ಜೂನ್ 1ರಿಂದ ದೇವಸ್ಥಾನ ದರ್ಶನಕ್ಕೆ ಅವಕಾಶ : ಇನ್ನೂ ಕೈ ಸೇರದ ಸರಕಾರದ ಆದೇಶ!
Team Udayavani, May 30, 2020, 3:11 PM IST
ಮಂಗಳೂರು/ಉಡುಪಿ: ರಾಜ್ಯಾದ್ಯಂತ ಜೂನ್ 1ರಿಂದ ದೇವಸ್ಥಾನಗಳು ಭಕ್ತರ ಸೇವೆಗೆ ತೆರೆಯುವುದಾಗಿ ರಾಜ್ಯ ಸರಕಾರ ಈಗಾಗಲೇ ಘೋಷಣೆ ಮಾಡಿದ್ದರೂ ಈ ಬಗ್ಗೆ ಕೇಂದ್ರದಿಂದ ಇನ್ನೂ ಯಾವುದೇ ಆದೇಶ ಅಥವಾ ಮಾರ್ಗಸೂಚಿ ಬಂದಿಲ್ಲ. ಹೀಗಾಗಿ, ದೇವಸ್ಥಾನಗಳನ್ನು ಭಕ್ತರ ದರ್ಶನಕ್ಕೆ ತೆರೆಯ ಬೇಕೋ; ಬೇಡವೇ ಎನ್ನುವ ಗೊಂದಲಕ್ಕೆ ದೇವಸ್ಥಾನದ ಆಡಳಿತ ಮಂಡಳಿಯವರು ಸಿಲುಕಿದ್ದಾರೆ.
ಕೋವಿಡ್ ಭೀತಿಯಿಂದಾಗಿ ದೇವಾಲಯಗಳು ಮತ್ತೆ ಭಕ್ತರ ದರ್ಶನಕ್ಕೆ ತೆರೆಯಲು ಕೇಂದ್ರ ಸರಕಾರದಿಂದ ಸಹಮತ ಬೇಕು. ರಾಜ್ಯ ಸರಕಾರ ಇದೀಗ ಕೇಂದ್ರದ ಅನುಮತಿ ನಿರೀಕ್ಷೆಯಲ್ಲಿದೆ. ಆದರೆ, ಕೇಂದ್ರದ ಅನುಮತಿ ಬರುವುದಕ್ಕಿಂತ ಮೊದಲೇ ರಾಜ್ಯ ಸರಕಾರ ಈ ಬಗ್ಗೆ ಘೋಷಣೆ ಮಾಡಿರುವ ಕಾರಣ ದೇವಳದವರು ಹಾಗೂ ಭಕ್ತರು ಗೊಂದಲಕ್ಕೆ ಸಿಲುಕಿದ್ದಾರೆ.
ಇನ್ನೊಂದೆಡೆ, ಸರಕಾರದ ಮುನ್ಸೂಚನೆಯಂತೆ ಉಭಯ ಜಿಲ್ಲೆಗಳ ಕೆಲವು ದೇವಸ್ಥಾನಗಳಲ್ಲಿ ಈಗಾಗಲೇ ತಯಾರಿ ನಡೆಯುತ್ತಿದೆ. ದೇವಸ್ಥಾನದ ಆವರಣ ಸ್ವತ್ಛತೆ, ಸ್ಯಾನಿಟೈಸ್ ಕೆಲಸ ನಡೆಯುತ್ತಿದೆ. ಮಾತ್ರವಲ್ಲದೇ ಯಾವೆಲ್ಲ ನಿಯಮಗಳನ್ನು ಪಾಲನೆ ಮಾಡಬೇಕು ಎಂಬ ಬಗ್ಗೆ ನಿಯಮ ರೂಪಿಸಿದೆ. ಇನ್ನೂ, ಕೆಲವು ದೇವಸ್ಥಾನ ಆಡಳಿತ ಮಂಡಳಿಯು ರಾಜ್ಯ ಸರಕಾರದ ಅನುಮತಿ ಬಂದ ಬಳಿಕವಷ್ಟೇ ಸೂಕ್ತ ತಯಾರಿ ನಡೆಸಲು ತೀರ್ಮಾನಿಸಿದೆ. .
ಆನ್ಲೈನ್ ಸೇವೆ
ಲಾಕ್ಡೌನ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಕಟೀಲು, ಕುಕ್ಕೆ, ಉಡುಪಿ ಜಿಲ್ಲೆಯ ಕೊಲ್ಲೂರು, ಮಂದಾರ್ತಿ ದೇವಸ್ಥಾನದಲ್ಲಿ ಆನ್ಲೈನ್ ಸೇವೆ ಲಭ್ಯವಿದೆ.
ಕೇಂದ್ರದ ಸಹಮತ ನಿರೀಕ್ಷೆಯಲ್ಲಿ
ರಾಜ್ಯದಲ್ಲಿ ಜೂನ್ 1ರಿಂದ ದೇವಸ್ಥಾನ ತೆರೆಯುವ ಬಗ್ಗೆ ರಾಜ್ಯ ಸರಕಾರ ಈಗಾಗಲೇ ನಿರ್ಧರಿಸಿದೆ. ಈ ಬಗ್ಗೆ ಕೇಂದ್ರದ ಸಹಮತಕ್ಕಾಗಿ ಕಾಯುತ್ತಿದ್ದೇವೆ. ಈ ತಿಂಗಳ ಅಂತ್ಯದೊಳಗೆ ಕೇಂದ್ರ ಸರಕಾರದಿಂದ ಸೂಕ್ತ ನಿರ್ದೇಶನ ಬರುವ ನಿರೀಕ್ಷೆಯಲ್ಲಿದ್ದೇವೆ. ಆ ಬಳಿಕ ರಾಜ್ಯದಿಂದ ಅಧಿಕೃತ ಆದೇಶ ಹೊರಡಿಸಲಾಗುವುದು.
– ಕೋಟ ಶ್ರೀನಿವಾಸ ಪೂಜಾರಿ, ಮುಜರಾಯಿ ಸಚಿವ
ನಿರ್ದೇಶನ ಬಂದಿಲ್ಲ
ಜಿಲ್ಲೆಯಲ್ಲಿ ಜೂನ್ 1ರಿಂದ ದೇವಸ್ಥಾನಗಳು ತೆರೆಯುವ ಬಗ್ಗೆ ರಾಜ್ಯ ಸರಕಾರದಿಂದ ಯಾವುದೇ ನಿರ್ದೇಶನ ಬಂದಿಲ್ಲ. ಜಿಲ್ಲೆಯ ದೇವಸ್ಥಾನಗಳ ಪಟ್ಟಿ ಸಿದ್ಧವಿದ್ದು, ಆದೇಶ ಬಂದ ಕೂಡಲೇ ಈ ಬಗ್ಗೆ ಸುತ್ತೋಲೆ ಕಳುಹಿಸಲಾಗುವುದು.
– ಸಿಂಧೂ ಬಿ. ರೂಪೇಶ್, ಜಿ. ಜಗದೀಶ್, ಜಿಲ್ಲಾಧಿಕಾರಿಗಳು, ದ.ಕ., ಉಡುಪಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ