BJPಯಿಂದ ದೇಗುಲ ಸ್ವಚ್ಛತೆ ಅಭಿಯಾನ- ಜ. 22ರ ವರೆಗೆ ಅಭಿಯಾನದ ಜತೆಗೆ ಭಜನೆ, ಕೀರ್ತನೆ ಗಾಯನ
Team Udayavani, Jan 14, 2024, 10:18 PM IST
ಹೊಸದಿಲ್ಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ಇನ್ನು ಒಂದು ವಾರ ಬಾಕಿ ಉಳಿದಿದೆ. ಅದಕ್ಕೆ ಪೂರಕವಾಗಿ ಕರ್ನಾಟಕ ಸಹಿತ ದೇಶದ ವಿವಿಧ ಭಾಗಗಳಲ್ಲಿ ಬಿಜೆಪಿಯ ನಾಯಕರು ದೇವಸ್ಥಾನ ಸ್ವತ್ಛತೆ ಆಂದೋಲನಕ್ಕೆ ಚಾಲನೆ ನೀಡಿದ್ದಾರೆ. ಬಿಜೆಪಿಯ ಹಿರಿಯ ನಾಯಕರು, ಬಿಜೆಪಿ ಆಡಳಿತ ಇರುವ ರಾಜ್ಯಗಳ ಮುಖ್ಯಮಂತ್ರಿಗಳು, ಸಂಸದರು ಕಸಬರಿಕೆ ಹಿಡಿದು ಗುಡಿಸಿದ್ದಾರೆ. ಕೆಲವು ನಾಯಕರು ವಿವಿಧ ಸ್ಥಳಗಳಲ್ಲಿ ನೆಲ ಒರೆಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಜ. 12ರಂದು ನಾಶಿಕ್ನಲ್ಲಿ ದೇಗುಲ ಶುಚಿ ಮಾಡಿದ್ದ ವೇಳೆ ದೇಶಾದ್ಯಂತ ಇದೇ ಮಾದರಿ ಅಭಿಯಾನಕ್ಕೆ ಕರೆ ನೀಡಿದ್ದರು.
ಹೊಸದಿಲ್ಲಿಯಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಕರೋಲ್ ಬಾಗ್ನಲ್ಲಿರುವ ಗುರು ರವಿದಾಸ್ ಮಂದಿರದಲ್ಲಿ ಕಸಬರಿಕೆ ಹಿಡಿದು ಗುಡಿಸಿ, ಒರೆಸಿದರು. ಬಳಿಕ ಮಾತನಾಡಿದ ಅವರು ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತನೂ ದೇಶದ ವಿವಿಧ ಭಾಗಗಳಲ್ಲಿ ನಡೆಯುವ ಸ್ವತ್ಛತೆ ಕಾರ್ಯದಲ್ಲಿ ಭಾಗವಹಿಸುತ್ತಿದ್ದಾನೆ. ಈ ಕಾರ್ಯಕ್ರಮ ಜ. 22ರ ವರೆಗೆ ನಡೆಯಲಿದೆ. ಇದರ ಜತೆಗೆ ಭಜನೆ, ಕೀರ್ತನೆಗಳನ್ನು ಹಾಡುವ ಕಾರ್ಯಕ್ರಮಗಳನ್ನೂ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದರು.
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಯಲ್ಲಿ ಶುಚಿತ್ವ ಆಂದೋಲನದಲ್ಲಿ ಭಾಗವಹಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಪ್ರಧಾನಿ ಮೋದಿಯವರ ಕರೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶುಚಿತ್ವದ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಅಯೋಧ್ಯೆಯಲ್ಲಿ ಕೂಡ ಅದನ್ನು ನಡೆಸಲಾಗಿದೆ’ ಎಂದಿದ್ದಾರೆ. ಲಕ್ನೋದಲ್ಲಿ ಉ.ಪ್ರ. ಡಿಸಿಎಂ ಬೃಜೇಶ್ ಪಾಠಕ್ ಕಾರ್ಯತರ್ತರು, ಮುಖಂಡರ ಜತೆಗೂಡಿ ದೇಗುಲದ ನೆಲವನ್ನು ಒರೆಸಿದ್ದಾರೆ.
ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಉಜ್ಜಯಿನಿಯ ರಾಮ ಜನಾರ್ದನ ದೇಗುಲದಲ್ಲಿ ಕಸ ಗುಡಿಸಿದ್ದಾರೆ. ಗುಜರಾತ್, ರಾಜಸ್ಥಾನ ಸಿಎಂಗಳಾದ ಭೂಪೇಂದ್ರ ಪಟೇಲ್, ಭಜನ್ಲಾಲ್ ಶರ್ಮಾ ಕೂಡ ತಮ್ಮ ರಾಜ್ಯಗಳಲ್ಲಿ ದೇಗುಲ ಸ್ವತ್ಛಗೊಳಿಸಿ ಶುಚಿತ್ವದ ಮಹತ್ವ ಸಾರಿದ್ದಾರೆ.
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಒಡಿಶಾದ ಬಾಲೇಶ್ವರದಲ್ಲಿ, ಧರ್ಮೇಂದ್ರ ಪ್ರಧಾನ್ ಹೊಸದಿಲ್ಲಿಯಲ್ಲಿ ಸ್ವತ್ಛತೆ ಅಭಿಯಾನದಲ್ಲಿ ಭಾಗವಹಿಸಿದ್ದರು. ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಶಾ ಅವರು ಅರ್ಗತಾದಲ್ಲಿರುವ ಜಗನ್ನಾಥ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
MUST WATCH
ಹೊಸ ಸೇರ್ಪಡೆ
Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!
ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ
Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು