ಗ್ರಾಮೀಣ ಕುಟುಂಬಗಳ ಬದುಕನ್ನು ಹಸನಾಗಿಸಿದ ಕ್ಷೀರೋದ್ಯಮ
Team Udayavani, Jun 1, 2020, 12:02 PM IST
ಸಾಂದರ್ಭಿಕ ಚಿತ್ರ
ದೇಹಕ್ಕೆ ಹಾಲು ಎಷ್ಟು ಮುಖ್ಯ? ಹಾಲು ಏಕೆ ಕುಡಿಯಬೇಕು? ಎಷ್ಟು ಪ್ರಮಾಣ ಹಾಗೂ ಯಾವ ಗುಣಮಟ್ಟದ ಹಾಲು ಕುಡಿಯಬೇಕು? ಈ ಎಲ್ಲ ವಿಷಯಗಳ ಬಗ್ಗೆ ಅರಿವು ಮೂಡಿಸಲೆಂದೇ ವಿಶ್ವಾದ್ಯಂತ ಜೂನ್ 1ರಂದು ವಿಶ್ವ ಹಾಲು ದಿನವನ್ನು ಆಚರಿಸಲಾಗುತ್ತದೆ. ಹಾಲಿನಲ್ಲಿ ಅತೀ ಹೆಚ್ಚು ಪೌಷ್ಟಿಕಾಂಶ ಇದ್ದು, ಮಕ್ಕಳಿಂದ ವಯಸ್ಕರವರೆಗೆ ಎಲ್ಲರ ಆರೋಗ್ಯ ಕಾಪಾಡುವುದರಲ್ಲಿ ಪ್ರಮುಖ ಪಾತ್ರವಹಿಸುತ್ತದೆ.
ಗ್ರಾಮೀಣ ಪ್ರದೇಶದ ಕ್ರಾಂತಿ
ಕ್ಷೀರೋದ್ಯಮದ ಕ್ರಾಂತಿ ನಡೆದಿರುವುದು ಗ್ರಾಮೀಣ ಪ್ರದೇಶದಿಂದ. ಒಂದು ಅಂದಾಜಿನ ಪ್ರಕಾರ ಪ್ರಸ್ತುತ ಹೈನುಗಾರಿಕೆಯಿಂದ ವಿಶ್ವದಲ್ಲೆಡೆ ನೂರು ಕೋಟಿ ಮಂದಿ ಬದುಕು ಕಟ್ಟಿಕೊಂಡಿದ್ದಾರೆ. ಭಾರತದ ಹೆಚ್ಚಿನ ಕಡೆ ಹಾಲು ಸೊಸೈಟಿಗಳು ಇವೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಹುತೇಕ ಎಲ್ಲ ಗ್ರಾಮಗಳನ್ನು ಕ್ಷೀರ ಕ್ರಾಂತಿ ತಲುಪಿದೆ. ಹೆಚ್ಚಿನ ಕಡೆ ಗ್ರಾಮಕ್ಕೊಂದು ಸೊಸೈಟಿಗಳಿವೆ. ಇದು ಗ್ರಾಮೀಣ ಪ್ರದೇಶದ ಆರ್ಥಿಕತೆಯ ಜೀವಾಳವೇ ಆಗಿದೆ. ಹಲವಾರು ಸೊಸೈಟಿಗಳು ಹೈನುಗಾರರಿಗೆ ಅತ್ಯುತ್ತಮ ಸೌಕರ್ಯಗಳನ್ನು ನೀಡುತ್ತಿರುವುದು ಕೂಡ ಶ್ಲಾಘನೀಯವೇ ಆಗಿದೆ.
ಇತಿಹಾಸ
ಮೊದಲ ಬಾರಿಗೆ 2001ರಲ್ಲಿ ವಿಶ್ವ ಹಾಲು ದಿನ ಆಚರಣೆ ಕುರಿತು ಆದೇಶ ಹೊರಡಿಸಲಾಯಿತು. ಅಂದಿನಿಂದ ಪ್ರತಿ ವರ್ಷ ಜೂನ್ 1ರಂದು ವಿಶ್ವ ಹಾಲು ದಿನ ಆಚರಿಸಲಾಗುತ್ತಿದ್ದು, ಹಾಲಿನ ಮಹತ್ವದ ಕುರಿತು ಪ್ರಚುರಪಡಿಸಲಾಗುತ್ತಿದೆ. ಇದೇ ದಿನ ಕ್ಷೀರೋದ್ಯಮದ ಸಾಧಕರನ್ನು ಗೌರವಿಸುವ ಕಾರ್ಯವೂ ನಡೆಯುತ್ತಿದೆ.
ಉತ್ತಮ ಉಪಕಸುಬು
ಕೆಲವರು ಹೈನುಗಾರಿಕೆಯನ್ನು ಉದ್ಯಮವಾಗಿ ನಡೆಸುತ್ತಿದ್ದರೆ, ಗ್ರಾಮೀಣ ಭಾಗದ ಹೆಚ್ಚಿನ ಕಡೆ ಇದೊಂದು ಉತ್ತಮ ಉಪಕಸುಬು. ಕೃಷಿ ಸಹಿತ ಇತರ ಕಾರ್ಯದೊಂದಿಗೆ ಅದಕ್ಕೆ ಪೂರಕವಾಗಿ ಹೈನುಗಾರಿಕೆ ನಡೆಸುವವರು ಬಹಳಷ್ಟು ಜನರಿದ್ದಾರೆ.
ಹಾಲು ಸೇವನೆ: ಪರಿಣಾಮಗಳು
ಹಲ್ಲು ಮತ್ತು ಮೂಳೆಗಳ ಬಲವರ್ಧನೆಗೆ, ಚೈತನ್ಯಕ್ಕೆ, ನರಗಳ ಕಾರ್ಯಕ್ಕೆ, ಬೆಳವಣಿಗೆಗೆ, ರೋಗ ನಿರೋಧಕ ಶಕ್ತಿಗೆ, ಕೆಂಪು ರಕ್ತಕಣಗಳನ್ನು ಹೆಚ್ಚಿಸುವಲ್ಲಿ ಶುದ್ಧ ಹಾಲು ಪ್ರಮುಖ ಪಾತ್ರ ವಹಿಸುತ್ತದೆ. ಅಲ್ಲದೇ, ಎಲ್ಲ ವಯಸ್ಸಿನವರ ದೇಹದ ಆರೋಗ್ಯಕ್ಕೆ ಹಾಲು ಮತ್ತು ಅದರ ಉತ್ಪನ್ನಗಳು ಸಹಕಾರಿ ಆಗಿವೆ. ಈ ಎಲ್ಲ ಅಂಶಗಳನ್ನು ಹಾಲು ದಿನಾಚರಣೆಯಲ್ಲಿ ಮನದಟ್ಟು ಮಾಡಿಕೊಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ
Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?
Odisha: ಗೋಪಾಲ್ ಪುರ್ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ
Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?
MUST WATCH
ಹೊಸ ಸೇರ್ಪಡೆ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ