44 ತರಕಾರಿ ಕಟ್ಟೆಗಳ ಸುಂಕ ವಸೂಲಾತಿ ಬಹಿರಂಗ ಹರಾಜು


Team Udayavani, Feb 19, 2022, 4:49 PM IST

44 ತರಕಾರಿ ಕಟ್ಟೆಗಳ ಸುಂಕ ವಸೂಲಾತಿ ಬಹಿರಂಗ ಹರಾಜು

ಚಿಕ್ಕಮಗಳೂರು: ನಗರಸಭೆ ವ್ಯಾಪ್ತಿಯಲ್ಲಿ ಬರುವ ತಳ್ಳುವ ಗಾಡಿ ಹಾಗೂ ಸಂತೆ ಮೈದಾನದ ಒಳಗೆ ನಿರ್ಮಾಣಗೊಂಡಿರುವ 44 ತರಕಾರಿ ಕಟ್ಟೆಗಳ ಸುಂಕ ವಸೂಲಾತಿ ಬಹಿರಂಗ ಹರಾಜು ಪ್ರಕ್ರಿಯೆ ಶುಕ್ರವಾರ ನಗರಸಭೆ ಸಭಾಂಗಣದಲ್ಲಿ ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್‌ ಅಧ್ಯಕ್ಷತೆಯಲ್ಲಿ ನಡೆಯಿತು.

ತಳ್ಳುವ ಗಾಡಿಗಳ ಸುಂಕ ವಸೂಲಾತಿಯಲ್ಲಿ ರವಿ ಎಂಬುವವರು 10 ಲಕ್ಷ ರೂ. ಹರಾಜು ಕೂಗುವ ಮೂಲಕ ಟೆಂಡರ್‌ ಅನ್ನು ತಮ್ಮದಾಗಿಸಿಕೊಂಡರು. ಇನ್ನು ಸಂತೆಕಟ್ಟೆಗಳ ಸುಂಕ
ವಸೂಲಾತಿಯನ್ನು ಇಬ್ರಾನ್‌ 11.30 ಲಕ್ಷಕ್ಕೆ ಟೆಂಡರ್‌ ತಮ್ಮದಾಗಿಸಿಕೊಂಡರು. ಟೆಂಡರ್‌ ಹರಾಜು ಪ್ರಕ್ರಿಯೆ ಬಳಿಕ ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್‌ ಮಾತನಾಡಿ, ಕಳೆದ
2 ವರ್ಷಗಳಿಂದ ಸಂತೆ ಮತ್ತು ತಳ್ಳುವ ಗಾಡಿಗಳ ಸುಂಕ ವಸೂಲಾತಿ ಹರಾಜು ಕಡಿಮೆ ಪ್ರಮಾಣದಲ್ಲಾಗಿತ್ತು. ಆದರೆ ಈ ಬಾರಿ ಹೆಚ್ಚು ಹಣಕ್ಕೆ ಟೆಂಡರ್‌ ಆಗಿದ್ದು ನಗರಸಭೆಗೆ ಹೆಚ್ಚು ಆದಾಯ ತರುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ನಗರಸಭೆ ನಿಗ ದಿಪಡಿಸಿರುವ ಹಣಕ್ಕಿಂತ ಹೆಚ್ಚು ಸುಂಕ ವಸೂಲಿ ಮಾಡಿದ ಬಗ್ಗೆ ದೂರುಗಳು ಕೇಳಿಬಂದಲ್ಲಿ ಟೆಂಡರ್‌ ರದ್ದುಗೊಳಿಸಿ ಮರುಟೆಂಡರ್‌ ಕರೆಯಲಾಗುವುದು. ಆ ನಿಟ್ಟಿನಲ್ಲಿ
ತಳ್ಳುವ ಗಾಡಿ, ಸಂತೆ ವ್ಯಾಪಾರಿಗಳಿಗೆ ತೊಂದರೆಯಾಗದಂತೆ ಸುಂಕ ವಸೂಲಿ  ಮಾಡುವಂತೆ ಟೆಂಡರ್‌ದಾರರಿಗೆ ಸೂಚಿಸಿದರು. ನಗರಸಭೆ ಪೌರಾಯುಕ್ತ ಬಿ.ಸಿ. ಬಸವರಾಜ್‌ ಮಾತನಾಡಿ,
ಈ ಬಾರಿಯ ಸಂತೆ ಮತ್ತು ತಳ್ಳುವ ಗಾಡಿಗಳ ಸುಂಕ ವಸೂಲಾತಿ ಹರಾಜು ಟೆಂಡರ್‌ನಲ್ಲಿ ನಗರಸಭೆಗೆ ಹೆಚ್ಚು ಆರ್ಥಿಕ ಲಾಭ ಗಳಿಸಿದೆ. ಕಳೆದ ಬಾರಿಯಲ್ಲಿ ಕೋವಿಡ್‌ ಮತ್ತಿತರ ಕಾರಣಕ್ಕಾಗಿ ತಳ್ಳುವ ಗಾಡಿ ಸುಂಕ ವಸೂಲಿ ಟೆಂಡರ್‌ 4 ಲಕ್ಷಕ್ಕೆ ಹರಾಜಾಗಿತ್ತು, ಆದರೆ ಈ ಬಾರಿ 10.10 ಲಕ್ಷಕ್ಕೆ ರವಿ ಎಂಬುವವರು ತಮ್ಮದಾಗಿಸಿಕೊಂಡಿದ್ದಾರೆ ಎಂದರು.

ಸಂತೆ ಕಟ್ಟೆಗಳ ಸುಂಕ ವಸೂಲಿ ಹರಾಜು ಕಳೆದ ಬಾರಿ 7 ಲಕ್ಷಕ್ಕೆ ಹರಾಜಾಗಿತ್ತು. ಇದೀಗ 11.30 ಲಕ್ಷಕ್ಕೆ ಇಬ್ರಾನ್‌ ಎಂಬುವವರು ಟೆಂಡರ್‌ ವಹಿಸಿಕೊಂಡಿದ್ದಾರೆ. ಇದರಿಂದಾಗಿ ನಗರಸಭೆಗೆ 21.40 ಲಕ್ಷ ಆರ್ಥಿಕವಾಗಿ ಲಾಭವಾಗಲಿದೆ ಎಂದು ತಿಳಿಸಿದರು.

ಸದಸ್ಯರಾದ ಮಧುಕುಮಾರ್‌ ರಾಜ್‌ ಅರಸ್‌, ಪರಮೇಶ್‌ರಾಜ್‌ ಅರಸ್‌, ಸಿ.ಎಂ. ಕುಮಾರ್‌, ಜೆ. ರಾಜು, ವಿಫುಲ್‌ ಕುಮಾರ್‌ ಜೈನ್‌, ಕಂದಾಯಾಧಿಕಾರಿ ಬಸವರಾಜ್‌, ಆರ್‌ಐ ಶಿವಾನಂದ್‌,
ವ್ಯವಸ್ಥಾಪಕ ಮಂಜುನಾಥ್‌, ಕಂದಾಯ ನಿರೀಕ್ಷಕ ಜಗದೀಶ್‌ ಇದ್ದರು.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.