ಕೋವಿಡ್ 19 ಆತಂಕದ ಮಧ್ಯೆ ದುಡಿದ ಟ್ಯಾಕ್ಸಿ ಚಾಲಕರಿಗೆ ಹಣ ಬಂದಿಲ್ಲ !


Team Udayavani, Jun 26, 2020, 6:34 AM IST

ಕೋವಿಡ್ 19 ಆತಂಕದ ಮಧ್ಯೆ ದುಡಿದ ಟ್ಯಾಕ್ಸಿ ಚಾಲಕರಿಗೆ ಹಣ ಬಂದಿಲ್ಲ !

ವಿಶೇಷ ವರದಿಮಹಾನಗರ: ಕೋವಿಡ್ 19 ಆತಂಕದ ಸಮಯದಲ್ಲಿ ತುರ್ತು ಸೇವೆಗೆಂದು ಜಿಲ್ಲಾಡಳಿತವು ದ.ಕ. ಜಿಲ್ಲೆಯ ಸುಮಾರು 300 ರಷ್ಟು ಟ್ಯಾಕ್ಸಿ ಕ್ಯಾಬ್‌ ಬಳಕೆ ಮಾಡಿದ್ದು, ಚಾಲಕರಿಗೆ ಇನ್ನೂ ಹಣ ಸಂದಾಯವಾಗಿಲ್ಲ. ಇದರಿಂದಾಗಿ ಟ್ಯಾಕ್ಸಿ ಚಾಲಕರು ಸಂಕಷ್ಟ ಅನುಭವಿಸುತ್ತಿದ್ದಾರೆ.

ಕೋವಿಡ್ 19 ಸಮಯದಲ್ಲಿ ದ.ಕ. ಜಿಲ್ಲೆಗೆ ಜಿಲ್ಲಾಡಳಿತ ಅಧಿಕಾರಿಗಳಿಗೆ, ಪಾಲಿಕೆ ಅಧಿಕಾರಿಗಳಿಗೆ, ಆಶಾ ಕಾರ್ಯಕರ್ತೆಯರಿಗೆ ಕಚೇರಿ ಕಾರ್ಯದ ನಿಮಿತ್ತ, ಕ್ವಾರಂಟೈನ್‌ ಸೇರಿಸಂತೆ ಕೋವಿಡ್ 19 ಬಗ್ಗೆ ನಿಗಾ ವಹಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸುತ್ತಾಡಲು ಸುಮಾರು 300 ಟ್ಯಾಕ್ಸಿ ಬಳಸಲಾಗಿತ್ತು. ಚಾಲಕರು ದಿನದ 24 ಗಂಟೆ ಎರಡು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಇನ್ನೂ ಸುಮಾರು 70 ಟ್ಯಾಕ್ಸಿಗಳನ್ನು ಜಿಲ್ಲಾಡಳಿತ ಬಳಕೆ ಮಾಡುತ್ತಿದೆ.

ಟ್ಯಾಕ್ಸಿಯನ್ನು ಆರ್‌ಟಿಒಗೆ ನೀಡುವ ಈ ಬಾರಿ ತುರ್ತಾಗಿ ಹಣ ಸಂದಾಯ ಮಾಡಬೇಕು ಎಂದು ದ.ಕ. ಜಿಲ್ಲಾ ಟ್ಯಾಕ್ಸಿಮೆನ್ಸ್‌ ಆ್ಯಂಡ್‌ ಮ್ಯಾಕ್ಸಿಕ್ಯಾಬ್‌ ಅಸೋಸಿಯೇಶನ್‌ ವತಿಯಿಂದ ಜಿಲ್ಲಾ ಡಳಿತಕ್ಕೆ ಮನವಿ ಮಾಡಲಾಗಿತ್ತು. ಇದೀಗ ಮತ್ತೂಮ್ಮೆ ಸಂಬಂಧಪಟ್ಟ ಇಲಾಖೆ ಗಮನಕ್ಕೆ ತಂದರೂ, ಜಿಲ್ಲಾಡಳಿತ ಇನ್ನೂ ಹಣ ಬಿಡುಗಡೆ ಮಾಡಲಿಲ್ಲ, ಕೋವಿಡ್ 19 ದಿಂದಾಗಿ ಸಂಕಷ್ಟದಲ್ಲಿರುವ ಟಾಕ್ಸಿ ಚಾಲಕರು ಮತ್ತಷ್ಟು ನೋವು ಅನುಭವಿಸುವಂತಾಗಿದೆ.

ಕೋವಿಡ್ 19 ಭೀತಿ ಮತ್ತು ಹವಾಮಾನ ವೈಪರೀತ್ಯದ ಪರಿಣಾಮ ಈ ವರ್ಷದ ಆರಂಭದಿಂದಲೇ ಟ್ಯಾಕ್ಸಿ ಮಾಲಕರು ನಷ್ಟ ಅನುಭವಿಸುತ್ತಿದ್ದರು. ಕರಾವಳಿ ಭಾಗದಲ್ಲಿ ಮಾರ್ಚ್‌-ಮೇ ವರೆಗೆ ಪ್ರವಾಸೋದ್ಯಮ ಸೀಸನ್‌ ಆಗಿದ್ದು, ಆ ದಿನಗಳಲ್ಲಿ ಒಂದು ಕಾರಿನಿಂದ ತಿಂಗಳಿಗೆ 20 ಟ್ರಿಪ್‌ ಆಗುತ್ತಿತ್ತು. ಇದು 10 ಟ್ರಿಪ್‌ಗೆ ಇಳಿಕೆಯಾಗಿತ್ತು. ದಕ್ಷಿಣ ಕನ್ನಕ್ಕೆ ಆಗಮಿಸುವ ವಿದೇಶಿ, ಅನ್ಯ ರಾಜ್ಯಗಳ ಪ್ರವಾಸಿಗರು ಮಡಿಕೇರಿ, ಮೈಸೂರು, ಮಂಗಳೂರು ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ತೆರಳುತ್ತಾರೆ. ಆದರೆ, ಪ್ರವಾಸಿಗರ ಸಂಖ್ಯೆ ಕೂಡ ಕಡಿಮೆಯಾಗಿ ನಷ್ಟ ಅನುಭವಿಸಿದ್ದರು. ಇದೀಗ ಅವರಿಗೆ ಸಿಗುವಂತಹ ಹಣ ಸಂದಾಯವಾಗದಿರುವುದು ಚಾಲಕರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ.

ಈ ಹಿಂದೆ ಲೋಕಸಭಾ ಚುನಾವಣೆ ಮತ್ತು ಪಾಲಿಕೆ ಚುನಾವಣೆ ವೇಳೆ ಮ್ಯಾಕ್ಸಿಕ್ಯಾಬ್‌, ಕಾರು, ಟೆಂಪೋ ಟ್ರಾವೆಲರ್‌ ಸಹಿತ ಸುಮಾರು 360 ವಾಹನಗಳನ್ನು ಚುನಾವಣಾ ಕಾರ್ಯಗಳಿಗೆ ಬಳಸಿಕೊಳ್ಳಲಾಗಿತ್ತು. ಬಳಸಿಕೊಂಡ ವಾಹನಗಳ ಮಾಲಕರಿಗೆ ಶೇ.25ರಷ್ಟು ಹಣ ನೀಡಲು ಬಾಕಿ ಇದೆ. ಪುತ್ತೂರು ತಾಲೂಕಿನ ಕೆಲವೊಂದು ಟ್ಯಾಕ್ಸಿ ಚಾಲಕರಿಗೆ ಮಾತ್ರ ಸ್ವಲ್ಪ ಪ್ರಮಾಣದ ಹಣ ಸಂದಾಯ ಬಾಕಿ ಇದೆ ಎನ್ನುತ್ತಾರೆ ಅಸೋಸಿಯೇಶನ್‌ನ ಪ್ರಮುಖರು.

 ಹಣ ಬಿಡುಗಡೆ ಮಾಡಿ
ಲಾಕ್‌ಡೌನ್‌ ವೇಳೆ ಅಸೋಸಿ ಯೇಶನ್‌ ವತಿಯಿಂದ ಸುಮಾರು 300ರಷ್ಟು ಟ್ಯಾಕ್ಸಿಗಳನ್ನು ಜಿಲ್ಲಾಡಳಿತಕ್ಕೆ ನೀಡಿದ್ದೇವೆ. ಚಾಲಕರಿಗೆ ಇನ್ನೂ ಹಣ ಸಂದಾಯವಾಗಿಲ್ಲ. ಲಾಕ್‌ಡೌನ್‌ ಸಡಿಲಗೊಂಡರೂ, ಟ್ಯಾಕ್ಸಿ ಚಾಲಕರಿಗೆ ಬಾಡಿಗೆ ಸಿಗದೆ ಸಂಕಷ್ಟದಲ್ಲಿದ್ದಾರೆ. ಜಿಲ್ಲಾಡಳಿತ ಕೂಡಲೇ ಬಾಕಿ ಹಣ ಬಿಡುಗಡೆ ಮಾಡಬೇಕು.
– ದಿನೇಶ್‌ ಕುಂಪಲ, ದ.ಕ.ಜಿಲ್ಲಾ ಟ್ಯಾಕ್ಸಿಮೆನ್ಸ್‌ ಆ್ಯಂಡ್‌
ಮ್ಯಾಕ್ಸಿಕ್ಯಾಬ್‌ ಅಸೋಸಿಯೇಶನ್‌ ಅಧ್ಯಕ್ಷ 

ಡಿಸಿ ಗಮನಕ್ಕೆ ತರುತ್ತೇನೆ
ಲಾಕ್‌ಡೌನ್‌ ಸಮಯದಲ್ಲಿ ತುರ್ತು ಸೇವೆಗೆಂದು ಜಿಲ್ಲಾಡಳಿತವು ಟ್ಯಾಕ್ಸಿ ಬಳಕೆ ಮಾಡಿತ್ತು. ಚಾಲಕರಿಗೆ ಹಣ ನೀಡುವ ಕುರಿತಂತೆ ಜಿಲ್ಲಾಧಿಕಾರಿಗಳ ಗಮನಕ್ಕೆ ತರುತ್ತೇನೆ.
– ಆರ್‌.ಎಂ. ವರ್ಣೇಕರ್‌, ಮಂಗಳೂರು ಆರ್‌ಟಿಒ

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.