ತ್ರೈಮಾಸಿಕದಲ್ಲಿ ನಿರೀಕ್ಷೆ ಮೂಡಿಸದ ತೆರಿಗೆ ಸಂಗ್ರಹ


Team Udayavani, Aug 31, 2019, 3:10 AM IST

trimasika

ಬೆಂಗಳೂರು: ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ರಾಜ್ಯ ಸರ್ಕಾರಕ್ಕೆ ಪ್ರಮುಖ ಆದಾಯ ಮೂಲಗಳಾದ ಮೋಟಾರು ವಾಹನ ತೆರಿಗೆ ಹಾಗೂ ಮುದ್ರಾಂಕ ಮತ್ತು ನೋಂದಣಿ ಶುಲ್ಕ ಆದಾಯ ಇಳಿಕೆಯಾಗಿರುವುದು ಆತಂಕ ಮೂಡಿಸಿದೆ.

ವಾಣಿಜ್ಯ ತೆರಿಗೆ ಸರಾಸರಿ ಆದಾಯ ಸಂಗ್ರಹದಲ್ಲೂ ಇಳಿಮುಖವಾಗಿದೆ. ಅಬಕಾರಿ ತೆರಿಗೆ ಸಂಗ್ರಹ ಮಾತ್ರ ಆಶಾದಾಯಕವಾಗಿದ್ದು, ಮೊದಲ ತ್ರೈಮಾಸಿಕದ ಮೂರು ತಿಂಗಳಲ್ಲೂ ಏರುಮುಖವಾಗಿದೆ. ಒಟ್ಟಾರೆ ಮೂರು ತಿಂಗಳಲ್ಲಿ ನಾಲ್ಕೂ ಪ್ರಮುಖ ಆದಾಯ ಮೂಲಗಳಿಂದ ಆದಾಯ ಸಂಗ್ರಹವು ನಿರೀಕ್ಷಿತ ಅಂದಾಜು ಪ್ರಮಾಣಕ್ಕಿಂತ ಕಡಿಮೆಯಿರುವುದು ಸರ್ಕಾರದ ಆರ್ಥಿಕ ಸ್ಥಿತಿ ಮೇಲೆ ಅಲ್ಪಾವಧಿ ಪರಿಣಾಮ ಬೀರುವುದೇ ಎಂಬುದನ್ನು ಕಾದು ನೋಡಬೇಕಿದೆ.

ರಾಜ್ಯ ಸರ್ಕಾರಕ್ಕೆ ವಾಣಿಜ್ಯ ತೆರಿಗೆ, ಅಬಕಾರಿ, ಮೋಟಾರು ವಾಹನ ತೆರಿಗೆ ಹಾಗೂ ಮುದ್ರಾಂಕ ಮತ್ತು ನೋಂದಣಿ ಶುಲ್ಕ ಆದಾಯವೇ ಸಂಪನ್ಮೂಲ ಸಂಗ್ರಹಕ್ಕೆ ಮೂಲವಾಗಿದೆ. ಈ ಆದಾಯದ ಆಧಾರದ ಮೇಲೆ ರಾಜ್ಯದ ಆರ್ಥಿಕ ಸ್ಥಿತಿ ಅವಲಂಬಿತವಾಗಿದೆ. ಆದರೆ 2019-2020ನೇ ಸಾಲಿನ ಮೊದಲ ತ್ರೈಮಾಸಿಕ ಅವಧಿಯಲ್ಲಿನ ತೆರಿಗೆ ಸಂಗ್ರಹ ಆಶಾದಾಯಕವಾಗಿ ಕಾಣುತ್ತಿಲ್ಲ.

ಪ್ರಮುಖವಾದ ವಾಣಿಜ್ಯ ತೆರಿಗೆ ಮೂಲದಿಂದ ಏಪ್ರಿಲ್‌ನಲ್ಲಿ 5613 ಕೋಟಿ ರೂ. ಸಂಗ್ರಹವಾಗಿದ್ದು, ಮೇ ತಿಂಗಳಲ್ಲಿ 4443 ಕೋಟಿ ರೂ.ಗೆ ಇಳಿಕೆಯಾಗಿದೆ. ಜೂನ್‌ನಲ್ಲಿ 4615 ಕೋಟಿ ರೂ. ಸಂಗ್ರಹವಾಗಿದೆ. ಅಂದರೆ ಏಪ್ರಿಲ್‌ನ ಸಂಗ್ರಹಕ್ಕೆ ಹೋಲಿಸಿದರೆ ಮೇ ಹಾಗೂ ಜೂನ್‌ನಲ್ಲಿ ವಾಣಿಜ್ಯ ತೆರಿಗೆ ಸಂಗ್ರಹ ಸರಾಸರಿ ಪ್ರಮಾಣ 1000 ಕೋಟಿ ರೂ.ನಷ್ಟು ಇಳಿಕೆಯಾಗಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಜೂನ್‌ನಲ್ಲಿ ಶೇ.25ರಷ್ಟು ಬೆಳವಣಿಗೆ ನಿರೀಕ್ಷೆಯಿದ್ದರೂ ಶೇ.15.7 ಮಾತ್ರ ಏರಿಕೆ ಕಂಡಿದೆ.

ಮೋಟಾರು ವಾಹನ ತೆರಿಗೆಯೂ ಇಳಿಕೆ: ಮೋಟಾರು ವಾಹನ ತೆರಿಗೆ ಮೂಲದಿಂದ ಏಪ್ರಿಲ್‌, ಮೇ, ಜೂನ್‌ನಲ್ಲಿ ಕ್ರಮವಾಗಿ 424 ಕೋಟಿ ರೂ., 565 ಕೋಟಿ ರೂ., 487 ಕೋಟಿ ರೂ. ಸಂಗ್ರಹವಾಗಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ತೆರಿಗೆ ಸಂಗ್ರಹ ಬೆಳವಣಿಗೆ ಪ್ರಮಾಣವು ಕ್ರಮವಾಗಿ ಶೇ.14.3, ಶೇ. 3.7 ಹಾಗೂ ಶೇ. 1.1ರಷ್ಟಿದೆ. ಮೇ ತಿಂಗಳಿಗೆ ಹೋಲಿಸಿದರೆ ಜೂನ್‌ನಲ್ಲಿ ಈ ಮೂಲದಿಂದ ಸಂಗ್ರಹವಾದ ಆದಾಯದಲ್ಲಿ 78 ಕೋಟಿ ರೂ.ನಷ್ಟು ಆದಾಯ ಇಳಿಕೆಯಾಗಿದೆ.

ಮುದ್ರಾಂಕ ಮತ್ತು ನೋಂದಣಿ ಶುಲ್ಕ ಸಂಗ್ರಹದಲ್ಲೂ ಏರುಪೇರಾಗಿದೆ. ಏಪ್ರಿಲ್‌ನಲ್ಲಿ 677 ಕೋಟಿ ರೂ. ಸಂಗ್ರಹವಾಗಿದ್ದರೂ ನಿರೀಕ್ಷಿತ ಶೇ.5.7ರಷ್ಟು ಬೆಳವಣಿಗೆ ಗುರಿಗೆ ಪ್ರತಿಯಾಗಿ ಋಣಾತ್ಮಕ 11.6ರಷ್ಟಕ್ಕೆ ಇಳಿದಿರುವುದು ಕಂಡುಬಂದಿದೆ. ಮೇ ತಿಂಗಳಲ್ಲಿ 1022 ಕೋಟಿ ರೂ. ಸಂಗ್ರಹವಾಗಿದ್ದು, ಜೂನ್‌ನಲ್ಲಿ 989 ಕೋಟಿ ರೂ. ಸಂಗ್ರಹವಾಗಿದೆ. ಜೂನ್‌ನಲ್ಲಿ ಶೇ. 22.7ರಷ್ಟು ಬೆಳವಣಿಗೆ ಗುರಿಯಿದ್ದರೂ ಶೇ.15ರಷ್ಟು ಬೆಳವಣಿಗೆ ಸಾಧಿಸಲಷ್ಟೇ ಸಾಧ್ಯವಾಗಿದೆ.

ಅಬಕಾರಿ ತೆರಿಗೆ ಆಶಾದಾಯಕ: ಅಬಕಾರಿ ತೆರಿಗೆ ಸಂಗ್ರಹವು ಆಶಾದಾಯಕವಾಗಿದ್ದು, ಏಪ್ರಿಲ್‌ನಿಂದ ಜೂನ್‌ವರೆಗೆ ತೆರಿಗೆ ಸಂಗ್ರಹವೂ ನಿರಂತರವಾಗಿ ಏರಿಕೆಯಾಗಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಏಪ್ರಿಲ್‌ನಲ್ಲಿ ಶೇ.6.2ರಷ್ಟು ಬೆಳವಣಿಗೆ ಗುರಿ ಮೀರಿ ಶೇ.14.9ರಷ್ಟು ಬೆಳವಣಿಗೆ ದಾಖಲಿಸಿದೆ. ಅಬಕಾರಿ ತೆರಿಗೆ ಮೂಲದಿಂದ ಮೂರು ತಿಂಗಳಲ್ಲಿ ಒಟ್ಟು 5,760 ಕೊಟಿ ರೂ. ಸಂಗ್ರಹವಾಗಿದೆ.

ಒಟ್ಟಾರೆ ಮೊದಲ ತ್ರೈಮಾಸಿಕವು ತೆರಿಗೆ ಆದಾಯ ಸಂಗ್ರಹ ದೃಷ್ಟಿಯಿಂದ ರಾಜ್ಯ ಸರ್ಕಾರಕ್ಕೆ ಆಶಾದಾಯಕವಾದಂತೆ ಕಾಣುತ್ತಿಲ್ಲ. ಮೊದಲ ತ್ರೈಮಾಸಿಕ ಅವಧಿಯಲ್ಲಿ ಲೋಕಸಭಾ ಚುನಾವಣೆ ಪ್ರಕ್ರಿಯೆ ಜತೆಗೆ ವಾಹನ ಖರೀದಿ, ವ್ಯಾಪಾರ- ವಹಿವಾಟು ಪ್ರಮಾಣ ತುಸು ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ತೆರಿಗೆ ಸಂಗ್ರಹವೂ ಇಳಿಮುಖವಾಗಿರುವ ಸಾಧ್ಯತೆ ಇದೆ ಎಂದು ಆರ್ಥಿಕ ತಜ್ಞರು ಹೇಳುತ್ತಾರೆ.

ಪ್ರಸಕ್ತ ವರ್ಷದ ಮೊದಲ ತ್ರೈಮಾಸಿಕದಲ್ಲಿ ಅಬಕಾರಿ ತೆರಿಗೆ ಆದಾಯ ಸಂಗ್ರಹ ಉತ್ತಮವಾಗಿದೆ. ಉಳಿದ ತೆರಿಗೆ ಮೂಲಗಳಿಂದಲೂ ಮುಂದಿನ ದಿನಗಳಲ್ಲಿ ಉತ್ತಮ ಆದಾಯ ನಿರೀಕ್ಷಿಸಲಾಗಿದೆ. ಸಾಮಾನ್ಯವಾಗಿ ಮೊದಲ ತ್ರೈಮಾಸಿಕದಲ್ಲಿ ತೆರಿಗೆ ಸಂಗ್ರಹ ತುಸು ಕಡಿಮೆಯಿರುತ್ತದೆ. ಹಣಕಾಸು ವರ್ಷ ಪೂರ್ಣಗೊಳ್ಳುವ ಹೊತ್ತಿಗೆ ನಿರೀಕ್ಷಿತ ಆದಾಯ ಸಂಗ್ರಹವಾಗುವ ವಿಶ್ವಾಸವಿದೆ ಎಂದು ಹಣಕಾಸು ಇಲಾಖೆ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾಸಿಕವಾರು ತೆರಿಗೆ ಸಂಗ್ರಹ ವಿವರ
ಮೂಲ ಏಪ್ರಿಲ್‌ ಮೇ ಜೂನ್‌
ವಾಣಿಜ್ಯ ತೆರಿಗೆ 5613 4443 4615
ಅಬಕಾರಿ 1303 2052 2405
ಮೋಟಾರು ವಾಹನ ತೆರಿಗೆ 424 565 487
ಮುದ್ರಾಂಕ ಮತ್ತು ನೋಂದಣಿ 677 1022 989

* ಎಂ. ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.