TDP ನಾಯಕತ್ವ ಯಾರ ಕೈಗೆ?
Team Udayavani, Sep 12, 2023, 11:49 PM IST
ಆಂಧ್ರಪ್ರದೇಶ ಚುನಾವಣೆ ಸಮೀಪಿಸುತ್ತಿರುವಂತೆಯೇ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನದ ಮೂಲಕ ಅಲ್ಲಿ ರಾಜಕೀಯ ಬಿರುಗಾಳಿ ಎದ್ದಿದೆ. ಕೌಶಲಾಭಿವೃದ್ಧಿ ಹಗರಣ ಸಂಬಂಧ ನಾಯ್ಡು ಜೈಲು ಸೇರಿದರೆ, ಅವರ ಪುತ್ರ, ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಕೂಡ ಇದೇ ಪ್ರಕರಣದಲ್ಲಿ ತನಿಖೆ ಎದುರಿಸುವ ಎಲ್ಲ ಸಾಧ್ಯತೆಯೂ ಇದೆ ಎನ್ನುತ್ತಿವೆ ವರದಿಗಳು. ಈ ಎಲ್ಲ ಬೆಳವಣಿಗೆಗಳ ನಡುವೆಯೇ, ಅಪ್ಪ-ಮಗನ ಅನುಪಸ್ಥಿತಿಯಲ್ಲಿ ಟಿಡಿಪಿ ನಾಯಕತ್ವವನ್ನು ಯಾರು ವಹಿಸಿಕೊಳ್ಳಬೇಕು ಎಂಬ ಚರ್ಚೆ ನಿಧಾನಕ್ಕೆ ಶುರುವಾಗಿದೆಯಂತೆ.
ಟಿಡಿಪಿ ಆಂಧ್ರ ಘಟಕದ ಅಧ್ಯಕ್ಷ ಅಚ್ಚೆನ್ ನಾಯ್ಡು ಮತ್ತು ಮಾಜಿ ಶಿಕ್ಷಣ ಸಚಿವ ಗಂಟ ಶ್ರೀನಿವಾಸ ರಾವ್ ನಡುವೆ “ನಾಯಕತ್ವ’ಕ್ಕೆ ಪೈಪೋಟಿ ಆರಂಭವಾಗುವ ಎಲ್ಲ ಸಾಧ್ಯತೆಗಳೂ ಇವೆ. ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ನಾಯ್ಡು ಇಲ್ಲದೆಯೇ ಪಕ್ಷ ತನ್ನ ವರ್ಚಸ್ಸನ್ನು ಉಳಿಸಿಕೊಳ್ಳುತ್ತದೋ ಅಥವಾ ನಾಯಕತ್ವಕ್ಕಾಗಿ ಕಚ್ಚಾಟ ಶುರುವಾಗುತ್ತದೋ ಎಂಬ ಚಿಂತೆ ಕಾರ್ಯಕರ್ತರನ್ನು ಕಾಡುತ್ತಿದೆಯಂತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
MUST WATCH
ಹೊಸ ಸೇರ್ಪಡೆ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ