ಮಾ. 10ರ ಬಳಿಕ ಸಂಪುಟ ವಿಸ್ತರಣೆ ವಿಚಾರಣೆ ಪ್ರಕ್ರಿಯೆ?
Team Udayavani, Jan 25, 2022, 7:00 AM IST
ಬೆಂಗಳೂರು: ದೇಶಾದ್ಯಂತ ಪಂಚರಾಜ್ಯಗಳ ಚುನಾವಣೆ ಬಿಸಿ ಏರಿರುವ ನಡುವೆ ರಾಜ್ಯದ ರಾಜಕೀಯ ಪಕ್ಷಗಳೂ ಈ ರಾಜ್ಯಗಳ ಚುನಾವಣ ಫಲಿತಾಂಶದ ಮೇಲೆ ಕಣ್ಣಿಟ್ಟಿವೆ. ಸಂಪುಟ ಪುನಾರಚನೆ ಮತ್ತೆ ಸದ್ದು ಮಾಡುತ್ತಿದ್ದರೂ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಹೊರಬೀಳುವ ಮಾ. 10ರ ಅನಂತರವೇ ಈ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ.
2023ರ ಮೇಯಲ್ಲಿ ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಪಂಚರಾಜ್ಯಗಳ ಫಲಿತಾಂಶ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ಗಳ ರಾಜಕೀಯ ಲೆಕ್ಕಾಚಾರಗಳನ್ನು ಬದಲು ಮಾಡಬಲ್ಲುದು. ಸಂಕ್ರಾಂತಿಯ ಅನಂತರ ಸಂಪುಟ ಪುನಾರಚನೆ ಆಗಿಯೇ ಆಗುತ್ತದೆ ಎಂದು ಆಕಾಂಕ್ಷಿಗಳು ಕಾದು ಕುಳಿತಿದ್ದಾರೆ. ಆದರೆ ಪಂಚರಾಜ್ಯಗಳ ಚುನಾವಣೆ ಮುಗಿಯುವವರೆಗೂ ಕಷ್ಟ. ಬಜೆಟ್ ಅಧಿವೇಶನವೂ ಇರುವುದರಿಂದ ಬದಲಾವಣೆ ಯುಗಾದಿಗೆ ಎಂಬಂತಾಗಿದೆ. ಆದರೆ ಪಂಚರಾಜ್ಯ ಫಲಿತಾಂಶದ ಬಳಿಕ ಏನು ಎಂಬ ಆತಂಕವೂ ಇರುವುದರಿಂದ ಒತ್ತಡ ಮುಂದುವರಿದಿದೆ.
ಇದನ್ನೂ ಓದಿ:ವರಿಷ್ಠರು ಒಪ್ಪಿದರೆ ಸಂಪುಟ ವಿಸ್ತರಣೆ: ಸಿಎಂ ಬೊಮ್ಮಾಯಿ ಸ್ಪಷ್ಟ ನುಡಿ
ಅಲ್ಲದೆ, ಕಾಂಗ್ರೆಸ್ನ ಮೇಕೆದಾಟು ಯಾತ್ರೆ, ಕೃಷ್ಣಾ, ಮಹದಾಯಿ ಯಾತ್ರೆ ಹಾಗೂ ರಾಜ್ಯ ಪ್ರವಾಸ ಕಾರ್ಯಕ್ರಮ ಗಳು ಪಂಚರಾಜ್ಯ ಚುನಾವಣಾ ಫಲಿತಾಂಶದ ಬಳಿಕವೇ ಮತ್ತೆ ಆರಂಭವಾಗುವ ಸಾಧ್ಯತೆ ಇದೆ. ಜೆಡಿಎಸ್ನ ಜಲಧಾರೆ ಯಾತ್ರೆಯೂ ಮಾ. 10ರ ಅನಂತರವೇ ಆರಂಭವಾಗಲಿದೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ