ಮಣೂರು: ಇನ್ನೂ ಈಡೇರದ ಸೇತುವೆ ಬೇಡಿಕೆ
ದೊಡ್ಡಕುದ್ರು, ಅಜ್ಜಿಗದ್ದೆ ರೈತರಿಗೆ ಹೊಳೆ ದಾಟುವ ಸಂಕಷ್ಟ
Team Udayavani, Jun 26, 2020, 6:10 AM IST
ಕೋಟ: ಕೋಟ ಗ್ರಾ.ಪಂ. ವ್ಯಾಪ್ತಿಯ ಮಣೂರಿನಲ್ಲಿ ದೊಡ್ಡಕುದ್ರು ಹಾಗೂ ಅಜ್ಜಿಗದ್ದೆ ಎಂಬ ದ್ವೀಪದಂತಿರುವ ಎರಡು ಪ್ರದೇಶಗಳಿದ್ದು, ಇಲ್ಲಿ ಕೃಷಿ ಚಟುವಟಿಕೆ ನಡೆಸಲು ತುಂಬಿ ಹರಿಯುವ ಹೊಳೆಯನ್ನು ದಾಟಬೇಕಾಗಿದೆ.
ದೊಡ್ಡಕುದ್ರುವಿನಲ್ಲಿ ಸುಮಾರು 40 ಎಕ್ರೆ ಹಾಗೂ ಅಜ್ಜಿಗದ್ದೆ ಪ್ರದೇಶದಲ್ಲಿ 2 ಎಕ್ರೆಯಷ್ಟು ಕೃಷಿಭೂಮಿ ಇದೆ. ಇಲ್ಲಿ ಸೇತುವೆ ನಿರ್ಮಿಸುವಂತೆ ಹಲವು ವರ್ಷಗಳಿಂದ ಬೇಡಿಕೆ ಸಲ್ಲಿಸುತ್ತಿದ್ದರೂ ಸ್ಪಂದನೆ ಸಿಕ್ಕಿಲ್ಲ.
ಪ್ರತಿ ಮಳೆಗಾಲದಲ್ಲಿ ನಾಟಿ ಮಾಡುವಾಗ ಗೊಬ್ಬರ, ನೇಜಿ ಮುಂತಾದವುಗಳನ್ನು ತುಂಬಿ ಹರಿಯುವ ಹೊಳೆಯನ್ನು ದಾಟಿ ಸಾಗಿಸಬೇಕಾಗಿದೆ. ನೆರೆ ಸಂದರ್ಭ ನೀರಿನ ಸೆಳೆತವೂ ಜೋರಾಗಿರುತ್ತದೆ.
ಶಾಶ್ವತ ಪರಿಹಾರಕ್ಕೆ ಆಗ್ರಹ
ಲಭ್ಯವಿರುವ ಅನುದಾನದಲ್ಲಿ ಗ್ರಾ.ಪಂ. ಎರಡು ಕಡೆಗಳಲ್ಲಿ ಮೂರ್ನಾಲ್ಕು ಬಾರಿ ಮರದ ಸೇತುವೆ ನಿರ್ಮಿಸಿದ್ದು, ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದೆ. ಹೀಗಾಗಿ ಶಾಶ್ವತ ಸೇತುವೆ ನಿರ್ಮಿ ಸುವಂತೆ ಗ್ರಾಮ ಸಭೆ, ಶಾಸಕರು ಮತ್ತು ಸಚಿವರಿಗೆ ಮನವಿ ಸಲ್ಲಿಸ ಲಾಗಿತ್ತು. ಯೋಜನ ಪಟ್ಟಿ ಸಿದ್ಧಪಡಿಸಿ ನಬಾರ್ಡ್ಗೆ ಪ್ರಸ್ತಾವನೆ ಯನ್ನೂ ಕಳುಹಿಸಲಾಗಿತ್ತು. ಆದರೆ ಇದುವರೆಗೆ ಪ್ರಯೋಜ ನವಾಗಿಲ್ಲ. ಆದಷ್ಟು ಶೀಘ್ರ ಈ ಸಮಸ್ಯೆಗೆ ಶಾಶ್ವತ ಪರಿಹಾರ ಅಗತ್ಯ ಎನ್ನುವುದು ಸ್ಥಳೀಯರ ಮನವಿಯಾಗಿದೆ.
ಈ ಬಾರಿ ಸಮಸ್ಯೆ ಹೆಚ್ಚು
ಹೊಳೆಯಲ್ಲಿ ಹೂಳು ತುಂಬಿರು ವುದರಿಂದ ಹಾಗೂ ಮರಗಳು ತುಂಡಾಗಿ ಬಿದ್ದಿರುವುದರಿಂದ ನೀರಿನ ಹರಿವಿಗೆ ಸಮಸ್ಯೆಯಾಗಿದ್ದು, ಈ ಬಾರಿ ನೆರೆಯ ಪ್ರಮಾಣ ಮತ್ತಷ್ಟು ಹೆಚ್ಚಿದೆ.
ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದ್ದೇವೆ
ಈಗಾಗಲೇ ಸ್ಥಳ ಪರಿಶೀಲನೆ ನಡೆಸಲಾಗಿದೆ. ಹೊಳೆಯ ಹೂಳೆತ್ತುವ ಕಾಮಗಾರಿಯನ್ನು ಉದ್ಯೋಗ ಖಾತರಿ ಯೋಜನೆ ಮೂಲಕ ನಡೆಸಬಹುದು. ಆದರೆ ಸೇತುವೆಗೆ ಹೆಚ್ಚಿನ ಅನುದಾನ ಅಗತ್ಯ. ಹೀಗಾಗಿ ಮುಂದಿನ ಸಾಮಾನ್ಯ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಂಡು ಸಂಬಂಧಪಟ್ಟ ಇಲಾಖೆಗೆ ಕಳುಹಿಸಲಾಗುವುದು.
– ಸುರೇಶ್, ಪಿಡಿಒ ಕೋಟ ಗ್ರಾ.ಪಂ.
ಆತಂಕ ದೂರ ಮಾಡಿ
ಈ ಭಾಗದಲ್ಲಿ ಕೃಷಿ ಚಟುವಟಿಕೆ ನಡೆಸಲು ಸೇತುವೆ ಇಲ್ಲದೆ ಸಾಕಷ್ಟು ಸಮಸ್ಯೆಯಾಗುತ್ತಿವೆ. ಈ ಕುರಿತು ಹಲವಾರು ಬಾರಿ ಮನವಿ ಸಲ್ಲಿಸಲಾಗಿದೆ. ಕೂಡಲೇ ಕ್ರಮ ಕೈಗೊಂಡು ರೈತರ ಆತಂಕ ದೂರಮಾಡಬೇಕಿದೆ.
-ಪಾರ್ವತಿ ಹಂದೆ, ಕೃಷಿಕರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ