಕ್ರಮ ತೆಗೆದುಕೊಳ್ಳಿ: ಶಾಸಕ ಸಿದ್ದು ಸವದಿ

ರಬಕವಿ ಬನಹಟ್ಟಿ: ಮುಂದಿನ ಹದಿನೈದು ಇಪ್ಪತ್ತು ದಿನಗಳಲ್ಲಿ ಸಮೀಪದ ಕೃಷ್ಣಾ ನದಿ ಸಂಪೂರ್ಣವಾಗಿ ಬತ್ತಲಿದ್ದು, ನಗರಸಭೆಯ ಅಧಿಕಾರಿಗಳು ಈಗಿನಿಂದಲೇ ನೀರು ಪೂರೈಕೆಯ ಬಗ್ಗೆ ಗಮನ ನೀಡಬೇಕು ಮತ್ತು ನಗರಸಭೆಯ ವ್ಯಾಪ್ತಿಯ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಲು ಸನ್ನದ್ಧರಾಗಬೇಕು ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.

ಶುಕ್ರವಾರ ಇಲ್ಲಿನ ನಗರಭೆಯ ಸಭಾ ಭವನದಲ್ಲಿ ನೀರಿನ ಸಮಸ್ಯೆ ಕುರಿತು ಹಮ್ಮಿಕೊಂಡ ಸಭೆಯಲ್ಲಿ ಮಾತನಾಡಿದರು.

ವಾರ್ಡ್ ನಲ್ಲಿರುವ ಸಮಸ್ಯೆಗಳ ಕುರಿತು ಸದಸ್ಯರಿಂದ ಮಾಹಿತಿಯನ್ನು ಪಡೆದುಕೊಳ್ಳಲಾಗಿದೆ. ನಗರೋತ್ಥಾನ ಯೋಜನೆ ಅಡಿಯಲ್ಲಿ ನೀರು ಪೂರೈಕೆಗೆ ಸಂಬಂಧಪಟ್ಟಂತೆ ಇರುವ ಟೆಂಡರ್ ಗಳನ್ನು ಆದಷ್ಟು ಬೇಗನೆ ಕರೆದು ಕಾಮಗಾರಿಯನ್ನು ಆರಂಭಿಸುವಂತೆ ಮೇಲಾಧಿಕಾರಿಗಳ ಜೊತೆಗೆ ಚರ್ಚೆ ಮಾಡಲಾಗಿದೆ.

ನಗರಸಭೆ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆಯನ್ನು ನಿವಾರಣೆ ಮಾಡಲು ರೂ. 5೦ ಲಕ್ಷ ಪರಿಹಾರ ಧನವನ್ನು ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಪತ್ರದ ಮೂಲಕ ಕೇಳಲಾಗುವುದು. ನೀರಿನ ತೊಂದರೆ ಇದ್ದಲ್ಲಿ ನಗರಸಭೆಯ ಅಧಿಕಾರಿಗಳು ಗಮನ ನೀಡಬೇಕು ನಗರಸಭೆಯ ಸದಸ್ಯರು ನೀರಿನ ಸಮಸ್ಯೆಯನ್ನು ಎದುರಿಸುವ ನಿಟ್ಟಿನಲ್ಲಿ ಎಲ್ಲರೂ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.

ಪೌರಾಯುಕ್ತ ಜಗದೀಶ ಈಟಿ ಮಾತನಾಡಿ ರಬಕವಿ ಬನಹಟ್ಟಿ ನಗರಸಭೆಯ ವ್ಯಾಪ್ತಿಯಲ್ಲಿ ಈಗಾಗಲೇ 338 ಕೊಳವೆ ಬಾವಿಗಳಿವೆ. ಅದರಲ್ಲಿ 326 ಕಾರ್ಯ ಮಾಡುತ್ತಿವೆ. ಉಳಿದ ಕೊಳವೆ ಬಾವಿಗಳ ದುರಸ್ತಿ ಕಾರ್ಯವನ್ನು ಕೂಡಾ ಕೈಗೊಳ್ಳಲಾಗುವುದು. 13 ತೆರೆದ ಬಾವಿಗಳು ಇದ್ದು, ಅವುಗಳನ್ನು ಕೂಡಾ ಸ್ವಚ್ಛಗೊಳಿಸಿ ನೀರು ಪೂರೈಕೆಗೆ ಬಳಸಿಕೊಳ್ಳಲಾಗುವುದು ಮತ್ತು 85 ಖಾಸಗಿ ಕೊಳವೆ ಬಾವಿಗಳನ್ನು ಗುರುತಿಸಲಾಗಿದೆ.

ಕೊಳವೆ ಬಾವಿಗಳ ಮಾಲೀಕರೊಂದಿಗೆ ಒಡಂಬಡಿಕೆ ಮಾಡಿಕೊಂಡು ನೀರು ಪೂರೈಸಿದ ಕೊಳವೆ ಬಾವಿಗಳ ಮಾಲೀಕರ ವಿದ್ಯುತ್ ಬಿಲ್ ನ್ನು ನಗರಸಭೆಯಿಂದ ಪಾವತಿಸಲಾಗುವುದು. ನೀರಿನ ಸಮಸ್ಯೆಯನ್ನು ಎದುರಿಸುವ ಸಂದರ್ಭದಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು.

ಎಂಜಿನಿಯರ್ ರಾಘವೇಂದ್ರ ಕುಲಕರ್ಣಿ, ವೈಶಾಲಿ ಹಿಪ್ಪರಗಿ, ಸುರೇಶ ಬಾಗೇವಾಡಿ, ಸಂಜಯ ತೆಗ್ಗಿ, ಶ್ರೀಶೈಲ ಬೀಳಗಿ, ಯಲ್ಲಪ್ಪ ಕಟಗಿ, ಬಸವರಾಜ ಗುಡೋಡಗಿ, ಶ್ರೀಶೈಲ ಆಲಗೂರ, ಶಿವಾನಂದ ಬುದ್ನಿ, ಅರುಣ ಬುದ್ನಿ, ವಿಜಯ ಕಲಾಲ, ಗೌರಿ ಮಿಳ್ಳಿ, ಮಾರುತಿ ಗಾಡಿವಡ್ಡರ, ಜಯಶ್ರೀ ಬಾಗೇವಾಡಿ, ದುರ್ಗವ್ವ ಹರಿಜನ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.