ಬಿಜೆಪಿ ಸರ್ಕಾರದ ಸ್ಥಿತಿ ನೆನಪಿಸಿದ ಪ್ರಸಕ್ತ ಬಂಡಾಯ


Team Udayavani, Jul 11, 2019, 3:09 AM IST

bjp-sarkara

ಹುಬ್ಬಳ್ಳಿ: 2009ರಿಂದ 2012ರವರೆಗೆ ಬಿಜೆಪಿ ಸರ್ಕಾರದಲ್ಲಿ ಕಂಡಿದ್ದ ಬಂಡಾಯಕ್ಕೂ, ಪ್ರಸ್ತುತ ಸಮ್ಮಿಶ್ರ ಸರ್ಕಾರದ ಶಾಸಕರ ಬಂಡಾಯಕ್ಕೂ ಹಲವು ಸಾಮ್ಯತೆಗಳು ಕಂಡು ಬರುತ್ತಿವೆ. 2009ರ ಬಿಜೆಪಿ ಬಂಡಾಯದ ವೇಳೆ ಕಂಡರಿಯದ ಪ್ರವಾಹ ಸ್ಥಿತಿ ಇತ್ತು. ಆದರೆ, ಈಗಿನ ಸಮ್ಮಿಶ್ರ ಸರ್ಕಾರದ ಶಾಸಕರು ಬರದ ಸ್ಥಿತಿಯಲ್ಲಿ ಬಂಡಾಯ ಸ್ಫೋಟಗೊಳಿಸಿರುವುದು ಪ್ರಕೃತಿಯ ಕಾಕತಾಳಿಯ ಎನ್ನುವಂತಿದೆ.

ಬಿಜೆಪಿ ಸರ್ಕಾರದಲ್ಲಿ ನಡೆದ ಬಂಡಾಯದ ವಿದ್ಯಮಾನ ಸೂಕ್ಷ್ಮವಾಗಿ ಗಮನಿಸಿದರೆ ಅಂದಿನ ಘಟನಾವಳಿಗಳೇ ಇಂದು ಮರುಕಳಿಸಿದವೇ ಎಂಬಂತೆ ಗೋಚರಿಸುತ್ತಿದೆ. ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರದ ಪತನ ನಂತರ 2006ರಲ್ಲಿ ಜೆಡಿಎಸ್‌-ಬಿಜೆಪಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ನಂತರದಲ್ಲಿ ಮಿತ್ರಪಕ್ಷಗಳಲ್ಲಿನ ಅಧಿಕಾರ ಹಂಚಿಕೆ ಜಗಳ ವಿಕೋಪಕ್ಕೆ ತಿರುಗಿ 2008ರಲ್ಲಿ ರಾಜ್ಯಕ್ಕೆ ಮಧ್ಯಂತರ ಚುನಾವಣೆ ಎದುರಾಗಿತ್ತು.

ಜೆಡಿಎಸ್‌ನಿಂದ ವಚನಭ್ರಷ್ಟವಾಗಿದೆ ಎಂಬ ಪ್ರಚಾರದ ಅನುಕಂಪದಡಿ ಮೊದಲ ಬಾರಿಗೆ ದಕ್ಷಿಣ ಭಾರತದಲ್ಲಿ ಬಿಜೆಪಿ ಸ್ವಂತ ಬಲದೊಂದಿಗೆ ಅಧಿಕಾರ ಹಿಡಿಯುವ ಸಾಹಸ ಮಾಡಿತ್ತು. ಬಹುಮತಕ್ಕೆ ಕೊರತೆ ತುಂಬಿಕೊಳ್ಳಲು ಐವರು ಪಕ್ಷೇತರ ಶಾಸಕರನ್ನು ತನ್ನತ್ತ ಸೆಳೆದಿತ್ತು. ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ 2008ರ ಮೇ 30ರಂದು ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆಯುತ್ತಿದ್ದಂತೆಯೇ ಪಕ್ಷದೊಳಗೆ ಭಿನ್ನಮತ ಸ್ಫೋಟಗೊಂಡಿತ್ತು. ಬಂಡಾಯ ಶಾಸಕರು ವಿಶೇಷ ವಿಮಾನ, ಐಷಾರಾಮಿ ಬಸ್‌ಗಳಲ್ಲಿ ರೆಸಾರ್ಟ್‌ನಿಂದ ರೆಸಾರ್ಟ್‌, ನಗರದಿಂದ ನಗರಕ್ಕೆ ವಾಸ್ತವ್ಯ ಬದಲಾಯಿಸಿದ್ದರು.

ರೆಡ್ಡಿ ಹರಸಾಹಸ ಮಾಡಿದ್ದರು: 2009ರಲ್ಲಿ ಬಳ್ಳಾರಿಯ ರೆಡ್ಡಿ ಸಹೋದರರ ನೇತೃತ್ವದಲ್ಲಿ ಅನೇಕ ಶಾಸಕರು ಬಂಡೆದ್ದು, ಹೈದರಾಬಾದ್‌ ಸೇರಿದ್ದರು. ಅಲ್ಲಿಂದ ಚೆನ್ನೈ, ಕೊಚ್ಚಿ ಇನ್ನಿತರ ನಗರಗಳಿಗೆ ಸುತ್ತಾಡಿದ್ದರು. 2009ರ ಸೆಪ್ಟೆಂಬರ್‌ ಕೊನೆ ಹಾಗೂ ಅಕ್ಟೋಬರ್‌ ಮೊದಲ ವಾರದಲ್ಲಿ ಉತ್ತರ ಕರ್ನಾಟಕದಲ್ಲಿ ಕಂಡರಿಯದ ಪ್ರವಾಹ ಸ್ಥಿತಿ ಉಂಟಾಗಿತ್ತು. ಆಗ ಈ ಭಾಗದ ಬಹುತೇಕ ಶಾಸಕರು ಹೈದರಾಬಾದ್‌ನಲ್ಲಿ ರೆಸಾರ್ಟ್‌ನಲ್ಲಿದ್ದರು. ನೆರೆಯಿಂದ ತೊಂದರೆಗೊಳಗಾಗಿರುವ ಕ್ಷೇತ್ರದ ಜನತೆಯ ನೋವಿಗೆ ಸ್ಪಂದಿಸಬೇಕು ಎಂದು ಅನೇಕ ಶಾಸಕರು ಬಯಸಿದ್ದರೂ, ಅವರು ಹೊರಬರಲಾದ ಸ್ಥಿತಿಯಲ್ಲಿ “ಬಂಧಿ’ಯಾಗಿದ್ದರು ಎಂದು ಆರೋಪಿಸಲಾಗಿತ್ತು.

ಬಿಜೆಪಿ ಸರ್ಕಾರದಲ್ಲೇ ನಡೆದ ಮತ್ತೂಂದು ಸುತ್ತಿನ ಬಂಡಾಯದ ವೇಳೆ ಸುಮಾರು 13 ಶಾಸಕರು ಗೋವಾ ಸೇರಿದ್ದರು. ಆಗ ಬಿಜೆಪಿ ಸರ್ಕಾರದಲ್ಲಿ ಪ್ರಭಾವಿ ಸಚಿವರಾಗಿದ್ದ ಜನಾರ್ದನ ರೆಡ್ಡಿ ಅವರು ಶಾಸಕರ ಮನವೊಲಿಕೆಗೆ ಗೋವಾಕ್ಕೆ ತೆರಳಿದ್ದರು. ಇವರು ಬರುವ ಸುಳಿವು ಅರಿತ ಶಾಸಕರು ಅಲ್ಲಿನ ರೆಸಾರ್ಟ್‌ನಲ್ಲಿನ ಹಿಂದಿನ ಬಾಗಿಲಿನಿಂದಲೇ ಬೇರೊಂದು ಕಡೆ ಸ್ಥಳಾಂತರಗೊಂಡಿದ್ದರು. ಶಾಸಕರನ್ನು ಕರೆದುಕೊಂಡೇ ಬರುವೆ ಎಂಬ ಆತ್ಮವಿಶ್ವಾಸ-ಉತ್ಸಾಹದಲ್ಲಿ ತೆರಳಿದ್ದ ಜನಾರ್ದನ ರೆಡ್ಡಿ ಬರಿಗೈನಲ್ಲಿ ವಾಪಸ್‌ ಬಂದಿದ್ದರು.

ಬಿ.ಎಸ್‌.ಯಡಿಯೂರಪ್ಪ 2011, ಆ.4ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದಾಗ, ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ಆಪ್ತ ಡಿ.ವಿ.ಸದಾನಂದಗೌಡ ಹೆಸರು ಸೂಚಿಸಿದ್ದರೆ, ಅಂದಿನ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್‌.ಈಶ್ವರಪ್ಪ ಜಗದೀಶ ಶೆಟ್ಟರ್‌ಗೆ ಪಟ್ಟು ಹಿಡಿದಿದ್ದರು. ಆಗಲೂ ಶಾಸಕರು ರೆಸಾರ್ಟ್‌ ವಾಸ ಕಂಡಿದ್ದರು. ಅಂತಿಮವಾಗಿ ಯಡಿಯೂರಪ್ಪ ಅವರ ಗುಂಪಿನ ಶಾಸಕರ ಸಂಖ್ಯೆ ಹೆಚ್ಚಳದಿಂದಾಗಿ ಡಿ.ವಿ.ಸದಾನಂದಗೌಡ ಅವರು 2011, ಆ.5ರಂದು ಸಿಎಂ ಆಗಿ ಅಧಿಕಾರ ವಹಿಸಿಕೊಂಡಿದ್ದರು.

ಒಂದು ವರ್ಷ ಕಳೆಯುವುದರೊಳಗಾಗಿ ಯಾರು ಪಟ್ಟು ಹಿಡಿದು ಸದಾನಂದಗೌಡರನ್ನು ಮುಖ್ಯಮಂತ್ರಿ ಮಾಡಿದ್ದರೋ ಅವರೇ ಸದಾನಂದಗೌಡರ ವಿರುದ್ಧ ಸಮರ ಸಾರಿದ್ದರು. ಅಂತಿಮವಾಗಿ 2012, ಜು.12ರಂದು ಜಗದೀಶ ಶೆಟ್ಟರ್‌, ಬಿಜೆಪಿ ಸರ್ಕಾರದ ಮೂರನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

ಬಿಜೆಪಿ ಆಡಳಿತದಲ್ಲಿ ಅಂದಿನ ರಾಜ್ಯಪಾಲ ಎಚ್‌.ಆರ್‌.ಭಾರದ್ವಾಜ್‌ ಅವರು ರಾಜ್ಯದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಕುರಿತು ಕೇಂದ್ರಕ್ಕೆ ವರದಿ ಸಲ್ಲಿಸಿದ್ದರು. ಕೇಂದ್ರದ ಯುಪಿಎ ಸರ್ಕಾರ ಕ್ರಮಕ್ಕೆ ಮುಂದಾಗಿದ್ದು, ಆಗ ಯಡಿಯೂರಪ್ಪ ನೇತೃತ್ವದ 105 ಶಾಸಕರು ಅಂದಿನ ರಾಷ್ಟ್ರಪತಿ ಪ್ರತಿಭಾ ಪಾಟೀಲ ಅವರ ಮುಂದೆ ಪೆರೇಡ್‌ ನಡೆಸಿದ್ದರು.

ಸ್ಪೀಕರ್‌ ಆಗಿದ್ದ ಬೋಪಯ್ಯ ಅವರು 11 ಬಿಜೆಪಿ ಭಿನ್ನಮತೀಯ ಶಾಸಕರು ಹಾಗೂ ಐವರು ಪಕ್ಷೇತರ ಶಾಸಕರನ್ನು ಅಮಾನತುಗೊಳಿಸಿದ್ದು, ಪ್ರಕರಣ ಸುಪ್ರೀಂಕೋರ್ಟ್‌ ಮೆಟ್ಟಿಲೇರಿತ್ತು. ನಂತರ, ಬಿಜೆಪಿ ಸರ್ಕಾರಕ್ಕೆ ನಮ್ಮ ಬೆಂಬಲವಿದೆ ಎಂದು 11 ಶಾಸಕರು ರಾಜ್ಯಪಾಲರಿಗೆ ಪತ್ರ ಸಲ್ಲಿಸಿದ್ದು, ಆಂತರಿಕ ಭಿನ್ನಾಭಿಪ್ರಾಯ, ಒಡಕಿನಿಂದಲೇ 2013ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಾರದೆ ಪತನಗೊಂಡಿದ್ದು ಇದೀಗ ಇತಿಹಾಸ.

ಪ್ರಸ್ತುತ ಬಂಡಾಯ ಭಿನ್ನವಾಗಿಲ್ಲ: ಪ್ರಸ್ತುತ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದಲ್ಲಿ ಈಗಾಗಲೇ 17 ಶಾಸಕರು ರಾಜೀನಾಮೆ ನೀಡಿದ್ದು, ಬಂಡಾಯ ಶಾಸಕರು ವಿಶೇಷ ವಿಮಾನದಲ್ಲಿ ಮುಂಬೈನಲ್ಲಿ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಗೋವಾ, ಪುಣೆಗೆ ವಾಸ್ತವ್ಯ ಬದಲಾಯಿಸಬೇಕೆಂಬ ಯತ್ನಗಳು ನಡೆದಿದ್ದವಾದರೂ, ಕೊನೆ ಕ್ಷಣದಲ್ಲಿ ಮುಂಬೈನಲ್ಲೇ ಉಳಿಯುವ ನಿಲುವು ತಾಳಲಾಯಿತು ಎನ್ನಲಾಗಿದೆ.

ಸಮ್ಮಿಶ್ರ ಸರ್ಕಾರದ ಪ್ರಭಾವಿ ಸಚಿವ ಡಿ.ಕೆ.ಶಿವಕುಮಾರ ಅವರು ಮುಂಬೈನಲ್ಲಿನ ಅತೃಪ್ತ ಶಾಸಕರ ಮನವೊಲಿಸಿ ಕರೆತರುವ ನಿಟ್ಟಿನಲ್ಲಿ ಮುಂಬೈಗೆ ತೆರಳಿದ್ದಾರೆ. ಆದರೆ, ಶಾಸಕರಿರುವ ಹೋಟೆಲ್‌ ಒಳಗೆ ಪ್ರವೇಶಕ್ಕೂ ಅವಕಾಶ ನೀಡದೆ ಗಂಟೆಗಟ್ಟಲೇ ಮಳೆಯಲ್ಲೂ ಗೇಟ್‌ ಹೊರಗೆ ನಿಲ್ಲುವಂತಾಯಿತು. ಡಿಕೆಶಿ ಶಿಕಾರಿಗೆ ಹೋಗಿದ್ದಾರೆ ಎಂದರೆ ಯಶಸ್ಸು ಖಚಿತ ಎಂಬ ಮಾತು ಈ ಪ್ರಕರಣದಲ್ಲಿ ಸುಳ್ಳಾಗಿಸುವ ಸ್ಥಿತಿ ನಿರ್ಮಾಣವಾಗುತ್ತಿದೆ.

ಕಳೆದ ವರ್ಷದ ಬರದ ಸ್ಥಿತಿ ಈ ಬಾರಿಯ ಮುಂಗಾರಿಗೂ ವಿಸ್ತರಿಸಿದಂತಿದೆ. ಮುಂಗಾರು ಮಳೆ ಕೊರತೆಯಿಂದಾಗಿ ಅನೇಕ ಜಿಲ್ಲೆಗಳಲ್ಲಿ ಬರ ಸ್ಥಿತಿ ಇದ್ದರೂ ಅನೇಕ ಶಾಸಕರು ಮುಂಬೈ ರೆಸಾರ್ಟ್‌ ವಾಸದಲ್ಲಿದ್ದಾರೆ. ಈ ಹಿಂದಿನಂತೆ ಈಗಲೂ ಅತೃಪ್ತ ಶಾಸಕರು “ಬಂಧಿ’ಯಾಗಿದ್ದಾರೆಂಬ ಆರೋಪ ಕೇಳಿ ಬರತೊಡಗಿದೆ.

ರಾಜ್ಯಪಾಲರ ವಿರುದ್ಧ ಹೋರಾಟ: ಹಿಂದೆ ಬಿಜೆಪಿ ಸರ್ಕಾರದ ವೇಳೆ ರಾಜ್ಯಪಾಲ ಎಚ್‌.ಆರ್‌.ಭಾರದ್ವಾಜ್‌ ಅವರು ಕಾಂಗ್ರೆಸ್‌ ಏಜೆಂಟರಂತೆ ವರ್ತಿಸುತ್ತಾರೆ ಎಂದು ಬಿಜೆಪಿ ಆರೋಪಿಸಿತ್ತು. ಇದೀಗ ಅದೇ ಆರೋಪವನ್ನು ರಾಜ್ಯಪಾಲ ವಜುಭಾಯಿ ವಾಲಾ ಅವರ ವಿರುದ್ಧ ಕಾಂಗ್ರೆಸ್‌ ಪ್ರಯೋಗಿಸುತ್ತಿದೆ. ಕಾಂಗ್ರೆಸ್‌-ಬಿಜೆಪಿ ನಾಯಕರು ರಾಜ್ಯಭವನದ ಎದುರು ಪ್ರತಿಭಟನೆ ನಡೆಸಿದರು. ಈ ಹಿಂದೆ ಬಿಜೆಪಿ ಶಾಸಕರು ಹೈದರಾಬಾದ್‌ ರೆಸಾರ್ಟ್‌ನಲ್ಲಿ ಇರುವಾಗ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹಲವು ಪರಿಹಾರ ಕಾರ್ಯದಲ್ಲಿ ತೊಡಗಿದ್ದರು.

ಇದೀಗ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು 14 ಶಾಸಕರು ರಾಜೀನಾಮೆ ನೀಡಿದ ನಂತರವೂ ಏನೂ ಆಗಿಯೇ ಇಲ್ಲ ಎನ್ನುವಂತೆ ಹಲವು ಸಭೆ, ಕಾರ್ಯಕ್ರಮದಲ್ಲಿ ತೊಡಗಿಕೊಂಡಿದ್ದಾರೆ. ಆದರೆ, ಹೆಚ್ಚುತ್ತಿರುವ ಶಾಸಕರ ರಾಜೀನಾಮೆಯ ವೇಗ ನೋಡುತ್ತಿದ್ದರೆ, ಸಮ್ಮಿಶ್ರ ಸರ್ಕಾರ ಉಳಿಯುವ ಸಾಧ್ಯತೆ ಅತ್ಯಂತ ಕಡಿಮೆ ಎನ್ನುವಂತೆ ಗೋಚರಿಸುತ್ತಿದೆ.

* ಅಮರೇಗೌಡ ಗೋನವಾರ

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.