ತಲ್ಲೂರು – ಉಪ್ಪಿನಕುದ್ರು ರಸ್ತೆ ವಿಸ್ತರಣೆಗೆ ಆಗ್ರಹ


Team Udayavani, Mar 16, 2021, 5:10 AM IST

ತಲ್ಲೂರು – ಉಪ್ಪಿನಕುದ್ರು ರಸ್ತೆ ವಿಸ್ತರಣೆಗೆ ಆಗ್ರಹ

ತಲ್ಲೂರು: ಉಪ್ಪಿನ ಕುದ್ರುವಿನಿಂದ ತಲ್ಲೂರಿಗೆ ಸಂಪರ್ಕ ಕಲ್ಪಿಸುವ ಸುಮಾರು ಮೂರೂವರೆ ಕಿ.ಮೀ. ದೂರದ ಮುಖ್ಯ ರಸ್ತೆ ಕಿರಿದಾಗಿದ್ದು, ಇದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಈಗ ಕೆಲವು ಮೀ. ದೂರದವರೆಗೆ ನಿರ್ವಹಣೆ ಮಾಡಲು ಮುಂದಾಗಿದ್ದು, ಇದರೊಂದಿಗೆ ವಿಸ್ತ ರಣೆ ಮಾಡಬೇಕು ಎನ್ನುವ ಬೇಡಿಕೆ ಇಲ್ಲಿನ ಗ್ರಾಮಸ್ಥರಿಂದ ಕೇಳಿ ಬಂದಿದೆ.

ತಲ್ಲೂರಿನಿಂದ ಉಪ್ಪಿನಕುದ್ರು, ಬೇಡರಕೊಟ್ಟಿಗೆ ಮತ್ತಿತರ ಹಲವು ಊರುಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದೆ. ತಲ್ಲೂರಿನಿಂದ ಆರಂಭಗೊಂಡು, ಉಪ್ಪಿನಕುದ್ರುವಿನ ಕೊನೆಯವರೆಗೆ ಈ ರಸ್ತೆ ಸುಮಾರು ಮೂರೂವರೆ ಕಿ.ಮೀ. ಉದ್ದವಿದೆ. ಆರಂಭದಿಂದ ಕೊನೆಯವರೆಗೂ ಈ ರಸ್ತೆ ಕಿರಿದಾಗಿದೆ. ವಾಹನ ಸವಾರರು ಕಷ್ಟಪಟ್ಟು ಸಂಚರಿಸುವಂತಾಗಿದೆ. ಇನ್ನು ಬಸ್‌ ಬಂದರೆ ಅಂತೂ ಬೈಕ್‌ ಹಾಗೂ ಇತರ ವಾಹನ ಸವಾರರ ಪಾಡು ಹೇಳತೀರದಂತಾಗಿದೆ.

ತಲಾ ಅರ್ಧ ಮೀಟರ್‌
ಈಗ ಈ ತಲ್ಲೂರು – ಉಪ್ಪಿನಕುದ್ರು ರಸ್ತೆ ಕಾಮಗಾರಿ ನಿರ್ವಹಣೆಗೆ ಲೋಕೋಪಯೋಗಿ ಇಲಾಖೆ ಮುಂದಾಗಿದೆ. ತಲ್ಲೂರು ಪೇಟೆಯಿಂದ ಆರಂಭಗೊಂಡು ಸುಮಾರು 600ರಿಂದ 700 ಮೀ. ದೂರದವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಅರ್ಧರ್ಧ ಮೀಟರ್‌ ವಿಸ್ತರಣೆ ಮಾಡಲಾಗುತ್ತಿದೆ. ಆದರೆ ಇದು ಅಗಲೀಕರಣ ಕಾಮಗಾರಿಯಲ್ಲ. ನಿರ್ವ ಹಣೆಯಷ್ಟೇ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ರಸ್ತೆಯ ಎರಡೂ ಬದಿಗಳಲ್ಲಿ ಅರ್ಧ ಮೀ. ವರೆಗೆ ಮಣ್ಣು ಅಗೆದು, ವೆಟ್‌ಮಿಕ್ಸ್‌ ಹಾಕಿ, ಡಾಮರು ಹಾಕಲಾಗುತ್ತಿದೆ.

ವಿಸ್ತರಣೆ ಮಾಡಿ
ಈ ಮಾರ್ಗದಲ್ಲಿ ಏಕಕಾಲದಲ್ಲಿ ಎರಡು ವಾಹನಗಳು ಸಂಚರಿಸುವುದು ಕಷ್ಟ. ಎದುರಿನಿಂದ ಯಾವುದಾದರೂ ಒಂದು ವಾಹನ ಬಂದರೆ, ಒಂದೋ ಇವರು ಕೆಳಗಿಯಬೇಕು, ಇಲ್ಲದಿದ್ದರೆ ಎದುರಿನವರು ರಸ್ತೆಯಿಂದ ಕೆಳಗಿಳಿಯಬೇಕು. ಅಲ್ಲಲ್ಲಿ ರಸ್ತೆ ಬದಿಗೆ ಹಾಕಿದ ಮಣ್ಣು ಮಳೆಗಾಲದಲ್ಲಿ ಕೊಚ್ಚಿಕೊಂಡು ಹೋಗಿ ಡಾಮರು ರಸ್ತೆ ಎತ್ತರದಲ್ಲಿದ್ದು, ವಾಹನ ಇಳಿಸುವುದು ಕೂಡ ಅಪಾಯಕಾರಿಯಗಿದೆ. ವಿಸ್ತ ರ ಣೆಯೊಂದಿಗೆ ಇಕ್ಕೆಲಗಳಲ್ಲಿ ಚರಂಡಿ ಮಾಡಿದರೆ ಅನುಕೂಲವಾಗಲಿದೆ ಎನ್ನುವುದು ಗ್ರಾಮಸ್ಥರ ಆಗ್ರಹವಾಗಿದೆ.

ನಿರ್ವಹಣೆ ಮಾತ್ರ
ತಲ್ಲೂರು – ಉಪ್ಪಿನಕುದ್ರು ರಸ್ತೆ ವಿಸ್ತರಣೆ ಗೆ ಬೇಡಿಕೆಯಿದ್ದು, ಆದರೆ ಈಗ ಅದರ ನಿರ್ವಹಣೆ ಮಾತ್ರ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಅನುದಾನ ಬಂದಲ್ಲಿ ವಿಸ್ತರಣೆ ಮಾಡಲಾಗುವುದು. ಕಳೆದ ಮಳೆಗಾಲದಲ್ಲಿ ಕಿರಿದಾದ ರಸ್ತೆಯಿಂದಾಗಿ ವಾಹನ ಸಂಚಾರಕ್ಕೆ ಸಮಸ್ಯೆಯಾಗಿತ್ತು. ಹಾಗಾಗಿ ಎರಡೂ ಕಡೆ 600 -700 ಮೀ.ವರೆಗೆ ಸ್ವಲ್ಪ ಸ್ವಲ್ಪ ವಿಸ್ತ ರಣೆ ಆಗಲಿದ್ದು, ಇದರಿಂದ ಸ್ವಲ್ಪ ಮಟ್ಟಿಗೆ ಪ್ರಯೋಜನವಾಗಲಿದೆ.
-ರಾಘವೇಂದ್ರ ನಾಯಕ್‌, ಸಹಾಯಕ ಎಂಜಿನಿಯರ್‌, ಲೋಕೋಪಯೋಗಿ ಇಲಾಖೆ

ಟಾಪ್ ನ್ಯೂಸ್

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.