ರಾಬರ್ಟ್‌ ಮೇಲೆ ನಿರೀಕ್ಷೆಯ ಭಾರ

ಓಟಿಟಿಯಲ್ಲಿ ರಿಲೀಸ್‌ ಇಲ್ಲ...

Team Udayavani, May 20, 2020, 4:25 AM IST

dum dar

ಸದ್ಯ ಕನ್ನಡ ಚಿತ್ರರಂಗದಲ್ಲಿ ಓಟಿಟಿ ಸದ್ದು ಮಾಡುತ್ತಿದೆ. ನಿಧಾನವಾಗಿ ಪರ ವಿರೋಧಗಳು ಆರಂಭವಾಗಿವೆ. ಓಟಿಟಿ ವಿಷಯದಲ್ಲಿ ರಾಬರ್ಟ್‌ ಹೆಸರು ಕೂಡಾ ಕೇಳಿಬಂದಿತ್ತು. ದರ್ಶನ್‌ ನಾಯಕರಾಗಿರುವ ರಾಬರ್ಟ್‌ ಚಿತ್ರಕ್ಕೆ ಓಟಿಟಿ ಪ್ಲಾಟ್‌ ಫಾರ್ಮ್ವೊಂದು ದೊಡ್ಡಮೊತ್ತದ ಬೆಲೆಯನ್ನು ಆಫ‌ರ್‌ ಮಾಡಿತ್ತೆಂದು. ಮೂಲಗಳ ಪ್ರಕಾರ, 70 ಕೋಟಿ ರೂಪಾಯಿಯ ಆಫ‌ರ್‌ ನೀಡಿತ್ತು ಎನ್ನಲಾಗಿದೆ. ಆದರೆ,  ಚಿತ್ರದ ನಿರ್ಮಾಪಕರು ಓಟಿಟಿ ಆಫ‌ರ್‌ ಅನ್ನು ತಿರಸ್ಕರಿಸಿ,ಸಿನಿಮಾವನ್ನು ಚಿತ್ರಮಂದಿರದಲ್ಲೇ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ.

ದರ್ಶನ್‌ ಅಭಿಮಾನಿಗಳಿಗೆ ಖುಷಿ ನೀಡಿದೆ. ಏಕೆಂದರೆ ದರ್ಶನ್‌ ಸಿನಿಮಾ ಬಿಡುಗಡೆ ಎಂದರೆ ಅದು ಹಬ್ಬದಂತಿರುತ್ತದೆ. ಅಭಿಮಾನಿಗಳು ಅದನ್ನು  ಸಂಭ್ರಮಿಸುತ್ತಾರೆ. ಒಂದು ವೇಳೆ ಓಟಿಟಿಯಲ್ಲಿ ಚಿತ್ರ ಬಿಡುಗಡೆಯಾದರೆ ಆ ಸಂಭ್ರಮ ಮಿಸ್‌ ಆಗುತ್ತದೆ. ಇನ್ನು ಚಿತ್ರಮಂದಿರಗಳು ಕೂಡಾ ಖುಷಿಯಾಗಿವೆಯಂತೆ. ಸ್ಟಾರ್‌ಗಳ ಚಿತ್ರ ರಿಲೀಸ್‌ ಆದಾಗ ಚಿತ್ರಮಂದಿರಕ್ಕೆ ಜನ ದೊಡ್ಡ  ಮಟ್ಟದಲ್ಲಿ ಬರುತ್ತಾರೆ ಮತ್ತು ಕಲೆಕ್ಷನ್‌ ಕೂಡಾ ಜೋರಾಗಿರುತ್ತದೆ. ಈ ಎಲ್ಲಾ ಕಾರಣಗಳಿಂದಾಗಿ ರಾಬರ್ಟ್‌ ನಿರ್ಮಾಪಕರ ನಿರ್ಧಾರವನ್ನು ಅನೇಕರು ಮೆಚ್ಚಿಕೊಂಡಿದ್ದಾರೆ.

ಇನ್ನು, ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ರಾಬರ್ಟ್‌ ಚಿತ್ರ  ಇಷ್ಟೊತ್ತಿಗೆ ಬಿಡುಗಡೆಯಾಗಬೇಕಿತ್ತು. ಆದರೆ ಕೊರೊನಾದಿಂದಾಗಿ ಚಿತ್ರ ಬಿಡುಗಡೆ ಮುಂದಕ್ಕೆ ಹೋಗಿದೆ. ಹಾಗಾದರೆ ಸಿನಿಮಾ ಬಿಡುಗಡೆ ಯಾವಾಗ ಎಂಬ ಪ್ರಶ್ನೆ ಸಹಜವಾಗಿಯೇ ಬರುತ್ತದೆ. ಅನೇಕರು ಚಿತ್ರ ಆಗಸ್ಟ್‌ 15ರಂದು  ತೆರೆಕಾಣುತ್ತದೆ ಎನ್ನುತ್ತಿದ್ದಾರೆ. ಈ ಬಗ್ಗೆ ನಿರ್ದೇಶಕ ತರುಣ್‌ ಸುಧೀರ್‌ ಏನು ಹೇಳುತ್ತಾರೆ ಎಂದು ನೀವು ಕೇಳಬಹುದು. ಆದರೆ ತರುಣ್‌ ಮಾತ್ರ ಈ ಬಗ್ಗೆ ಈಗಲೇ ಹೇಳಲು ತಯಾರಿಲ್ಲ.

ಸದ್ಯಕ್ಕೆ ಲಾಕ್‌ಡೌನ್‌ ಯಾವಾಗ ಕ್ಲಿಯರ್‌ ಆಗುತ್ತದೆ  ಎಂಬುದು ಸ್ಪಷ್ಟವಿಲ್ಲ. ಹಾಗಾಗಿ ಈಗಲೇ ನಾವು ಚಿತ್ರ ಬಿಡುಗಡೆಯ ದಿನಾಂಕ ಹೇಳ್ಳೋದು ಸರಿಯಲ್ಲ. ಆದರೆ, ನಾವಂತೂ ರೆಡಿ. ಸಿನಿಮಾ ಬಿಡುಗಡೆಗೆ ಅನುಮತಿ ಸಿಕ್ಕ ಮೂರು ವಾರಗಳ ನಂತರ ನಾವು ಬರುತ್ತೇವೆ. ಆ ಮೂರು ವಾರ  ಪಬ್ಲಿಸಿಟಿ ಮಾಡುತ್ತೇವೆ ಎನ್ನುವುದು ತರುಣ್‌ ಮಾತು. ರಾಬರ್ಟ್‌ ಚಿತ್ರದ ಮೇಲೆ ದೊಡ್ಡ ಮಟ್ಟದಲ್ಲಿ ನಿರೀಕ್ಷೆ ಹುಟ್ಟಿದೆ. “ರಾಬರ್ಟ್‌’ ಮೇಲೆ ಅಭಿಮಾನಿಗಳು ಎಷ್ಟರ ಮಟ್ಟಿಗೆ ಪ್ರೀತಿ ತೋರಿಸುತ್ತಾರೋ ಅದಕ್ಕಿಂತ ಹೆಚ್ಚಿನ ನಿರೀಕ್ಷೆ ಇಡೀ ಚಿತ್ರರಂಗ ಇಟ್ಟಿದೆ.

ಈ ವರ್ಷದ ಬಿಗ್‌ ರಿಲೀಸ್‌ ಸಾಲಿನಲ್ಲಿ “ರಾಬರ್ಟ್‌’ ನಿಂತಿದೆ. ಸಾಮಾನ್ಯವಾಗಿ ದರ್ಶನ್‌ ಸಿನಿಮಾ ಬಿಡುಗಡೆಯಾಗುತ್ತದೆ ಎಂದರೆ ಅದು ಅವರ ಅಭಿಮಾನಿಗಳ ಪಾಲಿಗೆ ದೊಡ್ಡ ಹಬ್ಬವಾಗಿರುತ್ತದೆ.  ಆದರೆ, “ರಾಬರ್ಟ್‌’ ಚಿತ್ರ ಅತಿ ದೊಡ್ಡ ಹಬ್ಬವಾಗುವ ಲಕ್ಷಣಗಳನ್ನು  ತೋರುತ್ತಿದೆ. ಈಗಾಗಲೇ ಈ ಚಿತ್ರದ ಪ್ರೀರಿಲೀಸ್‌ ಬಿಝಿನೆಸ್‌ ವಿಚಾರಗಳು ಕೂಡಾ ದೊಡ್ಡ ಮೊತ್ತದಲ್ಲೇ ಕೇಳಿಬರುತ್ತಿದೆ. ಜೊತೆಗೆ ಸ್ಯಾಟ್‌ಲೆçಟ್‌,  ಡಿಜಿಟಲ್‌ ರೈಟ್ಸ್‌ ಗಳು ಕೂಡಾ ದಾಖಲೆ ಬೆಲೆಗೆ ಮಾರಾಟವಾಗಿವೆ ಎಂಬ ಸುದ್ದಿಯೂ  ಗಾಂಧಿನಗರದಲ್ಲಿ ಕೇಳಿಬರುತ್ತಿದ್ದು, ಸದ್ಯ “ರಾಬರ್ಟ್‌’ ಟಾಕ್‌ ಆಫ್ ದಿ ಟೌನ್‌ ಆಗಿರೋದಂತೂ ಸುಳ್ಳಲ್ಲ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.