ಪುಸ್ತಕದ ಕಾಡಿಗೆ ಬಂದಂತೆಯೇ ಭಾಸ: ಹಿರಿಯ ಸಾಹಿತಿ ದೇವನೂರು ಮಹದೇವ

ಅಂಕೇಗೌಡರ ಪುಸ್ತಕ ಮನೆಗೆ ಹಿರಿಯ ಸಾಹಿತಿ ದೇವನೂರು ಮಹದೇವ ದಂಪತಿ ಭೇಟಿ

Team Udayavani, Sep 23, 2021, 6:35 PM IST

ಪುಸ್ತಕದ ಕಾಡಿಗೆ ಬಂದಂತೆಯೇ ಭಾಸ: ಹಿರಿಯ ಸಾಹಿತಿ ದೇವನೂರು ಮಹದೇವ

ಪಾಂಡವಪುರ: ತಾಲೂಕಿನ ಹರಳಹಳ್ಳಿ ಗ್ರಾಮದಲ್ಲಿರುವ ಲಿಮ್ಕಾ ದಾಖಲೆಯ ಪುಸ್ತಕ ಪ್ರೇಮಿ ಅಂಕೇಗೌಡರ ಪುಸ್ತಕ ಮನೆಗೆ ಹಿರಿಯ ಸಾಹಿತಿ ದೇವನೂರು ಮಹದೇವ ಹಾಗೂ ಪತ್ನಿ, ಮೈಸೂರು ಯುವರಾಜ ಕಾಲೇಜು ನಿವೃತ್ತ ಪ್ರಾಂಶುಪಾಲೆ ಸುಮಿತ್ರಾಬಾಯಿ ಭೇಟಿ ನೀಡಿ ಪುಸ್ತಕದ ರಾಶಿಗಳನ್ನು ವೀಕ್ಷಣೆ ಮಾಡಿದರು.

ಪುಸ್ತಕ ಮನೆಯಲ್ಲಿನ 12 ಲಕ್ಷಕ್ಕೂ ಹೆಚ್ಚಿರುವ ರಾಶಿ ರಾಶಿ ಪುಸ್ತಕಗಳನ್ನು ವೀಕ್ಷಣೆ ಮಾಡಿ ಸಾಹಿತ್ಯ ದಂಪತಿಗಳಿಬ್ಬರು ಮೂಕ ವಿಸ್ಮಿತರಾದರು.

ಈ ವೇಳೆ ಸಾಹಿತಿ ದೇವನೂರು ಮಹಾದೇವ ಮಾತನಾಡಿ, ಅಂಕೇಗೌಡರ ಪುಸ್ತಕ ಮನೆಗೆ ಭೇಟಿ ನೀಡಿರುವುದು ನಮಗೆ ಪುಸ್ತಕದ ಕಾಡಿಗೆ ಬಂದಂತೆಯೇ ಭಾಸವಾಗುತ್ತಿದೆ. ಇಲ್ಲಿನ ರಾಶಿ ರಾಶಿ ಪುಸ್ತಕಗಳನ್ನು ಕೆಡದಂತೆ ಜೋಪಾನವಾಗಿ ಸಂರಕ್ಷಣೆ ಮಾಡುವ ಅಗತ್ಯತೆ ಇದೆ. ಪ್ರತಿಯೊಬ್ಬರೂ ಈ ಪುಸ್ತಕ ಮನೆ ಸಂರಕ್ಷಣೆಗೆ ಏನಾದರು ಮಾಡಬೇಕು ಎಂದರು.

ಪುಸ್ತಕಗಳ ವೀಕ್ಷಣೆ ಮುಗಿಸಿ ದೇವನೂರು ಮಹಾದೇವ ಅವರು ಮೈಸೂರಿಗೆ ತೆರಳಲು ಕಾರು ಹತ್ತುವ ವೇಳೆ, ಪುಸ್ತಕ ಪ್ರೇಮಿ ಅಂಕೇಗೌಡರು ಈ ಪುಸ್ತಕ ಮನೆಯ ಇಂದಿನ ಕಟ್ಟಡವನ್ನು ದೆವ್ವ ಇದೆ ಅಂತಾ ಯಾರೂ ಕೂಡ ಖರೀದಿ ಮಾಡಿರಲಿಲ್ಲ ಎಂದರು. ಅದಕ್ಕೆ ಕೂಡಲೇ ಪ್ರತಿಕ್ರಿಯಿಸಿದ ದೇವನೂರು ಮಹಾದೇವ ಅವರು, ಈ ಪುಸ್ತಕಗಳೇ ದೆವ್ವಗಳಿದ್ದಂತೆ, ಅವುಗಳನ್ನು ಹಿಡಿದುಕೊಂಡರೆ ಬಿಡೋದಿಲ್ಲ ಎಂದು ಹಾಸ್ಯಭರಿತವಾಗಿ ಹೇಳಿದರು.

ಇದನ್ನೂ ಓದಿ:400 ಕೋಟಿ ರೂ. ಬಜೆಟ್‍ನ ಚಿತ್ರಕ್ಕೆ ಪ್ರೇಮ್ ನಾಯಕ

ಇದೇ ವೇಳೆ ತಮ್ಮ ಕೃತಿ “ಕುಸುಮಬಾಲೆ’ಯ ಕನ್ನಡ ಮತ್ತು ಇಂಗ್ಲಿಷ್‌ ಆವೃತ್ತಿಯ ಎರಡು ಪುಸ್ತಕಗಳನ್ನು ಅಂಕೇಗೌಡರ ಪುಸ್ತಕ ಮನೆಗೆ ದೇವನೂರು ಮಹದೇವ ನೀಡಿದರು.

ಮೈಸೂರು ಯುವರಾಜ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ, ದೇವನೂರು ಮಹಾದೇವರ ಪತ್ನಿ ಪ್ರೊ.ಸುಮಿತ್ರಾಬಾಯಿ ಮಾತನಾಡಿ, ಇದೊಂದು ಚಿಕ್ಕ ವಿಶ್ವವಿದ್ಯಾಲಯದ ಗ್ರಂಥಾಲಯದ ರೀತಿ ಇದೆ. ಆದರೆ ಈ ಗ್ರಂಥಾಲಯವನ್ನು ಮುಂದಿನ ಪೀಳಿಗೆಯ ಅನುಕೂಲಕ್ಕಾಗಿ ವ್ಯವಸ್ಥಿತ ರೀತಿಯಲ್ಲಿ ಪುಸ್ತಕ ಸಂರಕ್ಷಣೆ ಮಾಡಬೇಕಿದೆ ಎಂದರು.

ಅಂಕೇಗೌಡರು ಏಕ ವ್ಯಕ್ತಿ ಇಷ್ಟೊಂದು ಪುಸ್ತಕಗಳ ಸಂಗ್ರಹಣೆ ಮಾಡಿರೋದು ದೊಡ್ಡ ಸಾಧನೆಯೇ ಸರಿ. ಜತೆಗೆ ಗಂಡ-ಹೆಂಡತಿಯರ ಸಹಯೋಗದ ಬೆಳವಣಿಗೆ ಇದಾಗಿದೆ. ಇಲ್ಲಿ ಅ ಆ ಇ ಈ ಕಲಿಯುವ 4 ವರ್ಷದ ಮಕ್ಕಳಿಂದ ಹಿಡಿದು 75ರಿಂದ 90ವರ್ಷದವರೆಗಿನವರು ಓದುವಂತಹ ಎಲ್ಲ ಅಪರೂಪದ ಪುಸ್ತಕಗಳು ಸಿಗುತ್ತವೆ. ನಮ್ಮ ಮನಸ್ಸಿನ ಭಾವನೆಗೆ ತಕ್ಕಂತಹ ಪುಸ್ತಕಗಳಿವೆ.

ಈ ವೇಳೆ ಜಾನಪದ ವಿದ್ವಾಂಸ ಕ್ಯಾತನಹಳ್ಳಿ ರಾಮಣ್ಣ, ರುಕ್ಮಿಣಿ ರಾಮಣ್ಣ, ಮಕ್ಕಳ ಸಾಹಿತ್ಯ ಪರಿಷತ್‌ ಅಧ್ಯಕ್ಷ ಧನ್ಯಕುಮಾರ್‌, ಡಾಮಡಹಳ್ಳಿ ಸ್ವಾಮಿಗೌಡ, ಜಯಲಕ್ಷ್ಮಿ ಅಂಕೇಗೌಡ ಇತರರಿದ್ದರು.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.