ತ್ರಾಸಿ – ಗುಜ್ಜಾಡಿ ಮುಖ್ಯ ರಸ್ತೆ: ಸಂಚಾರ ದುಸ್ತರ

ರಸ್ತೆ ಅಭಿವೃದ್ಧಿಗೆ ಸಾರ್ವಜನಿಕರಿಂದ ಬೇಡಿಕೆ

Team Udayavani, Oct 2, 2021, 5:55 AM IST

ತ್ರಾಸಿ – ಗುಜ್ಜಾಡಿ ಮುಖ್ಯ ರಸ್ತೆ: ಸಂಚಾರ ದುಸ್ತರ

ತ್ರಾಸಿ: ರಾಷ್ಟ್ರೀಯ ಹೆದ್ದಾರಿ 66ರ ತ್ರಾಸಿ ಜಂಕ್ಷನ್‌ ಬಳಿಯಿಂದ ಗುಜ್ಜಾಡಿ, ಗಂಗೊಳ್ಳಿಗೆ ಸಂಪರ್ಕಿಸುವ ಮುಖ್ಯ ರಸ್ತೆಯ ಅಲ್ಲಲ್ಲಿ ಅನೇಕ ಹೊಂಡ- ಗುಂಡಿ ಬಿದ್ದಿದ್ದು, ವಾಹನ ಸಂಚಾರ ದುಸ್ತರಗೊಂಡಿದೆ. ಈ ಮಾರ್ಗದಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ರಸ್ತೆ ಅಭಿವೃದ್ಧಿಗೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ತ್ರಾಸಿ ಜಂಕ್ಷನ್‌ ಬಳಿಯಿಂದ ಕೊಡಪಾಡಿ, ನಾಯಕವಾಡಿ, ಗುಜ್ಜಾಡಿ, ಗಂಗೊಳ್ಳಿಗೆ ಸಂಪರ್ಕಿಸುವ ಲೋಕೋಪಯೋಗಿ ಇಲಾಖೆಯ ಅಧೀನದ ರಸ್ತೆ ಇದಾಗಿದೆ. ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ ಅವರ ಮುತುವರ್ಜಿಯಲ್ಲಿ ಗಂಗೊಳ್ಳಿಯಿಂದ ಕಾಂಕ್ರೀಟ್‌ ಕಾಮಗಾರಿ ನಡೆದಿದೆ. ಆದರೆ ಗುಜ್ಜಾಡಿಯಿಂದ ತ್ರಾಸಿಯವರೆಗಿನ ಸುಮಾರು 2-3 ಕಿ.ಮೀ. ದೂರದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಇದರಿಂದ ವಾಹನ ಸವಾರರು ಸಂಕಷ್ಟ ಪಡುವಂತಾಗಿದೆ. ಅದರಲ್ಲೂ ತ್ರಾಸಿ ಜಂಕ್ಷನ್‌ ಬಳಿ ದೊಡ್ಡ – ದೊಡ್ಡ ಹೊಂಡದಿಂದಾಗಿ ಪ್ರಯಾಸ ಪಡುತ್ತಿದ್ದಾರೆ.

ಚರಂಡಿಯೇ ಇಲ್ಲ
ಗಂಗೊಳ್ಳಿಯಿಂದ ತ್ರಾಸಿಯವರೆಗಿನ ಮುಖ್ಯ ರಸ್ತೆಯುದ್ದಕ್ಕೂ ಅನೇಕ ಕಡೆಗಳಲ್ಲಿ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಪ್ರತೀ ವರ್ಷ ರಸ್ತೆಯಲ್ಲಿಯೇ ಮಳೆ ನೀರು ಹರಿದು ಹೋಗುತ್ತಿದೆ. ಇದರಿಂದ ವರ್ಷದಿಂದ ವರ್ಷಕ್ಕೆ ಈ ರಸ್ತೆಯ ಡಾಮರೆಲ್ಲ ಕಿತ್ತು ಹೋಗಿ, ಅಲ್ಲಲ್ಲಿ ಹೊಂಡ, ಗುಂಡಿಗಳು ಬೀಳುತ್ತವೆ. ಪ್ರತೀ ವರ್ಷ ತೇಪೆ ಹಾಕುವ ಕಾರ್ಯ ಮಾಡುತ್ತಿದ್ದರೂ, ಮಳೆಗಾಲದಲ್ಲಿ ಆ ತೇಪೆ ಹಾಕಿದ ಡಾಮರೆಲ್ಲ ಕಿತ್ತು ಹೋಗುತ್ತಿದೆ. ರಸ್ತೆಯ ಅಭಿವೃದ್ಧಿಯೊಂದಿಗೆ ಇಕ್ಕೆಲಗಳಲ್ಲಿ ಚರಂಡಿಯನ್ನು ನಿರ್ಮಾಣ ಮಾಡಲಿ ಎನ್ನುವುದು ಸ್ಥಳೀಯರ ಬೇಡಿಕೆಯಾಗಿದೆ.

ಇದನ್ನೂ ಓದಿ:ಸಿಂದಗಿ ಉಪ ಚುನಾವಣೆ : ನಾಜಿಯಾ ಶಕೀಲಾ ಅಂಗಡಿ ಜೆಡಿಎಸ್ ಅಭ್ಯರ್ಥಿ

ವಾಣಿಜ್ಯ ಚಟುವಟಿಕೆಗೂ ತೊಡಕು
ಈ ರಸ್ತೆಯು ತ್ರಾಸಿಯಿಂದ ಗಂಗೊಳ್ಳಿಯ ಮೀನುಗಾರಿಕಾ ಬಂದರು, ಕಂಚು ಗೋಡಿನ ಮೀನುಗಾರಿಕಾ ರಸ್ತೆಯನ್ನು ಸಂಪರ್ಕಿಸುವ ಪ್ರಮುಖ ಕೊಂಡಿ ಯಾಗಿದೆ. ಗಂಗೊಳ್ಳಿಯ ಇಲ್ಲಿನ ಬಂದರಿನಿಂದ ಬೇರೆ ಬೇರೆ ಕಡೆಗಳಿಗೆ ಮೀನು ಸಾಗಾಟ ಮಾಡಲಾಗುತ್ತದೆ. ಮೀನು ಸಾಗಾಟದ ಲಾರಿಗಳು, ಐಸ್‌ ಸಾಗಾಟದ ವಾಹನ, ಮೀನುಗಾರಿಕೆ ಸಲಕರಣೆ ಸಾಗಿಸುವ ವಾಹನಗಳು, ಪ್ರತಿದಿನ ಹತ್ತಾರು ಸರಕಾರಿ ಹಾಗೂ ಖಾಸಗಿ ಬಸ್‌ಗಳು, ಶಾಲಾ ವಾಹನಗಳು, ಕಾರು, ಆಟೋರಿಕ್ಷಾ ಸಹಿತ ಸಾವಿರಾರು ವಾಹನಗಳು ಪ್ರತಿನಿತ್ಯ ಇದೇ ಮಾರ್ಗವಾಗಿ ಸಂಚರಿಸುತ್ತವೆ. ಈ ಹೊಂಡ – ಗುಂಡಿಗಳ ರಸ್ತೆಯಿಂದಾಗಿ ಮೀನು ಗಾರಿಕೆ ಸೇರಿದಂತೆ ಎಲ್ಲ ರೀತಿಯ ವಾಣಿಜ್ಯ ಚಟುವಟಿಕೆಗಳಿಗೂ ಅಡ್ಡಿಯಾಗುತ್ತಿದೆ.

ತೇಪೆ ಹಾಕುವುದು ಮಾತ್ರ
ಪ್ರತೀ ಮಳೆಗಾಲ ಮುಗಿದಾಗಲೂ ಈ ರಸ್ತೆಗೆ ತೇಪೆ ಹಾಕುವುದು ಮಾತ್ರ. ನಾವು ಅನೇಕ ವರ್ಷಗಳಿಂದ ಈ ರಸ್ತೆಗೆ ಮರು ಡಾಮರು ಕಾಮಗಾರಿ ಅಥವಾ ಅಭಿವೃದ್ಧಿಗೆ ಆಗ್ರಹಿಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಅಭಿವೃದ್ಧಿಗೆ ಅನುದಾನ ಮಂಜೂರಾಗುತ್ತದೆ ಎನ್ನುವ ಆಶ್ವಾಸನೆ ಕೇವಲ ಭರವಸೆಯಾಗಿಯೇ ಉಳಿದಿದೆ. ಈ ಬಾರಿಯಾದರೂ ಈ ರಸ್ತೆಯ ಅಭಿವೃದ್ಧಿಯಾಗಲಿ ಎನ್ನುವುದಾಗಿ ಈ ಭಾಗದ ನಾಗರಿಕರು
ಆಗ್ರಹಿಸಿದ್ದಾರೆ.

ಅಭಿವೃದ್ಧಿಗೆ ಕ್ರಮ
ಈಗಾಗಲೇ ಗಂಗೊಳ್ಳಿಯಿಂದ ಮುಖ್ಯ ರಸ್ತೆಯ ಕಾಂಕ್ರೀಟ್‌ ಕಾಮಗಾರಿ ಆಗಿದೆ. ಗುಜ್ಜಾಡಿಯಿಂದ ತ್ರಾಸಿಯವರೆಗಿನ ಮುಖ್ಯ ರಸ್ತೆಯ ಅಭಿವೃದ್ಧಿ ಬಗ್ಗೆ ಗಮನದಲ್ಲಿದ್ದು, ಈ ರಸ್ತೆಯ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಆದ್ಯತೆ ನೆಲೆಯಲ್ಲಿ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು.
ಬಿ.ಎಂ. ಸುಕುಮಾರ್‌ ಶೆಟ್ಟಿ,
ಬೈಂದೂರು ಶಾಸಕರು

ಟಾಪ್ ನ್ಯೂಸ್

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.