ನಮ್ಮವರ ಬಿಡುಗಡೆ ಮಾಡಿ : ಇರಾನ್‌ಗೆ ಭಾರತ ಮನವಿ


Team Udayavani, Jul 21, 2019, 5:45 AM IST

ship

ಲಂಡನ್‌/ಹೊಸದಿಲ್ಲಿ: ಹದಿನೆಂಟು ಮಂದಿ ಭಾರತೀಯರು ಸೇರಿ ಒಟ್ಟು ಇಪ್ಪತ್ತಮೂರು ಸಿಬಂದಿ ಇದ್ದ ತೈಲ ಟ್ಯಾಂಕರ್‌ ಅನ್ನು ಇರಾನ್‌ ವಶಪಡಿಸಿಕೊಂಡಿದೆ. ಹೀಗಾಗಿ, ಅಮೆರಿಕ ಮತ್ತು ಇರಾನ್‌ ನಡುವಿನ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡಿದೆ. ಹೋರ್‌ಮುಝ್ ಎಂಬಲ್ಲಿ ‘ಸ್ಟೆನಾ ಇಂಪೆರೆಯೋ’ ಎಂಬ ತೈಲ ಹಡಗನ್ನು ಅನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಬ್ರಿಟನ್‌ ಧ್ವಜ ಹೊಂದಿದ್ದ ಈ ಹಡಗು ಇರಾನ್‌ನ ಮೀನುಗಾರಿಕಾ ಬೋಟ್‌ಗೆ ಢಿಕ್ಕಿ ಹೊಡೆಯುವುದರಲ್ಲಿ ಇತ್ತು ಎಂದು ಆ ದೇಶದ ಸುದ್ದಿ ಸಂಸ್ಥೆ ಇರ್ನಾ ವರದಿ ಮಾಡಿದೆ.

ಹಡಗಿನ ಕ್ಯಾಪ್ಟನ್‌ ಭಾರತೀಯ ವ್ಯಕ್ತಿ ಆಗಿದ್ದಾರೆ. ಅದರಲ್ಲಿ ಲಾತ್ವಿಯಾ, ರಷ್ಯಾ, ಫಿಲಿಪ್ಪೀನ್ಸ್‌ನ ಪ್ರಜೆಗಳ ಜತೆಗೆ 18 ಮಂದಿ ಭಾರತೀಯರೂ ಇದ್ದಾರೆ. ಈ ಬೆಳವಣಿಗೆಯನ್ನು ಹೊಸದಿಲ್ಲಿಯಲ್ಲಿ ವಿದೇಶಾಂಗ ಇಲಾಖೆ ಕೂಡ ಖಚಿತಪಡಿಸಿಕೊಂಡಿದೆ. ಇರಾನ್‌ ಸರಕಾರದ ಜತೆಗೆ ಈ ಬಗ್ಗೆ ಸಂಪರ್ಕ ಸಾಧಿಸಲಾಗುತ್ತಿದೆ. ಜತೆಗೆ ಹೆಚ್ಚಿನ ಮಾಹಿತಿಯನ್ನೂ ಸಂಗ್ರಹಿಸಲಾಗುತ್ತಿದೆ. ಅವರ ವಶದಲ್ಲಿರುವ ಭಾರತೀಯರ ಬಿಡುಗಡೆಗೆ ಪ್ರಯತ್ನಗಳು ನಡೆದಿವೆ ಎಂದು ವಿದೇಶಾಂಗ ಇಲಾಖೆ ವಕ್ತಾರ ರವೀಶ್‌ ಕುಮಾರ್‌ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ವಶ ಮಾಡಿದ್ದು ಹೌದು: ಯುನೈಟೆಡ್‌ ಕಿಂಗ್‌ಡಮ್‌ ಧ್ವಜ ಹೊಂದಿರುವ ತೈಲ ಹಡಗನ್ನು ವಶಪಡಿಸಿಕೊಂಡದ್ದು ಹೌದು. ಎರಡು ವಾರಗಳ ಹಿಂದೆ ಬ್ರಿಟನ್‌ ನಮ್ಮ ತೈಲ ಟ್ಯಾಂಕರ್‌ ಅನ್ನು ತಡೆದಿರುವುದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಇರಾನ್‌ನ ಗಾರ್ಡಿಯನ್‌ ಕೌನ್ಸಿಲ್ನ ಅಬ್ಟಾಸ್‌ ಅಲಿ ಖಡಖೋಡಯ್‌ ಹೇಳಿದ್ದಾರೆ. ಈ ಬೆಳವಣಿಗೆಯಿಂದಾಗಿ ಅಮೆರಿಕ ಮತ್ತು ಇರಾನ್‌ ನಡುವಿನ ಬಿಕ್ಕಟ್ಟು ಮತ್ತಷ್ಟು ಬಿಗಡಾಯಿಸಿದೆ. ಅಂತಾರಾಷ್ಟ್ರೀಯ ನಿಯಮಗಳನ್ನು ಗಮನಿಸಿಯೇ ಈ ಕ್ರಮ ಕೈಗೊಂಡಿರುವುದಾಗಿ ಅವರು ಹೇಳಿದ್ದಾರೆ.

‘ಸ್ಟೆನಾ ಇಪೆರೋ ಎಂಬ ತೈಲ ಹಡಗು ಮೀನುಗಾರಿಕಾ ದೋಣಿಗೆ ಢಿಕ್ಕಿ ಹೊಡೆಯಿತು ಎಂಬ ಮಾಹಿತಿ ಸಿಕ್ಕಿದೆ. ಅದರ ಕ್ಯಾಪ್ಟನ್‌ ಜತೆಗೆ ಸಂಪರ್ಕ ಸಾಧಿಸಲು ಯತ್ನಿ ಮಾಡಿದರೂ ಸಿಗ್ನಲ್ ತೊಂದರೆಯಿಂದ ಸಾಧ್ಯವಾಗಲಿಲ್ಲ.

ಅನಾಮಧೇಯ ಬೋಟ್ ಅದಕ್ಕೆ ತಾಗಿದಾಗ ಹೆಲಿಕಾಪ್ಟರ್‌ ಮತ್ತು ನೌಕೆಯೊಂದು ಕಾಣಿಸಿಕೊಂಡಿತು. ಸ್ಟ್ರೈಟ್ ಆಫ್ ಹೊರ್ಮುಜ್‌ನಲ್ಲಿ ಈ ಘಟನೆ ನಡೆದಿದೆ. ಹಡಗು ಏಕಾಏಕಿ ಇರಾನ್‌ನತ್ತ ತೆರಳುತ್ತಿರುವುದು ಕಂಡುಬಂತು’ ಎಂದು ಹಡಗಿನ ಸ್ವಾಮಿತ್ವ ಹೊಂದಿರುವ ಸಂಸ್ಥೆ ಸ್ಟೆನಾ ಬಲ್ಕ್ ತಿಳಿಸಿದೆ. ಯುನೈಟೆಡ್‌ ಕಿಂಗ್‌ಡಮ್‌, ಸ್ವೀಡನ್‌ ಸರಕಾರಗಳ ಜತೆಗೆ ನಿಕಟ ಸಂಪರ್ಕ ಇರಿಸಿಕೊಂಡಿದ್ದೇವೆ ಎಂದು ಅದು ಹೇಳಿದೆ.

ರಾಯಭಾರಿಗೆ ಕರೆ: ಹಡಗು ವಶಪಡಿಸಿಕೊಂಡ ವಿಚಾರ ಗೊತ್ತಾಗುತ್ತಲೇ ಬ್ರಿಟನ್‌ನ ವಿದೇಶಾಂಗ ಸಚಿವಾಲಯ ಇರಾನ್‌ ರಾಯಭಾರಿಯನ್ನು ಕರೆಯಿಸಿಕೊಂಡು ಆಕ್ಷೇಪ ವ್ಯಕ್ತಪಡಿಸಲಾಗಿದೆ ಮತ್ತು ಶೀಘ್ರವೇ ಅದನ್ನು ಬಿಟ್ಟುಕೊಡುವಂತೆ ತಾಕೀತು ಮಾಡಲಾಗಿದೆ.

ಅಪಾಯದ ದಾರಿ: ಬ್ರಿಟನ್‌ನ ವಿದೇಶಾಂಗ ಸಚಿವ ಜೆರ್ಮಿ ಹಂಟ್ ಬೆಳವಣಿಗೆ ಬಗ್ಗೆ ಪ್ರತಿಕ್ರಿಯೆ ನೀಡಿ ಇರಾನ್‌ ಅಪಾಯಕಾರಿ ದಾರಿ ಹಿಡಿಯುತ್ತಿದೆ ಎಂದು ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.