ಪರೀಕ್ಷಾ ಮಂಡಳಿ ವಿಲೀನಕ್ಕೆ ಒಪ್ಪಿಗೆ
Team Udayavani, Sep 23, 2022, 6:20 AM IST
ಬೆಂಗಳೂರು: ಹಲವು ವರ್ಷದಿಂದ ಚರ್ಚೆಯಲ್ಲಿದ್ದ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ (ಪಿಯು ಬೋರ್ಡ್) ವಿಲೀನಕ್ಕೆ ಸಂಬಂಧಿಸಿ 2022ನೇ ಸಾಲಿನ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ (ತಿದ್ದುಪಡಿ) ಮಸೂದೆಗೆ ಅನುಮೋದನೆ ದೊರೆಯಿತು.
ಮಸೂದೆ ಮಂಡಿಸಿ ವಿಷಯ ಪ್ರಸ್ತಾವಿಸಿದ ಸಚಿವ ಬಿ.ಸಿ.ನಾಗೇಶ್, ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಕೂಲವಾಗುವಂತೆ ಮತ್ತು ಎರಡು ಮಂಡಳಿಗಳಲ್ಲಿ ಆಡಳಿತಾತ್ಮಕ ಹಾಗೂ ಶೈಕ್ಷಣಿಕ ಕಾರ್ಯಭಾರ ಇಳಿಸುವ ಉದ್ದೇಶದಿಂದ ಮಂಡಳಿಗಳನ್ನು ವಿಲೀನಗೊಳಿಸುತ್ತಿದ್ದೇವೆ. ಎರಡು ಮಂಡಳಿಗಳನ್ನು ಒಟ್ಟುಗೂಡಿಸಿ ಐಎಎಸ್ ಅಧಿಕಾರಿಯೊಬ್ಬರನ್ನು ನಿರ್ದೇಶಕರನ್ನಾಗಿ ಮಾಡಲಿದ್ದೇವೆ. ಪರೀಕ್ಷಾ ವಿಧಾನದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ. ಎನ್ಇಪಿ ಸೂಚಿಸಿರುವಂತೆ ಪೂರ್ವ ಪ್ರಾಥಮಿಕ ತರಗತಿಯಿಂದ 2ನೇ ತರಗತಿ ವರೆಗೂ ಒಂದು ಹಂತ, 3ರಿಂದ 5ನೇ ತರಗತಿ ವರೆಗೂ ಇನ್ನೊಂದು ಹಂತ, 6ರಿಂದ 8ನೇ ತರಗತಿ ವರೆಗೂ ಮತ್ತೂಂದು ಹಂತ ಹಾಗೂ 9ರಿಂದ 12ನೇ ತರಗತಿವರೆಗೂ ಪ್ರತ್ಯೇಕ ವಿಭಾಗ ಇರಲಿದೆ. ಆದರೆ, ಎಸೆಸೆಲ್ಸಿ, ಪಿಯುಸಿ ಪರೀಕ್ಷೆಗಳು ಎಂದಿನಂತೆ ಇರುತ್ತವೆ ಎಂದರು.
ಅನುಮೋದನೆ:
ಸಚಿವ ಆರ್. ಅಶೋಕ್ ಮಂಡಿಸಿದ್ದ 2022ನೇ ಸಾಲಿನ ಕರ್ನಾಟಕ ಭೂ ಕಬಳಿಕೆ ನಿಷೇಧ(ತಿದ್ದುಪಡಿ) ಮಸೂದೆ ಹಾಗೂ 2022ನೇ ಸಾಲಿನ ಕರ್ನಾಟಕ ಸ್ಟಾಂಪ್ (ಮೂರನೇ ತಿದ್ದುಪಡಿ) ಮಸೂದೆಗೂ ಅನುಮೋದನೆ ದೊರೆಯಿತು. (ಸ್ಟಾಂಪ್ ತಿದ್ದುಪಡಿ ಮಸೂದೆಯು ಸರಕಾರದಿಂದ ಅನುದಾನ ಪಡೆದು ಟ್ರಸ್ಟ್ಗಳನ್ನು ನಡೆಸುತ್ತಿರುವವರು ಆದಾಯ ತೆರಿಗೆ ವ್ಯಾಪ್ತಿಯ ಒಳಗೆ ತರುವುದಾಗಿದೆ)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ