ಥೈಲ್ಯಾಂಡ್‌: ಕೋವಿಡ್ ಜತೆಗೆ ಮಾನವ ಕಳ್ಳಸಾಗಾಣಿಕೆ ಭಯ


Team Udayavani, May 7, 2020, 12:53 PM IST

ಥೈಲ್ಯಾಂಡ್‌: ಕೋವಿಡ್ ಜತೆಗೆ ಮಾನವ ಕಳ್ಳಸಾಗಾಣಿಕೆ ಭಯ

ಬ್ಯಾಂಕಾಕ್‌: ಕೋವಿಡ್ ವೈರಸ್‌ ಅಪಾರ ಪ್ರಮಾಣದ ಸಾವುನೋವುಗಳಿಗೆ ಕಾರಣವಾಗುತ್ತಿದ್ದರೆ ಮತ್ತೂಂದೆಡೆ ಮಾನವ ಕಳ್ಳ ಸಾಗಾಣಿಕೆಯ ಪ್ರಕರಣಗಳು ಹೆಚ್ಚಾಗುತ್ತಿರುವ ಕುರಿತು ಆತಂಕ ವ್ಯಕ್ತವಾಗುತ್ತಿದೆ.

ಥೈಲ್ಯಾಂಡ್‌ನ‌ ಉತ್ತರ ನ್ಯಾನ್‌ ಪ್ರಾಂತ್ಯದಲ್ಲಿನ ಬಡ ಕುಟುಂಬಗಳು ಈ ಸಮಸ್ಯೆಗೆ ಹೆಚ್ಚು ಒಳಗಾಗುತ್ತಿದ್ದಾರೆ. ಗುಡ್ಡಗಾಡು ಪ್ರದೇಶದ ಈ ಬುಡಕಟ್ಟು ಜನಾಂಗ ಮತ್ತು ಸಣ್ಣಪುಟ್ಟ ಕೃಷಿ ಮಾಡಿಕೊಂಡು ಜೀವನ ಸಾಗಿಸುತ್ತಿರುವವರು ಕಳ್ಳಸಾಗಣೆಗೆ ಬಲಿಯಾಗುತ್ತಿದ್ದಾರೆ. ಹೆಚ್ಚಾಗಿ ಇಲ್ಲಿನ ಮಕ್ಕಳು ದೈಹಿಕವಾಗಿಯೂ ದುರ್ಬಲವಾಗಿದ್ದು, ಶಿಕ್ಷಣದಿಂದ ವಂಚಿತರಾಗಿರುತ್ತಾರೆ.

ಆಗ್ನೇಯ ಏಷ್ಯಾ ಬಹಳ ಹಿಂದಿನಿಂದಲೂ ಮಾನವ ಕಳ್ಳಸಾಗಣೆಯ ಸಮಸ್ಯೆಯನ್ನು ಎದುರಿಸುತ್ತಿದೆ. ಇದೀಗ ಕೋವಿಡ್ ವೈರಸ್‌ನ ವಿರುದ್ಧದ ಹೋರಾಟದ ಭಾಗವಾಗಿ ಲಾಕ್‌ಡೌನ್‌ ವಿಸ್ತರಣೆಗೊಂಡಿದೆ. ಇದರ ಪರಿಣಾಮವಾಗಿ ಕಾರ್ಖಾನೆಗಳು ಮುಚ್ಚಿದ್ದು, ಆರ್ಥಿಕ ಚಟುವಟಿಕೆಗಳು ಸ್ತಬ್ಧವಾಗಿವೆ. ಬಹುತೇಕ ಉದ್ಯಮಗಳು ಈಗ ಮುಚ್ಚಿದ್ದು, ಉದ್ಯೋಗ ನಷ್ಟಗಳ ಪ್ರಮಾಣ ಹೆಚ್ಚಾಗಿದೆ. ಕಾಂಬೋಡಿಯಾದ ಉಡುಪು ಉದ್ಯಮ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಉದ್ಯೋಗಗಳು ನಷ್ಟಗೊಂಡಿವೆ.

ನಗರಗಳಲ್ಲಿ ಉದ್ಯೋಗ ನಷ್ಟವಾದರೆ ಅದರ ಪರಿಣಾಮ ಕಾಂಬೋಡಿಯಾದ ಹಳ್ಳಿಗಳ ಮೇಲೆ ಆಗುತ್ತದೆ. ಹಳ್ಳಿಗಳಿಂದ ತೆರಳಿ ನಗರದಲ್ಲಿ ಉದ್ಯೋಗ ಮಾಡುತ್ತಿದ್ದವರು ಮನೆಗೆ ಹಣವನ್ನು ಕಳುಹಿಸಬೇಕು. ಯಾಕೆಂದರೆ, ಹಳ್ಳಿಗಳಲ್ಲಿನ ಜನರು ಸಾಲ ತೆಗೆದುಕೊಂಡು ಜೀವನ ಸಾಗಿಸುತ್ತಿದ್ದು, ಇದರ ಬಡ್ಡಿಯನ್ನು ನಗರದಲ್ಲಿದ್ದವರು ಪಾವತಿಸುತ್ತಿದ್ದರು. ಇಂತಹ ಕಠಿನ ಸಂದರ್ಭ ಸಾಲ ಮರುಪಾವತಿಸಲು ಸಾಧ್ಯವಾಗದೇ ಇದ್ದರೆ ಮನೆಯಲ್ಲಿನ ಹೆಣ್ಣುಮಕ್ಕಳನ್ನು ಒತ್ತೆಯಾಳುಗಳಾಗಿ ಇಡಲಾಗುತ್ತದೆ. ಈ ಹಿಂದಿನ ಜಾಗತಿಕ ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಇಂಥ ಬೆಳವಣಿಗೆ ಘಟಿಸಿದ್ದವು.

ಥೈಲ್ಯಾಂಡ್‌ನ‌ಲ್ಲಂತೂ ಕೋವಿಡ್ ಸಾಂಕ್ರಾಮಿಕ ದೇಶದ ಬಡವರನ್ನು ಹತಾಶೆಗೆ ತಳ್ಳಿದೆ. ಬಡ ಸಮುದಾಯಗಳು ಇಂದು ಸಂಕಷ್ಟದಲ್ಲಿದ್ದಾರೆ. ಉದ್ಯೋಗ ಕೊರತೆಗಳು ಮತ್ತು ಉದ್ಯೋಗ ನಷ್ಟದ ಪರಿಣಾಮಗಳನ್ನು ಹದಿಹರೆಯದವರು ಎದುರಿಸುವಂತಾಗಿದೆ. ಮಾನವ ಕಳ್ಳಸಾಗಣೆಗಾಗರರು ಇದರ ದುರ್ಲಾಭ ಪಡೆಯಲು ಯತ್ನಿಸುತ್ತಿದ್ದು, ಎಳೆಯ ಮಕ್ಕಳನ್ನು ಸೇರಿದಂತೆ ಯುವಕ ಯುವತಿಯನ್ನು ಅಪಹರಿಸಿ ಕೆಲಸದಾಳುಗಳಿಗೆ ಮಾರುತ್ತಿದ್ದಾರೆ ಎಂದು ಅಲ್‌ ಜಜೀರಾ ವರದಿ ಮಾಡಿದೆ.

ಮಕ್ಕಳಿಗೆ ಅಪಾಯ
ಯುವತಿಯರನ್ನು ಲೈಂಗಿಕತೆಗೆ ಬಳಸಿಕೊಳ್ಳಲಾಗುತ್ತಿದ್ದು, ಇಂಥ ಚಟುವಟಿಕೆಗಳು ದೇಶದಲ್ಲಿ ತಲೆ ಎತ್ತುತ್ತಿವೆ. ಹಣದ ಅನಿವಾರ್ಯತೆಗೆ ಕುಟುಂಬಗಳು ಬಲಿಯಾಗುತ್ತಿವೆ. ಶಾಲಾ ಕಾಲೇಜುಗಳು ಮುಚ್ಚಲಾದ ಪರಿಣಾಮ ಮಕ್ಕಳು ಮನೆಯಲ್ಲಿಯೇ ಇದ್ದು, ಆನ್‌ಲೈನ್‌ಗಳಲ್ಲಿ ಸಮಯ ಕಳೆಯುತ್ತಿದ್ದಾರೆ. ಇದರಿಂದ ಇಂಟರ್ನೆಟ್‌ ಮೂಲಕ ಕಳ್ಳಸಾಗಾಣಿಕೆಯ ಜಾಲಗಳು ಇವರನ್ನು ಸಂಪರ್ಕಿಸುವ ಅಪಾಯವಿದೆ. ಚಾಟ್‌, ವೀಡಿಯೋ ಚಾಟ್‌ ಮಾಡಿ ಹಣಗಳಿಸಬಲ್ಲ ತಾಣಗಳು ಅಲ್ಲಿ ಸಕ್ರಿಯವಾಗಿವೆ.

ಶಿಕ್ಷಣ ಇಲ್ಲ
ಶಿಕ್ಷಣದಿಂದ ಬಹುತೇಕ ವಂಚಿತರಾಗಿರುವ ಹಲವು ಬಡ ಮಕ್ಕಳು ಅನೇಕ ಸಾಮಾಜಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಪೋಷಕರು ದೂರದಲ್ಲೆಲ್ಲೋ ಕೂಲಿ ಮಾಡುವುದರಿಂದ ಮನೆಯಲ್ಲಿ ಮಕ್ಕಳೂ ಮಾತ್ರ. ಈ ಸಂದರ್ಭ ಕಳ್ಳಸಾಗಾಣಿಕೆಯ ಜಾಲ ಸಕ್ರಿಯವಾಗಲು ಅನುಕೂಲ. ಅಮೆರಿಕದ ಅಂದಾಜಿನ ಪ್ರಕಾರ ವಾರ್ಷಿಕವಾಗಿ 8 ಲಕ್ಷ ಜನರನ್ನು ಅಂತಾರಾಷ್ಟ್ರೀಯ ಗಡಿಗಳಲ್ಲಿ ಈ ಮೂಲಕ ಸಾಗಿಸಲಾಗುತ್ತದೆ. ಅಕ್ರಮ ಮಾನವ ಕಳ್ಳಸಾಗಣೆಯ ಒಟ್ಟು ಮಾರುಕಟ್ಟೆ ಮೌಲ್ಯವು ಸರಿಸುಮಾರು 32 ಬಿಲಿಯನ್‌ ಡಾಲರ್‌ ಆಗಿದೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.