Politics: ಮುರಿದುಬಿದ್ದ AIADMK-BJP ಮೈತ್ರಿ
Team Udayavani, Sep 25, 2023, 8:49 PM IST
ಚೆನ್ನೈ: ತಮಿಳುನಾಡಿನಲ್ಲಿ ಬಿಜೆಪಿ ಜತೆಗಿನ ಬಾಂಧವ್ಯವನ್ನು ಕಡಿದುಕೊಳ್ಳುವುದಾಗಿ ಎಐಎಡಿಎಂಕೆ ಸೋಮವಾರ ಅಧಿಕೃತವಾಗಿ ಪ್ರಕಟಿಸಿದೆ. ಮುಂದಿನ ಚುನಾವಣೆಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಹೇಳಿಕೊಂಡಿದೆ. ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆ ಮುನ್ನವೇ ಈ ನಿರ್ಧಾರ ಹೊರಬಿದ್ದಿದೆ.
ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಎಐಎಡಿಎಂಕೆಯ ನಾಯಕ ಕೆ. ಅಣ್ಣಾದುರೈ ವಿರುದ್ಧ ನೀಡಿದ್ದ ಹೇಳಿಕೆಯಿಂದ ಉಭಯ ಪಕ್ಷಗಳ ನಡುವಿನ ಮೈತ್ರಿ ಮುಕ್ತಾಯವಾಗಿದೆ. ಚೆನ್ನೈಯಲ್ಲಿ ನಡೆದ ಪಕ್ಷದ ಸಂಸದರು ಮತ್ತು ಶಾಸಕರ ಸಭೆಯಲ್ಲಿ ಮೈತ್ರಿ ಮುಂದುವರಿಸುವ ಬಗ್ಗೆ ಸಮಗ್ರವಾಗಿ ಚರ್ಚೆ ನಡೆದಿದೆ. ರಾಜ್ಯ ಬಿಜೆಪಿ ಘಟಕದ ನಾಯಕರು ಎಐಎಡಿಎಂಕೆಯ ಮಾಜಿ ನಾಯಕರು, ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ವಿರುದ್ಧ ಒಂದು ವರ್ಷದಿಂದ ನಿರಂತರವಾಗಿ ವಿನಾಕಾರಣ ಟೀಕೆ ಮಾಡುತ್ತಿದ್ದಾರೆ. ಹೀಗಾಗಿ ಸಭೆಯಲ್ಲಿ ಬಿಜೆಪಿ ಜತೆಗಿನ ಮೈತ್ರಿಯನ್ನು ಮುಕ್ತಾಯ ಮಾಡಬೇಕು ಎಂದು ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು ಎಂದು ಸಭೆಯ ಬಳಿಕ ಮಾತನಾಡಿದ ಎಐಎಡಿಎಂಕೆಯ ಉಪಮಹಾಪ್ರಧಾನ ಕಾರ್ಯದರ್ಶಿ ಕೆ.ಪಿ. ಮುನುಸ್ವಾಮಿ ತಿಳಿಸಿದ್ದಾರೆ.
ಮೈತ್ರಿ ಕಡಿದುಕೊಳ್ಳುವ ನಿರ್ಧಾರದ ಬಗ್ಗೆ ಬಿಜೆಪಿ ನಾಯಕ ಕೆ. ಅಣ್ಣಾಮಲೈ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ತಮಿಳುನಾಡಿನಾದ್ಯಂತ ಯಾತ್ರೆ ಕೈಗೊಂಡಿರುವ ಅವರು ಈ ಸಂದರ್ಭದಲ್ಲಿ ಮಾತನಾಡಲಾರೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ