ಬಣ್ಣ ಹೊಸದಾಗಿದೆ; ಬಂಧ ಬಿಗಿಯಾಗಿದೆ!


Team Udayavani, May 30, 2020, 4:14 AM IST

manaranjana

ಸತತ ಲಾಕ್‌ ಡೌನ್‌ನಿಂದಾಗಿ ಬಣ್ಣ ಕಳೆದುಕೊಂಡಿದ್ದ ಕಿರುತೆರೆ ಈಗ ಮತ್ತೆ ಕಲರ‍್ಸ್‌ಫ‌ುಲ್‌ ಆಗಿ ಪ್ರೇಕ್ಷಕರ ಮುಂದೆ ಬರಲು ಅಣಿಯಾಗಿದೆ. ಈಗಾಗಲೇ ಧಾರಾವಾಹಿಗಳ ಚಿತ್ರೀಕರಣಗಳು ಆರಂಭವಾಗಿವೆ. ತಮ್ಮ ಪ್ರೇಕ್ಷಕರಿಗೆ ಹೊಸತನ್ನು  ಉಣಬಡಿಸಲು ವಾಹಿನಿಗಳು ಸಿದ್ಧವಾಗಿವೆ. ಕನ್ನಡದ ಜನಪ್ರಿಯ ಮನರಂಜನಾ ವಾಹಿನಿ ಕಲರ‍್ಸ್ ಕನ್ನಡ ಕೂಡಾ ಅಭಿಮಾನಿಗಳಿಗೆ ಹೊಸದನ್ನು ನೀಡಲು ಸಂಪೂರ್ಣ ಸಿದ್ಧವಾಗಿದೆ. ಜೂನ್‌ ಒಂದನೇ ತಾರೀಖೀನಿಂದ ಧಾರಾವಾಹಿಗಳು  ಮತ್ತೆ ಪ್ರಸಾರವಾಗಲಿವೆ. ಬದಲಾದ ಪರಿಸ್ಥಿತಿಯಲ್ಲಿ ಈಗಾಗಲೇ ಚಿತ್ರೀಕರಣವೂ ಶುರುವಾಗಿದೆ.

ಕ್ಯಾಮರಾ, ಟ್ರಾಲಿ, ಲೈಟುಗಳ ಜೊತೆಯಲ್ಲಿ ಮಾಸ್ಕಾ, ಸ್ಯಾನಿಟೈಸರ್‌, ಸೋಪುಗಳನ್ನು ಸಹ ಹರಡಿಕೊಂಡು ಸದ್ದಿಲ್ಲದೆ ಆಕ್ಷನ್‌ ಶುರುವಾಗಿದೆ. ಕಲರ‍್ಸ್ಸ್‌ ಕನ್ನಡ ವಾಹಿನಿಯಂತೂ ಪರಿಸ್ಥಿತಿಯನ್ನು ಸವಾಲಾಗಿ ತೆಗೆದುಕೊಂಡು ಹೊಸ ಬಣ್ಣದಲ್ಲಿ ಪ್ರೇಕ್ಷಕರೆದುರು ಬರಲು ಸಿದ್ಧವಾಗಿದೆ. ನಿರಂತರವಾಗಿ ಓಡುತ್ತಲೇ ಇರುವವರು, ಮಳೆ ಸುರಿದಾಗ ವಿಧಿಯಿಲ್ಲದೆ ಮರದಡಿ ನಿಲ್ಲುತ್ತೇವಲ್ಲ, ಹಾಗೆ ಈ ಲಾಕ್‌ಡೌನಿನ ವಿರಾಮವೂ ಎಲ್ಲರಿಗೂ ತುಸು ನಿಂತು ಯೋಚಿಸಿ ಹೊಸ ಹುರುಪಿನಲ್ಲಿ ಮುಂದೆ ಸಾಗುವ ಅವಕಾಶವೊಂದನ್ನು ನೀಡಿದೆ.

ಹಾಗಾಗಿ ಇದು ಬರೀ  ಮುಂದುವರಿಕೆಯಲ್ಲ, ಹೊಸ ಪಯಣ ಎನ್ನುತ್ತಾರೆ  ವಯಾಕಾಂ 18 ಸಂಸ್ಥೆಯ ಕನ್ನಡ ಕ್ಲಸ್ಟರಿನ ಮುಖ್ಯಸ್ಥ ಪರಮೇಶ್ವರ ಗುಂಡ್ಕಲ್‌. ಜೂನ್‌ ಒಂದರಿಂದ ನೀವು ನೋಡಲಿರುವ ಕಲರ‍್ಸ್ಸ್‌ ಕನ್ನಡ ಹೊಸ ಬಣ್ಣ ಹೊಸ ರೂಪದಲ್ಲಿ ಇರಲಿದೆ. ಬಣ್ಣ ಹೊಸದಾಗಿದೆ; ಬಂಧ ಬಿಗಿಯಾಗಿದೆ!  ಎನ್ನುವುದು ಕಲರ‍್ಸ್ಸ್‌ ಕನ್ನಡ ಚಾನೆಲ್ಲಿನ ಹೊಸ ಘೋಷವಾಕ್ಯ. ಈ ಹೊಸ ಆರಂಭದ ಸಂಭ್ರಮವನ್ನು ವೀಕ್ಷಕರಿಗೆ ತಿಳಿಸಲು ಚಾನೆಲ್‌ ಈಗಾಗಲೇ ಹಲವು ಚೆಂದದ ಜಾಹೀರಾತುಗಳನ್ನು ರೂಪಿಸಿದೆ. ನಟನಟಿಯರೆಲ್ಲಾ ಬಣ್ಣ ಬಣ್ಣದ ಮಾಸ್ಕಾಗಳನ್ನು ಧರಿಸಿ ನಗುಮುಖದಿಂದ ಓಡಾಡುತ್ತಿರುವ ಈ ಜಾಹೀರಾತುಗಳು ವೀಕ್ಷಕರ ಗಮನ ಸೆಳೆದಿವೆ.

ಈಗಾಗಲೇ ಕಲರ‍್ಸ್ ಕನ್ನಡ ವಾಹಿನಿಯ ಧಾರಾವಾಹಿಗಳು ಚಿತ್ರೀಕರಣ ಆರಂಭಿಸಿವೆ. ಕೊರೋನಾ ನಂತರದ ಶೂಟಿಂಗ್‌ ಒಬ್ಬೊಬ್ಬರಿಗೆ ಒಂದೊಂದು  ರೀತಿಯ ಹೊಸ ಅನುಭವ ನೀಡುತ್ತಿದೆ. ಕಷ್ಟ ಸುಖ ಅನ್ನೋಕಿಂತ ಇದೊಂದು ಚಾಲೆಂಜ್‌ ಎನ್ನುತ್ತಾರೆ ಮಿಥುನರಾಶಿ ಧಾರಾವಾಹಿಯ ನಿರ್ಮಾಪಕ ನರಹರಿ. ನಿರ್ದೇಶಕ ರಾಮ್‌ಜಿಯವರು ಕೂಡಾ ಎರಡೆಡು ಧಾರಾವಾಹಿಗಳನ್ನು ನಿರ್ದೇಶಿಸುತ್ತಿದ್ದಾರೆ. ರಾಮ್‌ ಜೀಯವರು ಗೀತಾ ಹಾಗೂ ಮಂಗಳಗೌರಿ ಮದುವೆ ಎರಡೂ ಧಾರಾವಾಹಿಗಳ ನಿರ್ದೇಶಕ ಹಾಗೂ ನಿರ್ಮಾಪಕ. ಕೊರೋನಾ ಜತೆ ಸಂಸಾರ ಮಾಡೋದು ತುಂಬಾ ಕಷ್ಟ,

ಎಲ್ಲಾ ಸೆಟ್ಟಲ್ಲೂ ನರ್ಸ್‌ಗಳನ್ನು  ಇರಿಸಿದ್ದೇವೆ. ಮಾಸ್ಕಾ ಉಸಿರುಗಟ್ಟಿಸುತ್ತೆ, ಗ್ಲೌಸು ಬೆವರು ಹರಿಸುತ್ತೆ, ಬೆವರಿನಿಂದಾಗಿ ಮೇಕಪ್ಪು ನಿಲ್ತಾ ಇಲ್ಲ. ಏನು ಮಾಡೋದು? ಅಂತಾರೆ ಅವರು. ನಟ ನಟಿಯರ ಅನುಭವಗಳು ಇನ್ನೊಂದು ಥರ. ಎರಡು ತಿಂಗಳಿಂದ ಮೀರಾಳನ್ನ  ತುಂಬಾ ಮಿಸ್‌ ಮಾಡ್ಕೊತಾ ಇದ್ದೆ, ಈಗ ಶೂಟಿಂಗ್‌ ಶುರುವಾಗಿರೋದರಿಂದ ಥ್ರಿಲ್‌ ಆಗಿದೀನಿ ಅಂತಾರೆ ನಮ್ಮನೆ ಯುವರಾಣಿಯ ಮೀರಾ ಪಾತ್ರಧಾರಿ ಅಂಕಿತಾ. ಸದ್ಯ ಕಿರುತೆರೆ ಪ್ರೇಕ್ಷಕರು ಕೂಡಾ ಕಲರ‍್ಸ್ ಕನ್ನಡ ವಾಹಿನಿಯ ಹೊಸ ಧಾರಾವಾಹಿ, ಹೊಸ ಟ್ವಿಸ್ಟ್‌ಗಳಿಗಾಗಿ ಎದುರು ನೋಡುತ್ತಿರೋದಂತೂ ಸತ್ಯ.

ಟಾಪ್ ನ್ಯೂಸ್

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.