ನಟ ಯಶ್‌ ಅಭಿವೃದ್ದಿ ಪಡಿಸಿದ ತಲ್ಲೂರ ಕೆರೆ! ರೈಲ್ವೆ ಗುತ್ತಿಗೆದಾರರ ಎಡವಟ್ಟಿಗೆ ಕೆರೆ ಭಣಭಣ


Team Udayavani, Oct 15, 2020, 3:31 PM IST

ನಟ ಯಶ್‌ ಅಭಿವೃದ್ದಿ ಪಡಿಸಿದ ತಲ್ಲೂರ ಕೆರೆ! ರೈಲ್ವೆ ಗುತ್ತಿಗೆದಾರರ ಎಡವಟ್ಟಿಗೆ ಕೆರೆ ಭಣಭಣ

ಯಲಬುರ್ಗಾ: ಈ ಬಾರಿ ಮಳೆಯ ಪ್ರಮಾಣ ವಾಡಿಕೆಗಿಂತ ಹೆಚ್ಚಾಗಿದೆ. ತಾಲೂಕಿನ ಬಹುತೇಕ ಕೆರೆಗಳು ತುಂಬಿ ಭರ್ತಿಯಾಗಿವೆ.
ಭರ್ತಿಯಾದ ಕೆರೆಗಳಿಗೆ ಪೂಜೆ ಬಾಗಿನ ಸಲ್ಲಿಸುವುದನ್ನು ಕಾಣುತ್ತಿದ್ದೇವೆ. ಆದರೆ ತಾಲೂಕಿನಲ್ಲಿಯೇ ಅತಿ ದೊಡ್ಡದಾದ
ಕೆರೆ, ಚಿತ್ರನಟ ಯಶ್‌ ಅಭಿವೃದ್ಧಿ ಪಡಿಸಿದ ತಲ್ಲೂರು ಕೆರೆ ಅಂಗಳ ಮಾತ್ರ ಭಣಗುಡುತ್ತಿದೆ.

ಕೆರೆಗೆ ನೀರು ಬರುವ ಸ್ಥಳವನ್ನು ರೈಲ್ವೆ ಇಲಾಖೆಯವರು ತಪ್ಪಿಸಿದ ಪರಿಣಾಮ ಈ ಬಾರಿ ಹೆಚ್ಚಿನ ಮಳೆಯಾದರೂ ಕೆರೆಯಲ್ಲಿ ನೀರು ಇಲ್ಲದಂತಾಗಿದೆ. ಗದಗ-ವಾಡಿ ರೈಲ್ವೆ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿ ಹೊಣೆ ಹೊತ್ತ ರೈಲ್ವೆ ಗುತ್ತಿಗೆದಾರರು ನೀರಿನ
ಜಾಡು ಹಾದಿಯನ್ನು ತಪ್ಪಿಸಿದ್ದು ಕೆರೆಗೆ ನೀರು ಬರುತ್ತಿಲ್ಲ ಎಂಬುದು ರೈತರ ಆರೋಪವಾಗಿದೆ.

ನೀರಿನ ಸಂಪರ್ಕ ಸ್ಥಳದಲ್ಲಿ ಗುಂಡಿ: ಕೆರೆಗೆ ನೀರು ಬರುವ ಸ್ಥಳ, ಜಮೀನುಗಳಲ್ಲಿ ಮರಂ ತೆಗೆಯಲು ದೊಡ್ಡ ದೊಡ್ಡ
ಪ್ರಮಾಣದಲ್ಲಿ ಗುಂಡಿ ತೋಡಿದ ಪರಿಣಾಮ ನೀರು ಗುಂಡಿಯಲ್ಲಿ ಒಂದಿಷ್ಟು ಸಂಗ್ರಹವಾಗಿದೆ. ಕೆರೆಗೆ ದೊಡ್ಡ ಪ್ರಮಾಣದಲ್ಲಿ ನೀರು ಬರುವ ವಜ್ರಬಂಡಿ, ಲಿಂಗನಬಂಡಿ, ನೀರಿನ ಹರಿವನ್ನು ತಪ್ಪಿಸಿದ್ದರಿಂದ ಕೆರೆಗೆ ನೀರು ಹರಿದು ಬಂದಿಲ್ಲ.

ಇದನ್ನೂ ಓದಿ:ಬಿಹಾರ ರಾಜಕೀಯ ರಂಗು: ಮೂವರು ಸ್ಟಾರ್ ನಾಯಕರು… ಅಟಲ್ ಮೇಲಿನ ಕೋಪಕ್ಕೆ ಎಲ್ ಜೆಪಿ ಸ್ಥಾಪನೆ

ಯಶ್‌ ಅಭಿವೃದ್ದಿ ಪಡಿಸಿದ ಕೆರೆ: ಚಿತ್ರನಟ ಯಶ್‌ ಅವರು ತಮ್ಮ ಯಶೋಮಾರ್ಗ ಸಂಸ್ಥೆ ವತಿಯಿಂದ 4 ಕೋಟಿ ರೂ. ವೆಚ್ಚದಲ್ಲಿ ಹೂಳೆತ್ತಿ ಈ ಕೆರೆ ಅಭಿವೃದ್ಧಿ ಪಡಿಸಿದ್ದರು. ಕೆರೆ 96 ಎಕರೆ ವಿಸ್ತೀರ್ಣ ಹೊಂದಿದೆ. 40 ಗ್ರಾಮಗಳಿಗೆ ಆಸರೆಯಾಗಬೇಕಿದ್ದ ಕೆರೆಗೆ ನೀರಿಲ್ಲ. ನಟ ಯಶ್‌ ಅವರ ಪ್ರಯತ್ನದಿಂದ ತಲ್ಲೂರು ಕೆರೆಗೆ ನೀರು ಬಂದಿತ್ತು. ರೈಲ್ವೆ ಇಲಾಖೆಯ ಗುತ್ತಿಗೆದಾರರ
ಅವೈಜ್ಞಾನಿಕ ನಿರ್ಣಯದಿಂದ ನೀರು ಇಲ್ಲದಂತಾಗಿದೆ. ಕಳೆದ ಅಭಿವೃದ್ಧಿ ಪಡಿಸಿದ ಬಳಿಕ ಕೆರೆ ತುಂಬಿ ಈ ಭಾಗದ ರೈತರಿಗೆ ಅನುಕೂಲವಾಗಿತ್ತು. ಆದರೆ ಈ ವರ್ಷ ನೀರಿನ ಮಾರ್ಗ ಬದಲಿಸಿದ್ದಾರೆ.

ರೈತರ ಆಕ್ರೋಶ: ಕೆರೆಯ ನೀರಿನ ಹಾದಿ ತಪ್ಪಿಸಿದ ರೈಲ್ವೆ ಗುತ್ತಿಗೆದಾರರ ನಡೆ ಈ ಭಾಗದ ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಗುತ್ತಿಗೆದಾರರ ಮೇಲೆ ಕ್ರಮ ಜರುಗಿಸುವಂತೆ ತಹಶೀಲ್ದಾರ್‌ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬುದು
ರೈತರು ದೂರುತ್ತಾರೆ.

– ಮಲ್ಲಪ್ಪ ಮಾಟರಂಗಿ

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.