Tirupattur ಧರ್ಮಸ್ಥಳ ಪ್ರವಾಸ ಮುಗಿಸಿ ತೆರಳುತ್ತಿದ್ದ 7 ಮಹಿಳೆಯರ ದುರ್ಮರಣ
ದುರಸ್ತಿಯಾಗುತ್ತಿದ್ದ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ದುರ್ಘಟನೆ
Team Udayavani, Sep 11, 2023, 10:05 PM IST
ತಿರುಪತ್ತೂರು: ಧರ್ಮಸ್ಥಳ ಪ್ರವಾಸಕ್ಕೆ ಬಂದು ತಮಿಳುನಾಡಿನ ತಿರುಪತ್ತೂರಿನ ಒನಂಗುಟ್ಟೈ ಗ್ರಾಮಕ್ಕೆ ತೆರಳುತ್ತಿದ್ದವರ ಮೇಲೆ ವಾಹನ ಬಿದ್ದು ಏಳು ಮಹಿಳೆಯರು ಅಸುನೀಗಿದ್ದಾರೆ. ಘಟನೆಯಲ್ಲಿ 13 ಮಂದಿ ಗಾಯಗೊಂಡಿದ್ದಾರೆ.
ಧರ್ಮಸ್ಥಳ ಪ್ರವಾಸ ಮುಗಿಸಿ 2 ವಾಹನಗಳಲ್ಲಿ ಇವರೆಲ್ಲರೂ ಊರಿಗೆ ವಾಪಸಾಗುತ್ತಿದ್ದರು. ಈ ಹಂತದಲ್ಲಿ ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ನಟ್ರಾಂಪಳ್ಳಿ ಎಂಬಲ್ಲಿ ಅವರು ಪ್ರಯಾಣಿಸುತ್ತಿದ್ದ 2 ವಾಹನಗಳ ಪೈಕಿ ಒಂದರ ಟೈರ್ ಸ್ಫೋಟಗೊಂಡು ಕೆಟ್ಟು ಹೋಯಿತು. ಅದರ ಚಾಲಕ ಪ್ರಯಾಣಿಕರನ್ನು ವಾಹನದಿಂದ ಇಳಿಸಿ, ದುರಸ್ತಿ ಮಾಡುತ್ತಿದ್ದ. ವಾಹನದಲ್ಲಿ ಇದ್ದವರು ರಸ್ತೆ ಬದಿಯಲ್ಲಿ ಕುಳಿತಿದ್ದರು. ಆಗ ಬೆಂಗಳೂರು ಕಡೆಯಿಂದ ವೇಗವಾಗಿ ಬರುತ್ತಿದ್ದ ಲಾರಿ, ಈ ವ್ಯಾನ್ಗೆ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆಯಿತು. ಡಿಕ್ಕಿಯ ರಭಸಕ್ಕೆ ವ್ಯಾನ್ ಮಗುಚಿ, ರಸ್ತೆಯಲ್ಲಿ ಕುಳಿತಿದ್ದವರ ಮೇಲೆ ಬಿದ್ದಿದ್ದು, ಏಳು ಮಹಿಳೆಯರು ಅಸುನೀಗಿದ್ದಾರೆ.
ಲಾರಿಯಲ್ಲಿ ಪ್ರಯಾಣಿಸುತ್ತಿದ್ದ ಮೂವರು, ವ್ಯಾನ್ನಲ್ಲಿದ್ದ ಏಳು ಮಂದಿ ಗಾಯಗೊಂಡಿದ್ದಾರೆ.
ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಮೃತರ ಕುಟುಂಬಕ್ಕೆ ತಲಾ 1 ಲಕ್ಷ ರೂ., ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ಪ್ರಕಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ
Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ
Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್ ಪಡೆ
Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್ ಗಾಂಧಿ
Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್ಗೆ ಮತ ನೀಡಿ: ಸೋನಿಯಾ ಗಾಂಧಿ
MUST WATCH
ಹೊಸ ಸೇರ್ಪಡೆ
ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ
Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ
Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್ ಪಡೆ
Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್ ಗಾಂಧಿ
Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್ಗೆ ಮತ ನೀಡಿ: ಸೋನಿಯಾ ಗಾಂಧಿ