ಶ್ರದ್ಧಾ ಕೇಂದ್ರಗಳಿಗೂ ಆರ್ಥಿಕ ಗ್ರಹಣ ; ಶೀಘ್ರದಲ್ಲಿ ದೇವರ ದರ್ಶನ ನಿರೀಕ್ಷೆ


Team Udayavani, May 10, 2020, 11:30 AM IST

ಶ್ರದ್ಧಾ ಕೇಂದ್ರಗಳಿಗೂ ಆರ್ಥಿಕ ಗ್ರಹಣ ; ಶೀಘ್ರದಲ್ಲಿ ದೇವರ ದರ್ಶನ ನಿರೀಕ್ಷೆ

ಉಡುಪಿ: ಕಳೆದ 50 ದಿನಗಳಿಂದ ಭಕ್ತರಿಗೆ ದೇಗುಲಗಳ ಬಾಗಿಲು ಮುಚ್ಚಿದ್ದು, ಬಾಗಿಲು ತೆರೆದು ದೇವರ ದರುಶನ ಭಾಗ್ಯ
ನೀಡುವಂತೆ ಭಕ್ತರಿಂದ ಆಗ್ರಹಗಳು ವ್ಯಕ್ತವಾಗುತ್ತಿವೆ. ಈ ನಿಟ್ಟಿನಲ್ಲಿ ಮುಜರಾಯಿ ಇಲಾಖೆಯೂ ಗಂಭೀರ ಚಿಂತನೆ ನಡೆಸಿದ್ದು, ಭಕ್ತರ ಆಗಮನದ ಸಾಧಕ-ಬಾಧಕಗಳನ್ನು ಚರ್ಚಿಸಿ ಶೀಘ್ರದಲ್ಲಿ ನಿರ್ಧಾರ ಪ್ರಕಟಿಸುವ ನಿರೀಕ್ಷೆಯಿದೆ.

ಆರ್ಥಿಕತೆಯ ಪ್ರಮುಖ ಮೂಲವಾಗಿರುವ ಪ್ರವಾಸೋದ್ಯಮ ಇಲಾಖೆಯ ಮೇಲಂತೂ ಕೋವಿಡ್ ಸೋಂಕು ಭಾರೀ ಹೊಡೆತ ನೀಡಿದೆ. ಅವಿಭಜಿತ ದ.ಕ. ಜಿಲ್ಲೆಗಳ ಎಲ್ಲ ದೇಗುಲಗಳು ಬಂದ್‌ ಆಗಿರುವ ಕಾರಣ ಭಾರೀ ನಷ್ಟ ಅನುಭವಿಸುತ್ತಿವೆ.

ಸಾಮಾನ್ಯವಾಗಿ ಎಪ್ರಿಲ್‌, ಮೇ ತಿಂಗಳಲ್ಲಿ ದೇಗುಲಗಳಿಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚು. ಎ ಶ್ರೇಣಿಯ ದೇಗುಲಗಳನ್ನು ಹೊರತುಪಡಿಸಿ ಜಿಲ್ಲೆಯ ಇತರ ದೇಗುಲಗಳು ತಿಂಗಳಿಗೆ 4ರಿಂದ 6 ಕೋಟಿ ರೂ. ತನಕವೂ ಆದಾಯ ತರುತ್ತವೆ. ಆದರೆ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಈಗ ದೇಗುಲಗಳಲ್ಲಿ ಸಂಪ್ರದಾಯದಂತೆ ದಿನಕ್ಕೆರಡು ಬಾರಿ ಪೂಜೆಗಳನ್ನು ಮಾತ್ರ ನಡೆಸಲಾಗುತ್ತಿದೆ.

ಭಕ್ತರ ಆಗಮನಕ್ಕೆ ಅವಕಾಶ ಇಲ್ಲ
ದ.ಕ.ದಲ್ಲಿ 494, ಉಡುಪಿ ಜಿಲ್ಲೆಯಲ್ಲಿ 810 ಸೇರಿ 1,304 ದೇವಸ್ಥಾನಗಳಿವೆ. ಇವುಗಳಲ್ಲಿ 64 ಎ ಶ್ರೇಣಿಯ ದೇವಸ್ಥಾನಗಳು. ವಾರ್ಷಿಕವಾಗಿ ಕುಕ್ಕೆ ದೇವಸ್ಥಾನ 100 ಕೋ.ರೂ., ಕೊಲ್ಲೂರು ದೇವಸ್ಥಾನ 80 ಕೋಟಿ ರೂ. ಕಟೀಲು ದೇವಸ್ಥಾನ 40-42 ಕೋ.ರೂ., ಮಂದಾರ್ತಿ 10-12 ಕೋ.ರೂ. ಆದಾಯವನ್ನು ಕಳೆದ ಸಾಲಿನಲ್ಲಿ ಗಳಿಸಿದ್ದವು. ಆದರೆ ಈ ಸಾಲಿನಲ್ಲಿ ದೇವಸ್ಥಾನಗಳು ಭಾರೀ ನಷ್ಟಕ್ಕೆ ಒಳಗಾಗಿವೆ.

ಕುಕ್ಕೆ ದೇಗುಲವೊಂದೇ ಕಳೆದ ವರ್ಷ ಮಾರ್ಚ್‌ನಲ್ಲಿ 7,60,18,137.93 ಕೋ.ರೂ., ಎಪ್ರಿಲ್‌ನಲ್ಲಿ 6,57,33,223.26 ಕೋ.ರೂ., ಮೇ ತಿಂಗಳಲ್ಲಿ 8,61,86,203.00 ಸೇರಿದಂತೆ ಈ ಮೂರು ತಿಂಗಳಲ್ಲಿ 22,79,37,564.19 ಕೋ.ರೂ. ಆದಾಯ ತಂದುಕೊಟ್ಟಿತ್ತು. ಆದರೆ ಈ ವರ್ಷ ಇದೇ ಅವಧಿಯಲ್ಲಿ ಭಕ್ತರೇ ಇಲ್ಲದ ಕಾರಣ ಸೇವೆಗಳು, ಕಾಣಿಕೆ ಮೂಲಕ ಬರುವ ಆದಾಯವೇ ಇಲ್ಲವಾಗಿದೆ.

150 ಕೋ. ರೂ. ನಷ್ಟ
ದೇವಸ್ಥಾನಗಳು ಬಂದ್‌ ಆಗಿರುವ ಕಾರಣ ರಾಜ್ಯಕ್ಕೆ ಸುಮಾರು 150 ಕೋ. ರೂ. ನಷ್ಟವಾಗಿದೆ ಎಂದು ಮುಜರಾಯಿ ಸಚಿವರು ಈಗಾಗಲೇ ಹೇಳಿದ್ದಾರೆ. ಕೋವಿಡ್ ಸೋಂಕು ಪಸರಿಸದಂತೆ ಸಾಮಾಜಿಕ ಅಂತರ ಇತ್ಯಾದಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಭಕ್ತರ ಆಗಮನಕ್ಕೆ ಅವಕಾಶ ನೀಡುವುದು ಹೇಗೆ ಎಂಬ ಬಗ್ಗೆ ಇಲಾಖೆಯು ಚಿಂತನೆಯಲ್ಲಿದೆ. ಆನ್‌ಲೈನ್‌ ಮೂಲಕ ಸೇವೆಗಳನ್ನು ಅರಂಭಿಸುವ ಯೋಜನೆಯೂ ಸರಕಾರದ ಮುಂದಿದೆ.

ದೇವಸ್ಥಾನಗಳಲ್ಲಿ ದೈನಂದಿನ ಪೂಜೆಗಳು, ಉತ್ಸವ ಇತ್ಯಾದಿ ಸಾಂಕೇತಿಕವಾಗಿ ನಡೆಯುತ್ತಿವೆ. ಭಕ್ತರು ಭೇಟಿ ನೀಡುವ ಸೀಸನ್‌ನಲ್ಲಿ ಲಾಕ್‌ಡೌನ್‌ ಆಗಿರುವುದರಿಂದ ಅವಿಭಜಿತ ದ.ಕ. ಜಿಲ್ಲೆಯ ದೇಗುಲಗಳು ಶೇ. 50ರಷ್ಟು ನಷ್ಟ ಅನುಭವಿಸಿವೆ. ದೇವಸ್ಥಾನಗಳನ್ನು ಭಕ್ತರಿಗೆ ದರ್ಶನಕ್ಕೆ ತೆರೆಯುವ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಸುತ್ತಿದ್ದೇವೆ. ಶೀಘ್ರ ನಿರ್ಧಾರ ಪ್ರಕಟಿಸಲಾಗುವುದು.
– ಕೋಟ ಶ್ರೀನಿವಾಸ ಪೂಜಾರಿ, ಮುಜರಾಯಿ ಇಲಾಖೆ ಸಚಿವರು

ಟಾಪ್ ನ್ಯೂಸ್

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.