ಫ‌ಲ ನೀಡಿದ ಬಿಜೆಪಿ ಕಾರ್ಯತಂತ್ರ


Team Udayavani, Jul 24, 2019, 3:07 AM IST

pala-ni

ಬೆಂಗಳೂರು: ಕಾನೂನು ತಜ್ಞರೊಂದಿಗೆ ಸಮಾಲೋಚನೆ, ತಾಳ್ಮೆಯ ನಡೆ, ವಿಧಾನಸಭೆಯ ಒಳಗೆ, ಹೊರಗೆ ಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯ ಹಾಗೂ ವಿಶ್ವಾಸ ಮತ ಯಾಚನೆ ನಿರ್ಣಯವನ್ನು ಮತಕ್ಕೆ ಹಾಕುವಂತೆ ವಿಧಾನಸಭಾಧ್ಯಕ್ಷರ ಮೇಲೆ ಒತ್ತಡ ಹೇರಿದ ಬಿಜೆಪಿಯ ಕಾರ್ಯತಂತ್ರ ನಿರೀಕ್ಷಿತ ಫ‌ಲವನ್ನೇ ನೀಡಿದಂತಿದೆ.

ಜು.12ರಿಂದ 26ರವರೆಗೆ ವಿಧಾನಮಂಡಲ ಅಧಿವೇಶನ ಪ್ರಕಟವಾಗುತ್ತಿದ್ದಂತೆ ಬಿಜೆಪಿಯು ಯೋಜಿತ ರೀತಿಯಲ್ಲೇ ಸಜ್ಜಾಗಿತ್ತು. ಆಡಳಿತ ಪಕ್ಷಗಳ 15 ಶಾಸಕರ ರಾಜೀನಾಮೆ ವಿಚಾರವನ್ನೇ ಮುಖ್ಯವಾಗಿಟ್ಟುಕೊಂಡು ಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯಿಸಿದ ಬಿಜೆಪಿ ಶಾಸಕರು, ಇಡೀ ಅಧಿವೇಶನ ಇದೇ ವಿಚಾರದ ಬಗ್ಗೆ ಚರ್ಚೆಗೆ ಸೀಮಿತವಾಗುವಂತೆ ನೋಡಿಕೊಳ್ಳುವಲ್ಲಿ ಯಶಸ್ವಿಯಾದರು.

ಕಾಂಗ್ರೆಸ್‌, ಜೆಡಿಎಸ್‌ ಸಚಿವರು, ಶಾಸಕರು ಬಿಜೆಪಿ ನಾಯಕರ ವಿರುದ್ಧ ಹಾಗೂ ಆಪರೇಷನ್‌ ಕಮಲದ ಆರೋಪ ಹೊರಿಸಿ ಪ್ರಚೋದನೆ ನೀಡುವ ಪ್ರಯತ್ನದ ಬಗ್ಗೆ ಮೊದಲೇ ಅಂದಾಜಿಸಿದ್ದ ಬಿಜೆಪಿ ನಾಯಕರು, ಸದನದಲ್ಲಿ ಹೇಗೆ ವರ್ತಿಸಬೇಕು ಎಂದು ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರಂತರವಾಗಿ ಸೂಚನೆ ನೀಡುತ್ತಿದ್ದರು.

ಬಿಜೆಪಿ ವತಿಯಿಂದ ಜೆ.ಸಿ.ಮಾಧುಸ್ವಾಮಿ, ಬಸವರಾಜ ಬೊಮ್ಮಾಯಿ, ಜಗದೀಶ ಶೆಟ್ಟರ್‌, ಎಸ್‌.ಸುರೇಶ್‌ ಕುಮಾರ್‌ ಅವರಷ್ಟೇ ಪ್ರತಿಕ್ರಿಯೆ, ಪ್ರತ್ಯುತ್ತರ ನೀಡಬೇಕು ಎಂದು ಸೂಚಿಸಲಾಗಿತ್ತು. ಯಾವುದೇ ವಿಚಾರ ಪ್ರಸ್ತಾಪವಾದರೂ ವಿಶ್ವಾಸ ಮತ ಯಾಚನೆ ನಿರ್ಣಯ ಪ್ರಸ್ತಾಪವನ್ನು ಮತಕ್ಕೆ ಹಾಕುವಂತೆ ಒತ್ತಡ ಹೇರುವ ಕಾರ್ಯತಂತ್ರ ರೂಪಿಸಿತು.

ಮುಖ್ಯಮಂತ್ರಿ ಆದಿಯಾಗಿ ಸಚಿವರು, ಶಾಸಕರು ಟೀಕೆ, ಟಿಪ್ಪಣಿ ಮಾಡಿದರೂ ಬಿಜೆಪಿ ಶಾಸಕರು ಗಾಢ ಮೌನಕ್ಕೆ ಶರಣಾಗಿದ್ದರು. ತುಟಿ ಬಿಚ್ಚಿದರೆ ಸದನದ ಕಲಾಪ ಕಾಲಹರಣವಾಗುತ್ತಿರುವ ಬಗ್ಗೆ ದೂರುವುದನ್ನು ಮುಂದುವರಿಸಿದ ಅವರು, ಸ್ಪೀಕರ್‌ ಅವರ ಭರವಸೆಗಳನ್ನೇ ನೆನಪಿಸುತ್ತಾ ಒತ್ತಡ ಹೇರುವ ತಂತ್ರವನ್ನು ಮುಂದುವರಿಸಿದರು.

ಪಕ್ಷದ 105 ಶಾಸಕರ ಪೈಕಿ ಯಾರೊಬ್ಬರು ಗೈರಾಗದಂತೆ ಎಚ್ಚರ ವಹಿಸಿದ ಬಿಜೆಪಿ, ಅಧಿವೇಶನದುದ್ದಕ್ಕೂ ಎಲ್ಲ ಶಾಸಕರು ಕಡ್ಡಾಯವಾಗಿ ಹಾಜರಾಗುವಂತೆ ವಿಪ್‌ ಜಾರಿಗೊಳಿಸಿ ಅದನ್ನು ಅಚ್ಚುಕಟ್ಟಾಗಿ ಪಾಲಿಸಿತು. ಮುಖ್ಯಮಂತ್ರಿಗಳು ಜು.18ರಂದು ವಿಶ್ವಾಸಮತ ಯಾಚಿಸುವುದಾಗಿ ಹೇಳಿದರೂ ನಂತರವೂ ವಿಳಂಬವಾಗಿದ್ದರಿಂದ ಸೋಮವಾರ ಮಧ್ಯರಾತ್ರಿ 11.45ರವರೆಗೆ ಸದನ ಮುಂದುವರಿಯಿತು.

ಎಷ್ಟೇ ಹೊತ್ತಾದರೂ ಮುಗಿಸುವಂತೆ ಯಡಿಯೂರಪ್ಪ ಪಟ್ಟು ಹಿಡಿದರು. ಕೊನೆಗೆ ಸ್ಪೀಕರ್‌ ಮಂಗಳವಾರ ಸಂಜೆ 6 ಗಂಟೆ ಹೊತ್ತಿಗೆ ಮತಕ್ಕೆ ಹಾಕುವ ಭರವಸೆ ನೀಡಿದರು. ಅಲ್ಲಿಗೆ ಬಿಜೆಪಿಯ ಕಾರ್ಯತಂತ್ರ ಬಹುತೇಕ ಯಶಸ್ವಿಯಾದಂತಾಗಿತ್ತು. ಮಂಗಳವಾರದ ಕಲಾಪದಲ್ಲೂ ಬಿಜೆಪಿ ಶಾಸಕರು ಮೌನವಾಗಿಯೇ ಇದ್ದರು. ಮತದಾನ ಪ್ರಕ್ರಿಯೆ ನಡೆಯುವ ಹೊತ್ತಿಗೆ ಎಲ್ಲ ಶಾಸಕರು ಸದನದಲ್ಲಿರುವಂತೆ ನೋಡಿಕೊಳ್ಳುವಲ್ಲಿಯೂ ಎಚ್ಚರ ವಹಿಸಿತ್ತು.

ಬಿಜೆಪಿ ಕಚೇರಿ, ಮೊಗಸಾಲೆಯಲ್ಲಿ ಹತ್ತಾರು ಮಂದಿಯನ್ನಿರಿಸಿ ಯಾವ ಶಾಸಕರೂ ಹೊರಗುಳಿಯದಂತೆ ನೋಡಿಕೊಂಡಿತು. ಮುಖ್ಯಮಂತ್ರಿಗಳು ಮಂಡಿಸಿದ್ದ ವಿಶ್ವಾಸ ಮತ ನಿರ್ಣಯ ಬಿದ್ದು ಹೋಗುತ್ತಿದ್ದಂತೆ ಬಿಜೆಪಿ ನಾಯಕರು ಗೆಲುವಿನ ನಗೆ ಬೀರಿದರು.

ನಾಯಕರಲ್ಲಿ ಸಂತಸ: ಸ್ಪೀಕರ್‌ ರಮೇಶ್‌ ಕುಮಾರ್‌ ಅವರು ಮುಖ್ಯಮಂತ್ರಿಗಳ ವಿಶ್ವಾಸ ಮತ ನಿರ್ಣಯ ಬಿದ್ದು ಹೋಗಿದೆ ಎಂದು ಪ್ರಕಟಿಸುತ್ತಿದ್ದಂತೆ ಬಿಜೆಪಿ ನಾಯಕರಲ್ಲಿ ಸಂಭ್ರಮ ಮನೆ ಮಾಡಿತು. ಬಳಿಕ, ಸ್ಪೀಕರ್‌ ಸದನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು. ಬಳಿಕ ಬಿಜೆಪಿ ಶಾಸಕರೆಲ್ಲಾ ಯಡಿಯೂರಪ್ಪ ಅವರನ್ನು ಸುತ್ತುವರಿದು ಅಭಿನಂದನೆ ಸಲ್ಲಿಸಿದರು. ಬಳಿಕ ಯಡಿಯೂರಪ್ಪ ಅವರು ಗೆಲುವಿನ ಸಂಕೇತ ತೋರಿ ಕೈಮುಗಿದರು. ಸದನದಿಂದ ಹೊರಗೆ ಬರುತ್ತಿದ್ದಂತೆ ಯಡಿಯೂರಪ್ಪ ಅವರು ಸಹಾಯಕರಿಗೆ ಸಿಹಿ ತರಿಸಿ ಹಂಚುವಂತೆ ಸೂಚಿಸಿದರು.

* ಎಂ. ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.