ಮಧ್ಯಮ ವರ್ಗದವರ ಮಹತ್ವಾಕಾಂಕ್ಷೆಯ ಬಜೆಟ್‌


Team Udayavani, Feb 2, 2020, 6:09 AM IST

kat-47

ಈ ಬಾರಿಯ ಬಜೆಟ್‌ ತೆರಿಗೆ ವಿಷಯದಲ್ಲಿ ಮಧ್ಯಮ ವರ್ಗಕ್ಕೆ ಅನುಕೂಲಕರವಾಗಿದೆ. ತೆರಿಗೆ ಪಾವತಿದಾರ ವಿವಾದವಿಲ್ಲದೆ ಕರ ಪಾವತಿಸಲು ಅನುಕೂಲ ಮಾಡಿಕೊಡಲಾಗಿದೆ. ಕರ ಪಾವತಿ, ಸ್ವೀಕೃತಿ ಪ್ರಕ್ರಿಯೆಯನ್ನು ಆನ್‌ಲೈನ್‌ ಮೂಲಕವೇ ಮಾಡುವ ವ್ಯವಸ್ಥೆಗೆ ಸರ್ಕಾರ ಬದ್ಧವಾಗಿದೆ. ಸಂಪತ್ತು ಸೃಜನೆ, ಶೂನ್ಯ ತೆರಿಗೆ ಭಯೋತ್ಪಾದನೆ ಸೇರಿದಂತೆ ಸರ್ಕಾರ ವಿವಿಧ ಉದ್ದೇಶಗಳು ಮುನ್ನೆಲೆಯಲ್ಲಿಯೇ ಜನರಿಗೆ ಗೋಚರಿಸುತ್ತವೆ. ಲಾಭಾಂಶ ವಿತರಣಾ ತೆರಿಗೆಯನ್ನು ತೆಗೆದುಹಾಕಿರುವ ಕಾರಣ ಹೂಡಿಕೆದಾರರು ಭಾರತದಲ್ಲಿ ಮತ್ತಷ್ಟು ಹೂಡಿಕೆ ಮಾಡಿ ತಮ್ಮ ವ್ಯಾಪರ ವಹಿವಾಟು ನಡೆಸಲು ಅವಕಾಶ ಕಲ್ಪಿಸಲಾಗಿದೆ.

ವೈಯುಕ್ತಿಕ ಆದಾಯ ತೆರಿಗೆ ಮಿತಿಯಲ್ಲಿ ಹಲವಾರು ರಿಯಾಯಿತಿಗಳನ್ನು ಘೋಷಿಸಿದ್ದು, 5 ಲಕ್ಷ ರೂ.ವರೆಗಿನ ಆದಾಯಕ್ಕೆ ಯಾವುದೇ ತೆರಿಗೆ ವಿಧಿಸದೇ ಇರುವುದು ಮಧ್ಯಮ ವರ್ಗಕ್ಕೆ ಅನುಕೂಲಕರವಾಗಿದೆ. ಹೇಗೆಂದರೆ ಪ್ರಸಕ್ತ ಬಜೆಟ್‌ನಲ್ಲಿ ಪ್ರಸ್ತಾಪಿಸಿರುವ ತೆರಿಗೆ ಹಂತಗಳ ಪ್ರಕಾರ 2.5 ಲಕ್ಷ ರೂ.ವರೆಗಿನ ವೈಯುಕ್ತಿಕ ಆದಾಯಕ್ಕೆ ಯಾವುದೇ ತೆರಿಗೆ ಇಲ್ಲ. ಜೊತೆಗೆ 2.5ರಿಂದ 5 ಲಕ್ಷ ರೂ.ವರೆಗಿನ ಆದಾಯಕ್ಕೆ ಶೇ.5ರಷ್ಟು ತೆರಿಗೆ ಇದ್ದರೂ, 12,500 ರೂ. ರಿಯಾಯಿತಿ ಸಿಗುವುದರಿಂದ ತೆರಿಗೆ ಇಲ್ಲ ಎಂದೇ ಹೇಳಬಹುದು. 5 ರಿಂದ 10 ಲಕ್ಷ ಆದಾಯಕ್ಕೆ ಚಾಲ್ತಿ ತೆರಿಗೆ ಹಂತದಲ್ಲಿ ಶೇ.20ರಷ್ಟು ತೆರಿಗೆ ಇದ್ದರೆ, ಈಗ ಪ್ರಸ್ತಾವಿತ ತೆರಿಗೆ ಹಂತದಲ್ಲಿ ಶೇ.10ರಷ್ಟಿದೆ. 15 ಲಕ್ಷ ರೂ. ಆದಾಯಕ್ಕೆ 1.95 ಲಕ್ಷ ರೂ. ಉಳಿತಾಯ ಸಿಗುತ್ತಿದ್ದರೆ, ಈಗ 2.73 ಲಕ್ಷ ರಿಯಾಯಿತಿ ಸಿಗುತ್ತಿದ್ದು, ಹೊಸ ಬಜೆಟ್‌ನ ತೆರಿಗೆ ಪ್ರಸ್ತಾವನೆಯಂತೆ 78 ಸಾವಿರ ಉಳಿತಾಯ ಮಾಡಬಹುದು.

ಕುಸಿಯುತ್ತಿರುವ ಆರ್ಥಿಕ ವಲಯಕ್ಕೆ ಪುನಶ್ಚೇತನ ನೀಡಲು ಹಲವಾರು ಕ್ರಮಗಳನ್ನು ಘೋಷಿಸಿದ್ದಾರೆ. ಕೇಂದ್ರ ಸರ್ಕಾರದ ಸಾಲ ಶೇ.52.2ರಿಂದ ಶೇ. 48.7ರಷ್ಟು ಕಡಿಮೆಯಾಗಿದೆ. ಈ ವರ್ಷದ ಬಜೆಟ್‌ನ್ನು “ಭರವಸೆಯ ಭಾರತ, ಆರ್ಥಿಕ ಅಭಿವೃದ್ಧಿ ಮತ್ತು ಕಾಳಜಿಯ ಸಮಾಜ’ ಈ 3 ಅಂಶಗಳ ಮೇಲೆ ನಿಂತಿದೆ.

ತೆರಿಗೆ ವಿವಾದಗಳಿಗೆ ಸಂಬಂಧಿಸಿದಂತೆ ಈ ವರ್ಷ ಅಂದರೆ 2020ರ ಮಾರ್ಚ್‌ ಒಳಗೆ ಈ ತೆರಿಗೆ ವಿವಾದಗಳಿಗೆ ಸಂಬಂಧಿಸಿದಂತೆ ಯಾವುದೇ ದಂಡವಿಲ್ಲದೆ ತೆರಿಗೆ ಪಾವತಿಸಲು ಅವಕಾಶ ಮಾಡಿಕೊಡಲಾಗಿದೆ. 2020-21ನೇ ಸಾಲಿನಲ್ಲಿ 22.66 ಲಕ್ಷ ಕೋಟಿ ರೂ. ಆದಾಯ ಸಂಗ್ರಹ ಗುರಿ ಹೊಂದಲಾಗಿದೆ ಎಂದು ವಿತ್ತ ಸಚಿವರು ಹೇಳಿದ್ದಾರೆ. ಇದೇ ಸಾಲಿನಲ್ಲಿ ಈ ವರ್ಷದ ಅಂತ್ಯದ ವೇಳೆ ಜಿಡಿಪಿ ಬೆಳವಣಿಗೆ ದರ ಶೇ.10ರಷ್ಟು ಏರಿಕೆಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಾಂತ್ರಿಕ ಸೇವೆಗಳ ಮೇಲಿನ ಪಾವತಿಯ ಟಿಡಿಎಸ್‌ ದರವನ್ನು ಶೇ.10 ಇದ್ದದ್ದು ಶೇ.2ಕ್ಕೆ ಇಳಿಸಲಾಗಿದೆ.
“ಲಾಭಾಂಶ ವಿತರಣಾ ತೆರಿಗೆ’ (ಡಿಡಿಟಿ) ತೆಗೆದು ಹಾಕಿರುವುದು ಭಾರತವನ್ನು ಹೂಡಿಕೆದಾರರ ನೆಚ್ಚಿನ ತಾಣವನ್ನಾಗಿ ಮಾಡಲಾಗಿದೆ. ತೆರಿಗೆ ಲೆಕ್ಕಪರಿಶೋಧನೆ ವಹಿವಾಟು ಮಿತಿಯನ್ನು 1 ಕೋಟಿ ರೂ.ಗಳಿಂದ 5 ಕೋಟಿ ರೂ.ಗಳಿಗೆ ಹೆಚ್ಚಿಸಿರುವುದು ಒಳ್ಳೆಯ ಹೆಜ್ಜೆಯಾಗಿದೆ. “ಸಂಪತ್ತು ಸೃಜನೆ ಮತ್ತು ಶೂನ್ಯ ತೆರಿಗೆ ಭಯೋತ್ಪಾದನೆ’ ಸರ್ಕಾರದ ಉದ್ದೇಶವಾಗಿದೆ.

ಕಳೆದ ವರ್ಷದಲ್ಲಿ ಇದ್ದ ತೆರಿಗೆಯ “ಇ-ಮೌಲ್ಯಮಾಪನ’ ವ್ಯವಸ್ಥೆಯನ್ನು ಈಗ “ಇ-ಮೇಲ್ಮನವಿ’ ಪದ್ದತಿಗೆ ವಿಸ್ತರಿಸಲಾಗಿದೆ. ನೇರ ತೆರಿಗೆ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು “ವಿವಾದ್‌ ಸೆ ವಿಶ್ವಾಸ್‌’ ಯೋಜನೆಯ ಪ್ರಸ್ತಾವನೆ ಸ್ವಾಗತಾರ್ಹ. 2020 ಮಾ.31ರೊಳಗೆ ತೆರಿಗೆ ಪಾವತಿಸುವವರಿಗೆ ಯಾವುದೇ ದಂಡ ಇರುವುದಿಲ್ಲ. ಪ್ರಸ್ತುತ ಆದಾಯ ತೆರಿಗೆ ಕಾಯ್ದೆಯಡಿ ನೀಡಲಾಗುತ್ತಿದ್ದ ಸುಮಾರು 100 ವಿನಾಯಿತಿಗಳ ಪೈಕಿ àಗ 70ಕ್ಕೂ ಹೆಚ್ಚು ರಿಯಾಯತಿಗಳನ್ನು ತೆಗೆದು ಹಾಕುವ ಮೂಲಕ ವ್ಯವಸ್ಥೆಯನ್ನು ಸರಳೀಕರಿಸಲಾಗಿದೆ.

ಹೂಡಿಕೆ, ಉಳಿತಾಯಗಳ ಮೇಲಿನ ತೆರಿಗೆ ವಿನಾಯಿತಿ ಚಿಂತನೆ ಪ್ರಸ್ತುತ ಭಾರತದ ಪರಿಸ್ಥಿತಿಗೆ ಸಮಂಜಸವಲ್ಲ. ಆರೋಗ್ಯ, ಶಿಕ್ಷಣ ಮತ್ತು ಕೃಷಿ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಧನಾತ್ಮಕ, ಪ್ರಗತಿದಾಯಕ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಟಾಪ್ ನ್ಯೂಸ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Budget 2024-25; ಕೇಂದ್ರಕ್ಕೆ ಏಟು, ರಾಜ್ಯಕ್ಕೆ ಸ್ವೀಟು!

Budget 2024-25; ಕೇಂದ್ರಕ್ಕೆ ಏಟು, ರಾಜ್ಯಕ್ಕೆ ಸ್ವೀಟು!

Mangaluru ಸೇರಿ 11 ಮಹಾನಗರಗಳಲ್ಲಿ ತಡರಾತ್ರಿ 1 ಗಂಟೆಯವರೆಗೆ ವ್ಯಾಪಾರ

Mangaluru ಸೇರಿ 11 ಮಹಾನಗರಗಳಲ್ಲಿ ತಡರಾತ್ರಿ 1 ಗಂಟೆಯವರೆಗೆ ವ್ಯಾಪಾರ

Budget  2024-25; ಬೆಂಗಳೂರು, ಮೈಸೂರಿಗೆ ಸಿಂಹಪಾಲು; ಉತ್ತರಕ್ಕೆ ಸಮಪಾಲು

Budget 2024-25; ಬೆಂಗಳೂರು, ಮೈಸೂರಿಗೆ ಸಿಂಹಪಾಲು; ಉತ್ತರಕ್ಕೆ ಸಮಪಾಲು

MONEY GONI

Expert’s Opinion: ಗ್ಯಾರಂಟಿ ಭಾರ ಇಲ್ಲದಿದ್ದರೆ ಇನ್ನೂ ಉತ್ತಮ ಆಗಿರುತ್ತಿತ್ತು

Start-up Sector; ನವ‌ ಕರ್ನಾಟಕ ನಿರ್ಮಾಣಕ್ಕೆ ಸಿದ್ದು ಸ್ಟಾರ್ಟ್‌ ಅಪ್‌

Start-up Sector; ನವ‌ ಕರ್ನಾಟಕ ನಿರ್ಮಾಣಕ್ಕೆ ಸಿದ್ದು ಸ್ಟಾರ್ಟ್‌ ಅಪ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

6-fusion

UV Fusion: ಇಂಡಿ ಪಂಪ್‌ ಮಟ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.