ಚಿಕ್ಕಮಗಳೂರು : ಕೆರೆಗೆ ಈಜಲು ಹೋದ ಬಾಲಕ ನೀರುಪಾಲು
Team Udayavani, Oct 14, 2019, 4:24 PM IST
ಚಿಕ್ಕಮಗಳೂರು : ಕೆರೆಗೆ ಈಜಲು ತೆರಳಿದ ಬಾಲಕ ನೀರುಪಾಲಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಗೌಜ ಗ್ರಾಮದ ಸುಂಕದಕಟ್ಟೆಯಲ್ಲಿ ಸೋಮವಾರ ಸಂಭವಿಸಿದೆ.
ಸಾದರಹಳ್ಳಿ ಗ್ರಾಮದ ವರುಣ್ (15) ಮೃತ ಬಾಲಕ, ಈತ ತನ್ನ ಸ್ನೇಹಿತರೊಂದಿಗೆ ಈಜಲು ಹೋಗಿದ್ದ ಸಂದರ್ಭ ನೀರಿನಲ್ಲಿ ಮುಳುಗಿದ್ದಾನೆ,
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌದಾಯಿಸಿದ್ದು, ಮೃತದೇಹಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.